ಪಠ್ಯಕ್ರಮದಲ್ಲಿ ಪೂಜೆ, ಯಜ್ಞ ವಿಧಿ ವಿಧಾನ? ಕೌಶಲಾಭಿವೃದ್ಧಿ ಮಂಡಳಿಯಿಂದ ಕ್ರಮ


Team Udayavani, Jan 24, 2020, 1:42 AM IST

Pooja-24-1

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ಹೊಸದಿಲ್ಲಿ: ದೇಗುಲಗಳಲ್ಲಿ ಅರ್ಚಕರಾಗುವವರಿಗೆ ಸೂಕ್ತ ಪಠ್ಯಕ್ರಮ ಮತ್ತು ಕೌಶಲ ನೀಡಲು ಕೇಂದ್ರ ಸರಕಾರ ಮುಂದಾಗಿದೆ. ಅದಕ್ಕಾಗಿ ಕೌಶಲಾಭಿವೃದ್ಧಿ ಮಂಡಳಿ ಮೂಲಕ ತರಗತಿಗಳನ್ನು ನಡೆಸಲು ಯೋಜಿಸುತ್ತಿದೆ. ಈ ಮೂಲಕ ದೇಶಿಯವಾಗಿ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸುವುದು ಸರಕಾರದ ಲೆಕ್ಕಾಚಾರ.

ಹೊರ ದೇಶಗಳಲ್ಲಿ ಇರುವ ಭಾರತೀಯ ಸಮುದಾಯದವರು ಕೆಲ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಪರಿಣತರಿಗಾಗಿ ಶೋಧ ನಡೆಸುತ್ತಿರುತ್ತಾರೆ. ಸರಕಾರದ ಈ ಯೋಜನೆಯಿಂದ ಹಿಂದೂ ಸಮುದಾಯದವರು ಹೆಚ್ಚಾಗಿರುವ ರಾಷ್ಟ್ರಗಳಲ್ಲಿ ಅವರಿಗೆ ಉದ್ಯೋಗಾವಕಾಶವೂ ಹೇರಳವಾಗಿ ಲಭಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ವೈದಿಕ ಸಂಸ್ಕೃತಿ ರಕ್ಷಣೆಗೆ ಕ್ರಮ: ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೌಶಲಾಭಿವೃದ್ಧಿ ಸಚಿವಾಲಯದ ಅಧಿಕಾರಿ “ದೇಶದ ಸಂಸ್ಕೃತಿ ಮತ್ತು ವೇದ ಕಾಲದ ರಿವಾಜುಗಳನ್ನು ಕಾಪಾಡಿಕೊಳ್ಳಲು ಇದೊಂದು ಪ್ರಯತ್ನ. ಅಂಥ ಜ್ಞಾನವನ್ನು ಕಾಪಾಡುವುದು ಮಾತ್ರವಲ್ಲದೆ ಅದನ್ನು ಸರಿಯಾದ ಕ್ರಮದಲ್ಲಿ ಅಭ್ಯಾಸ ಮಾಡಲೂ ಇದು ವೇದಿಕೆ ಒದಗಿಸಿಕೊಡುತ್ತದೆ’ ಎಂದಿದ್ದಾರೆ.

ಹಿಂದೂ ಧಾರ್ಮಿಕ ವಿಧಿ ವಿಧಾನಗಳಿಗೆ ಪಠ್ಯಕ್ರಮ ರಚಿಸಿ, ಅದನ್ನು ತರಬೇತಿಗೆ ಬಳಸಿಕೊಳ್ಳುವುದರ ಮೂಲಕ ಸೂಕ್ತ ಉದ್ಯೋಗಾವಕಾಶಗಳನ್ನೂ ಸೃಷ್ಟಿಸಿದಂತಾ ಗುತ್ತದೆ ಎಂದು ಆ ಅಧಿಕಾರಿ ಹೇಳಿದ್ದಾರೆ.

ಪಠ್ಯಕ್ರಮ: ವಿವಿಧ ರೀತಿಯ ಪೂಜೆ, ಯಜ್ಞ, ಯಾಗಾದಿಗಳನ್ನು ನಡೆಸುವುದು ಹೇಗೆ ಎಂಬುದರ ಬಗ್ಗೆ ಪಠ್ಯ ಕ್ರಮ ಸಿದ್ಧಗೊಳ್ಳಲಿದೆ. ಅದು ರಾಷ್ಟ್ರೀಯ ಕೌಶಲ ಅರ್ಹತಾ ನಿಯಮಾವಳಿಗಳ ಅನ್ವಯವೇ ಇರಲಿದೆ. ಕೌಶಲ ಮತ್ತು ಯೋಗ್ಯತೆ, ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸುವ ಜ್ಞಾನಗಳನ್ನು ಆಯಾ ಅಭ್ಯರ್ಥಿಗಳ ಕ್ಷಮತೆ ನೋಡಿಕೊಂಡು ಒಂದರಿಂದ ಹತ್ತವರ ವರೆಗೆ ಶ್ರೇಯಾಂಕ ನೀಡುವ ಬಗ್ಗೆಯೂ ಪ್ರಸ್ತಾವನೆ ಇದೆ. ಈ ಕೋರ್ಸ್‌ಗಳಿಗಾಗಿ ಸಂಸ್ಕೃತ ಭಾಷೆಯ ಜ್ಞಾನ ಕಡ್ಡಾಯಗೊಳಿಸಬೇಕು ಎಂಬುದನ್ನು ನಿಗದಿಮಾಡುವ ಸಾಧ್ಯತೆ ಇದೆ. ಏಕೆಂದರೆ ಮಂತ್ರೋಚ್ಛಾರಣೆ ಇರುವುದು ಆ ಭಾಷೆಯಲ್ಲಿ.

ಸ್ಥಳ ನಿಗದಿಯಾಗಿಲ್ಲ: ಇಂಥ ಕೋರ್ಸ್‌ಗಳನ್ನು ಎಲ್ಲಿ ಶುರು ಮಾಡಬೇಕು ಎಂಬು ದರ ಬಗ್ಗೆ ಸ್ಥಳ ನಿಗದಿಯಾಗದೇ ಇದ್ದರೂ, ಮಥುರಾ ಮತ್ತು ವಾರಾಣಸಿಗಳಲ್ಲಿ ಆರಂಭಿಸುವ ಬಗ್ಗೆ ಚಿಂತನೆಗಳಿವೆ. ವಾರಾ ಣಸಿಯಲ್ಲಿರುವ ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾನಿಲಯದ ಕುಲಪತಿ ರಾಜಾರಾಮ ಶುಕ್ಲಾ ಕೇಂದ್ರ ಸರಕಾರಕ್ಕೆ ಹೊಸ ಮಾದರಿಯ ಐಡಿಯಾ ನೀಡಿದ್ದಾರೆ.

ದೇಶದ ಸಾಂಪ್ರದಾಯಿಕ ನಿರ್ಮಾಣ ಕ್ಷೇತ್ರದ ತಂತ್ರಜ್ಞಾನ – ವಾಸ್ತುಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರಗಳನ್ನು ಸರಿಯಾಗಿ ಅಧ್ಯಯನ ಮಾಡಿದರೆ ಅಂಥ ವ್ಯಕ್ತಿಗಳಿಗೆ ಪ್ರತಿ ತಿಂಗಳಿಗೆ ಕಡಿಮೆಯೆಂದರೂ 50 ಸಾವಿರ ರೂ. ಗಳಿಸಬಹುದೆಂದು ಅವರು ಪ್ರತಿಪಾದಿಸುತ್ತಾರೆ.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.