ಕತ್ತೆಗಳನ್ಯಾಕೆ ಟಾರ್ಗೆಟ್ ಮಾಡ್ತೀರಿ? ಅಖಿಲೇಶ್ ಗೆ ಮೋದಿ ತಿರುಗೇಟು
Team Udayavani, Feb 23, 2017, 6:03 PM IST
ಲಕ್ನೋ: ಅಖಿಲೇಶ್ ಜೀ…ನನಗೆ ಅರ್ಥವಾಗುತ್ತದೆ, ನೀವು ಮೋದಿಯೋ ಅಥವಾ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿ, ಆದರೆ ನೀವೀಗ ಕತ್ತೆಗಳನ್ಯಾಕೆ ಗುರಿಯಾಗಿರಿಸಿಕೊಂಡಿದ್ದೀರಿ? ನೀವು ಕತ್ತೆಗಳಿಗೆ ಹೆದರುತ್ತಿದ್ದೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಖಡಕ್ ಆಗಿ ತಿರುಗೇಟು ನೀಡಿದ್ದಾರೆ.
ಉತ್ತರಪ್ರದೇಶ ಚುನಾವಣೆಯ ಜಿದ್ದಾಜಿದ್ದಿನಲ್ಲಿ ಇತ್ತೀಚೆಗೆ ರಾಯ್ ಬರೇಲಿಯಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಮುಖ್ಯಮಂತ್ರಿ ಅಖಿಲೇಶ್ ಯಾದವ್, ನೀವು ಈ ಶತಮಾನದ ಮಹಾನ್ ಕಲಾವಿದ ಹಾಗಾಗಿ ದಯವಿಟ್ಟು ಗುಜರಾತ್ ನ ಕತ್ತೆಗಳ ಪರ ಪ್ರಚಾರ ಮಾಡೋದನ್ನು ನಿಲ್ಲಿಸಿ ಎಂದು ಬಾಲಿವುಡ್ ಬಿಗ್ ಬಿ, ಗುಜರಾತ್ ಪ್ರವಾಸೋದ್ಯಮ ರಾಯಭಾರಿಯಾಗಿದ್ದ ಅಮಿತಾಬ್ ಬಚ್ಚನ್ ಗೆ ಮನವಿ ಮಾಡಿಕೊಂಡಿದ್ದರು.
ಗುರುವಾರ ಉತ್ತರಪ್ರದೇಶದ ಬಹಾರಿಕ್ ಪ್ರದೇಶದಲ್ಲಿ ಚುನಾವಣಾ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಖಿಲೇಶ್ ವ್ಯಂಗ್ಯಕ್ಕೆ ತಕ್ಕ ತಿರುಗೇಟು ನೀಡಿ ಪ್ರತಿಕ್ರಿಯಿಸಿದ್ದಾರೆ.
ನಾನು ಕತ್ತೆಗಳಿಂದಲೇ ಸ್ಫೂರ್ತಿ ಪಡೆದಿದರುವುದು. ಯಾಕೆಂದರೆ ಕತ್ತೆಗಳು ತಮ್ಮ ಯಜಮಾನನಿಗೆ ನಿಷ್ಠೆಯನ್ನು ಹೊಂದಿರುತ್ತವೆ ಮತ್ತು ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ಪೂರೈಸುತ್ತವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ