ನಬಾರ್ಡ್ ಸಹಯೋಗದೊಂದಿಗೆ ಜಮ್ಮು-ಕಾಶ್ಮೀರ, ಲಢಾಕ್ ಭಾಗದ ರೈತರಿಗೆ ಕೇಂದ್ರದ ನೆರವು
ನೂತನ ಕೇಂದ್ರಾಡಳಿತ ಪ್ರದೇಶಗಳ ರೈತರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭಯ
Team Udayavani, Nov 12, 2019, 7:37 PM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಕೇಸರಿ, ಪೀಚ್ ಹಣ್ಣುಗಳು ಮತ್ತು ಅಕ್ರೋಡು (ವಾಲ್ ನಟ್) ಹಣ್ಣುಗಳನ್ನು ಬೆಳೆಯುವ ರೈತರಿಗೆ ನಬಾರ್ಡ್ ಬ್ಯಾಂಕಿನ ಸಹಯೋಗದೊಂದಿಗೆ ಸಹಾಯ ಹಸ್ತವನ್ನು ಚಾಚಲು ಕೇಂದ್ರ ಸರಕಾರ ಇದೀಗ ಸಿದ್ಧವಾಗಿದೆ.
ಜಮ್ಮು ಕಾಶ್ಮೀರ ಭಾಗದಲ್ಲಿ ದೇಶದಲ್ಲೇ ಅಧಿಕ ಪ್ರಮಾಣದಲ್ಲಿ ಈ ಕೇಸರಿ, ಪೀಚ್ ಹಣ್ಣುಗಳು ಮತ್ತು ಅಕ್ರೋಡನ್ನು ಬೆಳೆಯಲಾಗುತ್ತದೆ. ಈ ಹಿಂದೆ ಕೇಂದ್ರ ಸರಕಾರವು ಇಲ್ಲಿನ ರೈತರು ಬೆಳೆಯುವ ಸೇಬು ಹಣ್ಣುಗಳನ್ನು ನೇರವಾಗಿ ತಾನೇ ಖರಿದಿಸಲು ಪ್ರಾರಂಭಿಸಿತ್ತು.
ಈ ಎಲ್ಲಾ ಬೆಳೆಗಳನ್ನು ಬೆಳೆಯುವ ಜಮ್ಮು ಕಾಶ್ಮೀರ ಭಾಗದ ರೈತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಅಧೀನದಲ್ಲಿರುವ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿಗೆ (ನಬಾರ್ಡ್) ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. ನವದೆಹಲಿಯಲ್ಲಿ ನಡೆಯುತ್ತಿರುವ ಗ್ರಾಮೀಣ ಮತ್ತು ಕೃಷಿ ಆರ್ಥಿಕ ನೆರವು ಎಂಬ ವಿಚಾರಕ್ಕೆ ಸಂಬಂಧಿಸಿದ ಜಾಗತಿಕ ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು.
ಜಮ್ಮು ಕಾಶ್ಮೀರದ ಜೊತೆಗೆ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಇನ್ನೊಂದು ಕೇಂದ್ರಾಡಳಿತ ಪ್ರದೇಶ ಲಢಾಕ್ ನಲ್ಲಿ ಸೌರಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲೂ ಸಹ ಕೇಂದ್ರ ಸರಕಾರ ಯೋಚಿಸಿದೆ ಎಂದು ಸೀತಾರಾಮನ್ ಅವರು ತಿಳಿಸಿದರು.
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಈ ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಹಣಕಾಸು ಸಂಸ್ಥೆಗಳ ಸಹಯೋಗದೊಂದಿಗೆ ಯಾವ ರೀತಿಯ ನೆರವನ್ನು ನೀಡಬಹುದು ಎಂಬುದನ್ನು ಪರಾಮರ್ಶಿಸುವ ಉದ್ದೇಶದಿಂದ ನಬಾರ್ಡ್ ಬ್ಯಾಂಕಿನ ಅಧ್ಯಕ್ಷರಾಗಿರುವ ಹರ್ಷ ಕುಮಾರ್ ಭನ್ವಾಲಾ ಅವರೊಂದಿಗೆ ತಾನು ಶೀಘ್ರದಲ್ಲೇ ಈ ಭಾಗಗಳಿಗೆ ಭೇಟಿ ನೀಡುತ್ತೇನೆ ಎಂಬ ಮಾಹಿತಿಯನ್ನು ಹಣಕಾಸು ಸಚಿವೆ ಇದೇ ಸಂದರ್ಭದಲ್ಲಿ ನೀಡಿದರು.
ಆ ಭಾಗದ ರೈತರ ಸಮಸ್ಯೆಗಳನ್ನು ತಿಳಿದುಕೊಳ್ಳಲು ಅವರೊಂದಿಗೆ ಚರ್ಚಿಸುವುದಾಗಿ ಮತ್ತು ಅಗತ್ಯಬಿದ್ದಲ್ಲಿ ರೈತರ ಸಂಘವನ್ನು ಸ್ಥಾಪಿಸಲು ನೆರವು ಒದಗಿಸುವುದಾಗಿ ನಬಾರ್ಡ್ ಅಧ್ಯಕ್ಷರೂ ಸಹ ಇದೇ ಸಂದರ್ಭದಲ್ಲಿ ನುಡಿದರು. ಇದರಲ್ಲಿ ಈ ಭಾಗದ ರೈತರಿಗೆ ಅಗತ್ಯ ಹಣಕಾಸು ನೆರವನ್ನು ಒದಗಿಸುವುದು. ಅಲ್ಪ ಕಾಲೀನ ಮತ್ತು ದೀರ್ಘ ಕಾಲೀನ ಸಾಲ ಸೌಲಭ್ಯಗಳ ಒದಗಿಸುವಿಕೆಯೂ ಸೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ