ಯೋಧರ ಜತೆ ಪ್ರಧಾನಿ ನರೇಂದ್ರ ಮೋದಿ ಹಬ್ಬ


Team Udayavani, Nov 8, 2018, 6:00 AM IST

pti1172018000027b.jpg

ನವದೆಹಲಿ: ಪ್ರತಿ ವರ್ಷದಂತೆ ಈ ಬಾರಿಯ ದೀಪಾವಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೈನಿಕರೊಂದಿಗೆ ಆಚರಿಸಿದರು. ಕಳೆದ ವರ್ಷ ತಮ್ಮಿಂದ ಉದ್ಘಾಟನೆಗೊಂಡಿದ್ದ ಉತ್ತರಾಖಂಡದ ಕೇದಾರನಾಥದಲ್ಲಿ ನಿರ್ಮಾಣವಾಗುತ್ತಿರುವ ಕೇದಾರಪುರಿಯ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಲು ತೆರಳಿದ್ದ ಮೋದಿ, ಮಾರ್ಗ ಮಧ್ಯೆ, ಭಾರತ-ಚೀನಾ ಗಡಿಯಲ್ಲಿರುವ ಹರ್ಷಿಲ್‌ ಪ್ರಾಂತ್ಯದಲ್ಲಿಳಿದು ಸುಮಾರು 1.15 ಗಂಟೆ ಕಾಲ ಯೋಧರೊಂದಿಗೆ ಕಳೆದರು. ಇದೇ ವೇಳೆ, ಈ ದೀಪಾವಳಿ ನಿಮಗೆ (ಸೈನಿಕರಿಗೆ) ಸಂತೋಷ, ಆರೋಗ್ಯ, ಸಮೃದ್ಧಿಯನ್ನು ತರಲಿ ಎಂದು ಅವರು ಹಾರೈಸಿದರು.

ಯೋಧರೊಂದಿಗೆ ಆಚರಣೆ
“”ನೀವು ಭಾರತದ ಯಾವುದೋ ಒಂದು ಮೂಲೆಯನ್ನು ಕಾಯುತ್ತಿಲ್ಲ. ಗಡಿ ಕಾಯುವ ಮೂಲಕ 125 ಕೋಟಿ ಭಾರತೀಯರನ್ನು ಹಾಗೂ ಅವರ ಜೀವನವನ್ನು ನೀವು ಸಂರಕ್ಷಿಸುತ್ತಿದ್ದೀರಿ” ಎಂದು ನುಡಿದರು. ಸೈನಿಕರು ಹಚ್ಚಿಟ್ಟ ಹಣತೆಗಳನ್ನು ಉಲ್ಲೇಖೀಸಿದ ಮೋದಿ, ದೀಪದ ಬೆಳಕು ಸುತ್ತಲಿನ ವಿಶ್ವದಲ್ಲಿ ಹರಡುವಂತೆ ನೀವು (ಸೈನಿಕರು) ಎಲ್ಲೆಡೆಯಲ್ಲೂ ನಿರ್ಭೀತಿಯನ್ನು ಪಸರಿಸುತ್ತೀರಿ ಎಂದು ಹೊಗಳಿದರು. ಅಧಿಕಾರಕ್ಕೆ ಬಂದಾಗಿನಿಂದ ಪ್ರತಿ ವರ್ಷ ದೀಪಾವಳಿಯಲ್ಲಿ ತಾವು ಸೈನಿಕರೊಂದಿಗೆ ಕಳೆದ ಕ್ಷಣಗಳನ್ನು ಮೆಲುಕು ಹಾಕಿದರು.

ಇದೇ ವೇಳೆ, ಸೈನಿಕರ ಅಗತ್ಯತೆಗಳ ಬಗ್ಗೆ ತಾವು ಗಂಭೀರ ಚಿಂತನೆ ನಡೆಸುವುದಾಗಿ ತಿಳಿಸಿದ ಅವರು, “”ಅನೇಕ ಸರ್ಕಾರಗಳು ಬಂದವು, ಹೋದವು. ಆದರೆ, ತಾವು ಸೈನಿಕರ ಬೇಕು, ಬೇಡಗಳಿಗೆ ಹೊಂದಿರುವ ಗಂಭೀರ ಕಾಳಜಿಯಿಂದ “ಏಕ ಶ್ರೇಣಿ, ಏಕ ಪಿಂಚಣಿ’ (ಒಆರ್‌ಒಪಿ) ಯೋಜನೆ ಜಾರಿಗೆ ಬಂತು ಎಂದರು. ಈ ಯೋಜನೆಗೆ ಅಗತ್ಯವಿದ್ದ 12,000 ಕೋಟಿ ರೂ.ಗಳನ್ನು ನೀಡುವ ಬಗ್ಗೆ ಯಾವುದೇ ಅಳುಕಿಲ್ಲದೆ ನಿರ್ಧಾರ ಕೈಗೊಳ್ಳಲಾಯಿತು. ಯೋಜನೆ ಜಾರಿಗೆ ಬಂದಾಗಿನಿಂದ ಈವರೆಗೆ 11,000 ಕೋಟಿ ರೂ. ಹಣವು ಯೋಧರಿಗೆ ಸಂದಾಯವಾಗಿದೆ ಎಂದು ಹೇಳಲು ಹೆಮ್ಮೆಯಾಗುತ್ತಿದೆ” ಎಂದರು.

ಶಿಸ್ತು, ಕ್ಷಮತೆಯ ವಿಚಾರದಲ್ಲಿ ವಿಶ್ವದಲ್ಲೇ ಹೆಸರುವಾಸಿಯಾಗಿರುವ ಭಾರತೀಯ ಸೈನಿಕರ ಕಾರ್ಯತತ್ಪರತೆಯನ್ನು ಹೆಚ್ಚಿಸಲು ಸೈನ್ಯದ ಶಸ್ತ್ರಾಸ್ತ್ರಗಳನ್ನು ಆಧುನಿಕರಣಗೊಳಿಸುವ ಕೆಲಸಕ್ಕೆ ಕೈ ಹಾಕಲಾಗಿದೆ ಎಂದೂ  ವಿವರಿಸಿದರು. ಸೈನಿಕರೊಂದಿಗಿನ ಮಾತುಕತೆಯ ನಂತರ, ಮೋದಿ ಅವರು ಹರ್ಷಿಲ್‌ನಲ್ಲಿ ಹರಿಯುವ ಗಂಗಾ ನದಿಯ ಉಪನದಿಯಾದ ಬಾಗೀರಥಿಗೆ ಪೂಜೆ ಸಲ್ಲಿಸಿ, ನದಿಯ ಪಕ್ಕದ ಬಗೋರಿ ಎಂಬ ಹಳ್ಳಿಯ ಜನರನ್ನು ಭೇಟಿಯಾದರು.

ಕೇದಾರಪುರಿ ವೀಕ್ಷಣೆ
2013ರ ಮಹಾ ಜಲಪ್ರಳಯದಿಂದಾಗಿ ನಾಶವಾಗಿದ್ದ ಕೇದಾರನಾಥ ಪ್ರಾಂತ್ಯದಲ್ಲಿ ಮರುನಿರ್ಮಾಣವಾಗುತ್ತಿರುವ ಕೇದಾರಪುರಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಇದಕ್ಕೂ ಮೊದಲು, ಕೇದಾರನಾಥ ದೇಗುಲಕ್ಕೆ ತೆರಳಿದ ಮೋದಿ ಗರ್ಭಗುಡಿಯಲ್ಲಿ ಸುಮಾರು ಅರ್ಧಗಂಟೆಗಳ ಕಾಲ ವಿವಿಧ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದರು. ಪ್ರಧಾನ ಅರ್ಚಕರಾದ ಟಿ. ಗಂಗಾಧರ ಲಿಂಗ್‌ ಹಾಗೂ ಮೋದಿಯವರ ತೀರ್ಥ ಪುರೋಹಿತರಾದ ಪ್ರವೀಣ್‌ ತಿವಾರಿ ನೇತೃತ್ವದಲ್ಲಿ ನಡೆದ ರುದ್ರಾಭಿಷೇಕದಲ್ಲಿ ಭಾಗಿಯಾಗಿದ್ದರು. ಪೂಜೆಯ ನಂತರ ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿದ ಅವರು, ಸುತ್ತಲಿನ ಹಿಮಚ್ಛಾದಿತ ಬೆಟ್ಟ ಗುಡ್ಡಗಳ ಸೌಂದರ್ಯವನ್ನು ಶ್ಲಾ ಸಿದರು. ಆನಂತರ, ಫೋಟೋ ಗ್ಯಾಲರಿ ವೀಕ್ಷಿಸಿದರು.

ರಕ್ಷಣಾ ಸಚಿವರ ಆಚರಣೆ:
ಅರುಣಾಚಲ ಪ್ರದೇಶದ ಬಳಿಯಿರುವ ಭಾರತ-ಚೀನಾ ಗಡಿ ಪ್ರದೇಶದ ರೋಚಮ್‌ ಹಾಗೂ ಹಯುಲಿಯಾಂಗ್‌ ಸೇನಾ ನೆಲೆಗಳಿಗೆ ಭೇಟಿ ನೀಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಅಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು.

ವಿಶ್ವಸಂಸ್ಥೆಗೆ ಭಾರತ ಧನ್ಯವಾದ
ಈ ಬಾರಿ, ದೀಪಾವಳಿ ಪ್ರಯುಕ್ತ ತನ್ನ ಲಾಂಛನದಡಿ ವಿಶೇಷ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿರುವ ವಿಶ್ವಸಂಸ್ಥೆಗೆ ಭಾರತ ಧನ್ಯವಾದ ಅರ್ಪಿಸಿದೆ. ಒಂದು ಹಾಳೆಯಲ್ಲಿ 20 ಚೀಟಿಗಳಿದ್ದು, ಇವುಗಳ ಬೆಲೆ ರೂ. 83. ಇದೇ ವೇಳೆ, ದಕ್ಷಿಣ ಲಂಡನ್‌ನ ಕ್ರೊಯxನ್‌ ಉಪನಗರದಲ್ಲಿ ಬುಧವಾರ ದೀಪಾವಳಿ ಪ್ರಯುಕ್ತ ಕಾಳಿ ಪೂಜೆ ನಡೆಸಲಾಯಿತು.

ಇಸ್ರೇಲ್‌ ಪ್ರಧಾನಿ ಶುಭಾಶಯ
ಹಬ್ಬದ ಹಿಂದಿನ ದಿನ ರಾತ್ರಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು, ಟ್ವಿಟರ್‌ನಲ್ಲಿ ಪ್ರಧಾನಿ ಮೋದಿಯವರಿಗೆ ಹಿಂದಿ ಭಾಷೆಯಲ್ಲಿ ದೀಪಾವಳಿ ಶುಭಾಶಯ ಕೋರಿದ್ದು ವಿಶೇಷವಾಗಿತ್ತು. “ನನ್ನ ಸ್ನೇಹಿತ ಮೋದಿಯವರಿಗೆ ದೀಪಾವಳಿ ಶುಭಾಶಯ ಸಲ್ಲಿಸಲು ಬಯಸುತ್ತೇನೆ. ಬೆಳಕಿನ ಹಬ್ಬವು ನಿಮಗೆ (ಮೋದಿಯವರಿಗೆ) ಸುಖ, ಸಮೃದ್ಧಿ ತರಲಿ’ ಎಂದು ಹಾರೈಸಿದ್ದರು. ಇದಕ್ಕೆ, ಹೀಬ್ರೂ ಭಾಷೆಯಲ್ಲಿ ಪ್ರತಿಕ್ರಿಯಿಸಿದ್ದ ಮೋದಿ, “ನನ್ನ ಸ್ನೇಹಿತ ಬಿಬಿ, ದೀಪಾವಳಿ ಶುಭಾಶಯಕ್ಕಾಗಿ ಧನ್ಯವಾದ’ ಎಂದಿದ್ದರು. ಸೌದಿ ಅರೇಬಿಯಾ, ಪಾಕಿಸ್ತಾನ ಸೇರಿದಂತೆ ಹಲವು ದೇಶಗಳ ನಾಯಕರು ಭಾರತೀಯರಿಗೆ ದೀಪಾವಳಿಯ ಶುಭಾಶಯ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.