ಕೇಂದ್ರ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ
Team Udayavani, Sep 13, 2017, 7:20 AM IST
ನವದೆಹಲಿ: ದಸರಾ ಸಂಭ್ರಮಕ್ಕೆ ಮೊದಲೇ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. 50 ಲಕ್ಷ ಸರ್ಕಾರಿ ನೌಕರರು ಹಾಗೂ 61 ಲಕ್ಷ ಪಿಂಚಣಿದಾರರ ತುಟ್ಟಿಭತ್ಯೆ ಹಾಗೂ ತುಟ್ಟಿಭತ್ಯೆ ಪರಿಹಾರವನ್ನು ಶೇ.1ರಷ್ಟು ಹಾಗೂ ಶೇ.5ವರೆಗೆ ಹೆಚ್ಚಿಸಿ ಕೇಂದ್ರ ಸಚಿವ ಸಂಪುಟ ಮಂಗಳವಾರ ನಿರ್ಣಯ ಕೈಗೊಂಡಿದೆ.
ಸಚಿವ ಸಂಪುಟ ಪುನಾರಚನೆ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಒಟ್ಟು 1.11 ಕೋಟಿ ಸರ್ಕಾರಿ ನೌಕರರು ಇದರ ಪ್ರಯೋಜನ ಪಡೆಯಲಿದ್ದಾರೆ. ದಿನಬಳಕೆ ವಸ್ತುಗಳ ದರ ಹೆಚ್ಚಳಕೆಕ ಅನುಗುಣವಾಗಿ ಈ ಹಿಂದೆ ಶೇ.4ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.5ಕ್ಕೆ ಹೆಚ್ಚಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಹೊಸ ದರ ಇದೇ ಜು.1ರಿಂದ ಅನ್ವಯವಾಗಲಿದೆ. ಈ ಮೂಲಕ ಸರ್ಕಾರಕ್ಕೆ ವಾರ್ಷಿಕ 3,068 ಕೋಟಿ ಹಾಗೂ 2017-18ನೇ ಸಾಲಿನಲ್ಲಿ ಸುಮಾರು 2,045 ಕೋಟಿ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ.
ಇತ್ತೀಚೆಗಷ್ಟೇ ರಕ್ಷಣಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಿರ್ಮಲಾ ಸೀತಾರಾಮನ್, ಪ್ರಧಾನಿ ನೇತೃತ್ವದ ರಕ್ಷಣೆಗೆ ಸಂಬಂಧಿಸಿದ ಸಂಪುಟ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ವರೊಂದಿಗೆ ರೈಲ್ವೆ ಸಚಿವ ಪಿಯೂಶ್ ಘೋಯಲ್ ಹಾಗೂ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರೂ ಪ್ರಮುಖ ಸಮಿತಿಗಳಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಗ್ರಾಚುಟಿ ಮಿತಿ ದುಪ್ಪಟ್ಟು
ಇದೇ ವೇಳೆ ಗ್ರಾಚುಟಿ ಮಸೂದೆ ತಿದ್ದುಪಡಿಯನ್ನು ಅಂಗೀಕರಿಸಿರುವ ಸಂಪುಟ, ತೆರಿಗೆ ರಹಿತ ಗ್ರಾಚುಟಿ ಮಿತಿಯನ್ನು ದುಪ್ಪಟ್ಟು ಮಾಡಿ, 20 ಲಕ್ಷ ರೂ.ಗೆ ಹೆಚ್ಚಿಸಿದೆ. ಈ ತಿದ್ದುಪಡಿ ಪ್ರಕಾರ ಸಾರ್ವಜನಿಕ ಹಾಗೂ ಖಾಸಗಿ ವಲಯ ಮತ್ತು ಸರ್ಕಾರಿ ಸ್ವಾಮ್ಯದ ಸ್ವಾಯತ್ತ ಸಂಸ್ಥೆಗಳ, ಪಿಂಚಣಿ ನಿಯಮಗಳ ವ್ಯಾಪ್ತಿಗೆ ಒಳಪಡದ ನೌಕರರ ತೆರಿಗೆ ರಹಿತ ಗ್ರಾಚುಟಿಯ ಗರಿಷ್ಠ ಮಿತಿ 20 ಲಕ್ಷ ರೂ. ಆಗಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್