ನೇತಾಜಿ ಕೊಡುಗೆ ಹತ್ತಿಕ್ಕುವ ಪ್ರಯತ್ನ ವಿಫ‌ಲ: ಮೋದಿ

ರಾಷ್ಟ್ರೀಯ ಸ್ಮಾರಕದ ಮಾದರಿ ಅನಾವರಣ

Team Udayavani, Jan 24, 2023, 7:00 AM IST

ನೇತಾಜಿ ಕೊಡುಗೆ ಹತ್ತಿಕ್ಕುವ ಪ್ರಯತ್ನ ವಿಫ‌ಲ: ಮೋದಿ

ಪೋರ್ಟ್‌ ಬ್ಲೇರ್‌: ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ನೇತಾಜಿ ಸುಭಾಶ್‌ಚಂದ್ರ ಬೋಸರ ಕೊಡುಗೆಗಳನ್ನು ಹತ್ತಿಕ್ಕಲು ಪ್ರಯತ್ನಿಸಲಾಯಿತು. ಆದರೆ ಇಂದು ಇಡೀ ದೇಶವೇ ನೇತಾಜಿ ಅವರ ಜನ್ಮದಿನ ವನ್ನು ಆಚರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೇತಾಜಿ ಸುಭಾಶ್‌ಚಂದ್ರ ಬೋಸರ ಜನ್ಮ ಜಯಂತಿಯ ಅಂಗವಾಗಿ ಅಂಡ ಮಾನ್‌ ದ್ವೀಪದಲ್ಲಿ ಅವರ ಗೌರವಾರ್ಥ ನಿರ್ಮಿಸಲು ಉದ್ದೇಶಿಸಿರುವ ರಾಷ್ಟ್ರೀಯ ಸ್ಮಾರಕದ ಮಾದರಿಯನ್ನು ವರ್ಚುವಲ್‌ ಮೂಲಕ ಅನಾವರಣಗೊಳಿಸಿ ಅವರು ಮಾತನಾಡಿದರು. ಇದೇ ವೇಳೆ ಅಂಡಮಾನ್‌ ಮತ್ತು ನಿಕೋಬಾರ್‌ನ 21 ಅನಾಮಧೇಯ ದ್ವೀಪಗಳಿಗೆ ಪರಮವೀರ ಚಕ್ರ ಪಶಸ್ತಿ ಪಡೆದ ವೀರ ಯೋಧರ ಹೆಸರುಗಳನ್ನು ನಾಮಕರಣಗೊಳಿಸಿದರು.

“ಬ್ರಿಟನ್‌ ಸಾಮ್ರಾಜ್ಯಶಾಹಿ ಸರಕಾರಕ್ಕೆ ನೇತಾಜಿ ಸಿಂಹಸ್ವಪ್ನದಂತೆ ಕಾಡಿದರು. ಭಾರತದ ಸ್ವಾತಂತ್ರ್ಯಕ್ಕೆ ಅವರ ಕೊಡುಗೆ ಅಪಾರ. ಅವರನ್ನು ಸದಾ ಭಾರತೀಯರು ನೆನಪಿಸಿಕೊಳ್ಳುತ್ತಾರೆ. ಅವರ ವಿಚಾರಗಳಿಂದ ನಾನು ಆಳವಾಗಿ ಪ್ರಭಾವಿತನಾಗಿದ್ದೇನೆ,’ ಎಂದು ಪ್ರಧಾನಿ ಮೋದಿ ಹೇಳಿದರು.

“ಅಂಡಮಾನ್‌ ದ್ವೀಪದಲ್ಲಿ 1943ರ ಡಿ.30ರಂದು ಮೊದಲ ಬಾರಿಗೆ ಭಾರತದ ರಾಷ್ಟ್ರ ಧ್ವಜವನ್ನು ಬೋಸರು ಹಾರಿಸಿದರು. ನೇತಾಜಿ ಅವರ ಕುರಿತ ರಹಸ್ಯ ಕಡತಗಳನ್ನು ಸಾರ್ವಜನಿಕಗೊಳಿಸುವಂತೆ ಬಹು ಕಾಲದ ಬೇಡಿಕೆಯನ್ನು ಕೇಂದ್ರ ಈಡೇರಿಸಿದೆ. ಭಾರತಕ್ಕೆ ನೇತಾಜಿ ಅವರು ಮಾಡಿರುವ ತ್ಯಾಗದ ಗೌರವಾರ್ಥವಾಗಿ ರಾಷ್ಟ್ರೀಯ ಸ್ಮಾ ರಕವನ್ನು ನಿರ್ಮಿಸಲಾ ಗುತ್ತಿದೆ,’ ಎಂದರು.

ರಾಷ್ಟ್ರೀಯ ಸ್ಮಾರಕವು ಮ್ಯೂಸಿಯಂ, ಕೇಬಲ್‌ ಕಾರ್‌ ರೋಪ್‌ ವೇ, ಲೇಸರ್‌ ಮತ್ತು ಸೌಂಡ್‌ ಶೋ, ಐತಿಹಾಸಿಕ ಕಟ್ಟಡ ಗಳು ಮತ್ತು ಥೀಮ್‌ ಆಧಾರಿತ ಮಕ್ಕಳ ಅಮ್ಯೂಸ್‌ಮೆಂಟ್‌ ಪಾರ್ಕ್‌ ಒಳ ಗೊಂಡಿದೆ. 21 ದ್ವೀಪಗ ಳಿಗೆ ಪರಮವೀರ ಚಕ್ರ ಪಶಸ್ತಿ ಪಡೆದ ವೀರ ಯೋಧರ ಹೆಸರಗಳನ್ನು ನಾಮಕರಣ ಮಾಡಿ ರುವು ದಕ್ಕೆ ಬಾಲಿವುಡ್‌ ನಟರಾದ ಅಜಯ್‌ ದೇವ ಗನ್‌, ಸುನಿಲ್‌ ಶೆಟ್ಟಿ, ಅಕ್ಷಯ ಕುಮಾರ್‌, ಸಿದಾರ್ಥ್ ಮಲ್ಹೋತ್ರಾ ಸೇರಿದಂತೆ ಅನೇಕ ಗಣ್ಯರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಭಾರತದ ಸ್ವಾತಂತ್ರ್ಯಕ್ಕೆ ಸುಭಾಶ್‌ಚಂದ್ರ
ಬೋಸರ ಕೊಡುಗೆಗಳನ್ನು ಮರೆಯಲು ಸಾಧ್ಯವೇ ಇಲ್ಲ. ಅವರ ಹೆಸರನ್ನು ಮೂಲೆಗುಂಪು ಮಾಡಲು ಯತ್ನ ಗಳು ನಡೆಯಿತು. ಆದರೆ ಪ್ರಧಾನಿ ಮೋದಿ ನೇತೃತ್ವದ ಸರಕಾರ ನೇತಾಜಿ ಅವರ ಸ್ಮರಣೆಗೆ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ.
– ಅಮಿತ್‌ ಶಾ, ಕೇಂದ್ರ ಗೃಹ ಸಚಿವ

ಟಾಪ್ ನ್ಯೂಸ್

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.