ಮೋದಿ ನಾಮಪತ್ರಕ್ಕೆ ‘ರಿಯಲ್ ಚೌಕಿದಾರ್‌’ ಅನುಮೋದನೆ !

ಮಣಿಕರ್ಣಿಕಾ ಘಾಟ್‌ ನ ಈ ಕಾವಲುಗಾರ ಪ್ರಧಾನಿ ನಾಮಪತ್ರದ ಸೂಚಕರಲ್ಲೊಬ್ಬ!

Team Udayavani, Apr 26, 2019, 1:19 PM IST

Modi-Nomination-Chowkidar

ವಾರಣಾಸಿ: ‘ನಾನು ಪ್ರಧಾನಮಂತ್ರಿಯಲ್ಲ ನಿಮ್ಮ ಪ್ರಧಾನ ಸೇವಕ’ ಮತ್ತು ‘ನಾನು ಈ ದೇಶದ ಚೌಕಿದಾರ’ ಎಂದು ತನ್ನನ್ನು ತಾನು ಬಣ್ಣಿಸಿಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ನಾಮಪತ್ರ ಸಲ್ಲಿಕೆ ವೇಳೆ ನಿಜವಾದ ಚೌಕಿದಾರರೊಬ್ಬರನ್ನು ತಮ್ಮ ನಾಮಪತ್ರಕ್ಕೆ ಸೂಚಕರನ್ನಾಗಿ ಆಯ್ಕೆಮಾಡಿಕೊಂಡಿದ್ದು ವಿಶೇಷವಾಗಿತ್ತು.

ವಾರಣಾಸಿ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಶುಕ್ರವಾರದಂದು ಇಲ್ಲಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಸೂಚಕರಲ್ಲಿ ಒಬ್ಬರಾಗಿರುವ ಪ್ರೊಫೆಸರ್‌ ಅನ್ನಪೂರ್ಣ ಅವರ ಕಾಲಿಗೆ ಎರಗಿ ಬಳಿಕ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಅನ್ನಪೂರ್ಣ ಅವರು ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ ಸಂಸ್ಥಾಪಕ ಸಮಾಜ ಸುಧಾರಕ ಮದನ ಮೋಹನ ಮಾಳವೀಯ ಅವರ ಮೊಮ್ಮಗಳಾಗಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿರುವವರಲ್ಲಿ ಒಬ್ಬ ರಿಯಲ್‌ ಚೌಕಿದಾರ ಸಹ ಸೇರಿದ್ದಾರೆ ಎನ್ನುವುದೇ ವಿಶೇಷ. ಇಲ್ಲಿನ ಮಣಿಕರ್ಣಿಕಾ ಘಾಟ್‌ ನಲ್ಲಿ ಕಾವಲುಗಾರರಾಗಿರುವ ಜಗದೀಶ್‌ ಚೌಧರಿ ಎಂಬವರೇ ಈ ರಿಯಲ್‌ ಚೌಕಿದಾರರಾಗಿದ್ದು, ಮೋದಿ ಅವರ ನಾಮಪತ್ರದ ಸೂಚಕರಲ್ಲಿ ಜಗದೀಶ್‌ ಅವರೂ ಕೂಡ ಒಬ್ಬರಾಗಿದ್ದಾರೆ.

ಮೋದಿ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿರುವ ಇನ್ನಿಬ್ಬರಲ್ಲಿ ರಮಾಶಂಕರ್‌ ಪಟೇಲ್‌ ಎನ್ನುವವರು ಕೃಷಿ ವಿಜ್ಞಾನಿಯಾಗಿದ್ದರೆ ಸುಭಾಷ್‌ ಚಂದ್ರ ಗುಪ್ತಾ ಎಂಬವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿದ್ದಾರೆ.

ಗುರುವಾರ ವಾರಣಾಸಿಯುದ್ದಕ್ಕೂ ಭರ್ಜರಿ ರೋಡ್‌ ಶೋ ನಡೆಸಿ ಬಳಿಕ ಗಂಗಾರತಿಯಲ್ಲಿ ಭಾಗವಹಿಸಿ ಗಮನಸೆಳೆದಿದ್ದ ಮೋದಿ ಇಂದು ತಮ್ಮ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿಯೂ ವಿಶೇಷತೆಯನ್ನು ಮೆರೆಯುವ ಮೂಲಕ ಗಮನಸೆಳೆದಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ‘ಕಾಶಿಯ ಕೊತ್ವಾಲ’ ಎಂದೇ ಹೆಸರುವಾಸಿಯಾಗಿರುವ ವಾರಣಾಸಿಯಲ್ಲಿರುವ ಪುರಾಣ ಪ್ರಸಿದ್ಧ ಕಾಲಭೈರವೇಶ್ವರನ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಮತ್ತು ಪೂಜೆಯನ್ನು ಸಲ್ಲಿಸಿದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.