ಸಾರ್ವಜನಿಕ ಆಸ್ತಿ ಧ್ವಂಸ ಮಾಡುವವರು ಆತ್ಮವಿಮರ್ಶೆ ಮಾಡಲಿ
Team Udayavani, Dec 26, 2019, 6:40 AM IST
ಲಕ್ನೋ: “ಸಂವಿಧಾನದ 370ನೇ ಕಲಂ, ರಾಮಮಂದಿರ ವಿವಾದಗಳನ್ನು ಶಾಂತಿಯುತವಾಗಿ ಪರಿಹರಿಸಲಾಗಿದೆ. ಇನ್ನು, ಬಾಂಗ್ಲಾದೇಶ, ಅಫ್ಘಾನಿಸ್ಥಾನ, ಬಾಂಗ್ಲಾದೇಶಗಳಿಂದ ಬಂದ ನಿರಾಶ್ರಿತರಿಗೆ ಭಾರತದ ಪೌರತ್ವ ನೀಡಲು ಮುನ್ನುಡಿ ಬರೆಯಲಾಗಿದೆ. ಹೀಗೆ ಭಾರತದ 130 ಕೋಟಿ ಜನತೆಯ ಸಮಸ್ಯೆಗಳನ್ನು ನಿವಾರಿಸಲಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಹುಟ್ಟುಹಬ್ಬದ ಅಂಗವಾಗಿ ಬುಧವಾರ, ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ಬುಧವಾರ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಪೌರತ್ವ ಕಾಯ್ದೆ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಯನ್ನು ನಷ್ಟ ಮಾಡುವ ಶಕ್ತಿಗಳ ವಿರುದ್ಧ ಕಿಡಿಕಾರಿದ ಅವರು, ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಧ್ವಂಸ ಮಾಡುತ್ತಿರುವವರು ತಮ್ಮನ್ನು ತಾವು ಆತ್ಮಶೋಧನೆಗೆ ಒಡ್ಡಿಕೊಳ್ಳಬೇಕಿದೆ.
ಉತ್ತಮ ರಸ್ತೆಗಳು, ಉತ್ತಮ ಸಾರಿಗೆ ವ್ಯವಸ್ಥೆ ಹಾಗೂ ಉತ್ತಮ ನೈರ್ಮಲಿÂàಕರಣವನ್ನು ಹೊಂದುವುದು ನಮ್ಮ ಹಕ್ಕು. ಇದರ ಜತೆಗೆ ಶಿಕ್ಷಣ ಸಂಸ್ಥೆಗಳನ್ನು ಕಾಪಾಡುವುದು, ಶಿಕ್ಷಕರನ್ನು ಗೌರವಿಸುವುದೂ ನಮ್ಮ ಹಕ್ಕು ಎಂದು ಅವರು ಪ್ರತಿಪಾದಿಸಿದರು.
ವಾಜಪೇಯಿ ಪ್ರತಿಮೆ ಅನಾವರಣ
ಲಕ್ನೋದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಾಜಪೇಯಿಯವರ 25 ಅಡಿ ಎತ್ತರವುಳ್ಳ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಗೊಳಿಸಿದರು. ಈ ವಿಶ್ವವಿದ್ಯಾಲಯಕ್ಕಾಗಿ ಉತ್ತರ ಪ್ರದೇಶ ಸರಕಾರ 50 ಎಕರೆ ಜಮೀನನ್ನು ನೀಡಿದೆ. ಈ ಸಮಾರಂಭದಲ್ಲಿ, ಬಿಜೆಪಿ ಧುರೀಣ ಎಲ್.ಕೆ. ಆಡ್ವಾಣಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ವಾಜಪೇಯಿ ಕುಟುಂಬ ಸದಸ್ಯರು ಹಾಜರಿದ್ದರು. ವಾಜಪೇಯಿ ಅವರು ಸಂಸತ್ತಿನಲ್ಲಿ ಲಕ್ನೋವನ್ನು ಐದು ಬಾರಿ ಪ್ರತಿನಿಧಿಸಿದ್ದರು.
ಗಣ್ಯರಿಂದ ಪುಷ್ಪನಮನ
ಮಾಜಿ ಪ್ರಧಾನಿ ವಾಜಪೇಯಿಯವರ 95ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿರುವ ಅವರ ಸ್ಮಾರಕವಾದ “ಸದೈವ ಅಟಲ್’ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ವಾಜಪೇಯಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಧುರೀಣ ಎಲ್.ಕೆ. ಆಡ್ವಾಣಿ ಹಾಗೂ ವಾಜಪೇಯಿ ಕುಟುಂಬದ ಸದಸ್ಯರು ಸಹಿತ ಹಲವಾರು ಮಂದಿ ಪುಷ್ಪನಮನ ಸಲ್ಲಿಸಿದರು.
ಸುರಂಗಕ್ಕೆ ಅಟಲ್ ಹೆಸರು
ಹಿಮಾಚಲ ಪ್ರದೇಶದ ಪ್ರಸಿದ್ಧ ಪ್ರವಾಸಿ ತಾಣಗಳಾದ ಮಲಾಲಿಯಿಂದ ಕಾಶ್ಮೀರದ ಲೇಹ್ ಸರೋವರದ ನಡುವೆ ನಿರ್ಮಿಸಲಾಗುತ್ತಿರುವ 8.8 ಕಿ.ಮೀ. ಉದ್ದದ ರೋಹrಂಗ್ ಸುರಂಗ ಮಾರ್ಗಕ್ಕೆ ಅಟಲ್ ಬಿಹಾರಿ ವಾಜಪೇಯಿ ಹೆಸರಿಡಲಾಗಿದೆ. ನಾಮಕರಣ ನೆರವೇರಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಿಮಾಚಲ ಪ್ರದೇಶದ ಬಹು ದಿನಗಳ ಆಸೆಯಂತೆ ನಾಮಕರಣ ನೆರವೇರಿಸಲಾಗಿದೆ ಎಂದರು. ಸರ್ವ ಋತುವಿನ ಈ ಸುರಂಗ ಮಾರ್ಗವು, ಮನಾಲಿ- ಲೇಹ್ ನಡುವಿನ ಅಂತರವನ್ನು 46 ಕಿ.ಮೀ.ಗಳಷ್ಟು ಕಡಿಮೆ ಮಾಡಲಿದೆ. ಅಲ್ಲದೆ, ಸಮುದ್ರ ಮಟ್ಟದಿಂದ 9842.52 ಅಡಿ ಎತ್ತರದಲ್ಲಿ ನಿರ್ಮಾಣವಾಗುತ್ತಿರುವ ಇದು, ವಿಶ್ವದ ಅತೀ ಎತ್ತರದ ಸುರಂಗ ಮಾರ್ಗ ಎಂಬ ಹೆಗ್ಗಳಿಕೆಯನ್ನೂ ಪಡೆದಿದೆ. 2020ಕ್ಕೆ ಇದು ಲೋಕಾರ್ಪಣೆಗೊಳ್ಳುವ ನಿರೀಕ್ಷೆಯಿದೆ.
ಅಟಲ್ ಭೂಜಲ ಯೋಜನೆ ಉದ್ಘಾಟನೆ
ದೇಶದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಅಟಲ್ ಭೂಜಲ ಯೋಜನೆಗೆ ಪ್ರಧಾನಿ ಮೋದಿ ಬುಧವಾರ ಚಾಲನೆ ನೀಡಿದರು. ಅದಕ್ಕಾಗಿ ಒಟ್ಟು 6 ಸಾವಿರ ಕೋಟಿ ರೂ. ಮೀಸಲಾಗಿ ಇರಿಸಲಾಗಿದೆ. ಕರ್ನಾಟಕ ಸಹಿತ ಏಳು ರಾಜ್ಯಗಳ 78 ಜಿಲ್ಲೆಗಳ 8,300 ಹಳ್ಳಿಗಳಿಗೆ ಯೋಜನೆ ಲಾಭ ಸಿಗಲಿದೆ. ಗ್ರಾ.ಪಂ.ಗಳ ಮೂಲಕ ಅದನ್ನು ಅನುಷ್ಠಾನಗೊಳಿಸಲಾಗುತ್ತದೆ. ಪಂಚಾಯಿತಿ ಮಟ್ಟದಲ್ಲಿ ಅಂತರ್ಜಲ ಹೆಚ್ಚಿಸಲು ಪ್ರೋತ್ಸಾಹದಾಯಕ ಕ್ರಮ ಕೈಗೊಳ್ಳಲಾಗುತ್ತದೆ. ಅಂತರ್ಜಲ ಮಟ್ಟ ಏರಿಕೆ ಮಾಡುವ ನಿಟ್ಟಿನಲ್ಲಿ ಹಲವು ಯೋಜನೆ ಜಾರಿ ಮಾಡುವ ರಾಜ್ಯಗಳಿಗೆ ಪ್ರೋತ್ಸಾಹ, ನೀರಿನ ಬಳಕೆ ಮಾಡುವ, ಅಂತರ್ಜಲ ನಿರ್ವಹಣೆ ಮೇಲೆ ನಿಗಾ ಈ ಯೋಜನೆ ವ್ಯಾಪ್ತಿಯಲ್ಲಿ ಬರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ