ಬಿಜೆಪಿ ಸಂತಸ ಹಂಚುತ್ತದೆ, ಕಾಂಗ್ರೆಸ್‌ ಜನರನ್ನು ವಿಭಜಿಸುತ್ತದೆ: ಮೋದಿ


Team Udayavani, Oct 10, 2018, 7:23 PM IST

modi-felicitated-700.jpg

ಹೊಸದಿಲ್ಲಿ : ”ದೇಶದ ಅತ್ಯಂತ ಹಳೆಯ ಪಕ್ಷವಾಗಿರುವ ಕಾಂಗ್ರೆಸ್‌ ಸಮಾಜವನ್ನು ವಿವಿಧ ಗುಂಪುಗಳನ್ನಾಗಿ ಒಡೆಯುವಲ್ಲಿ  ವ್ಯಸ್ತವಾಗಿದೆ; ಆದರೆ ಭಾರತೀಯ ಜನತಾ ಪಕ್ಷ  ಜನರನ್ನು ಒಗ್ಗೂಡಿಸುತ್ತದೆ, ಸಮಾಜದಲ್ಲಿ ಸಂತಸ, ನೆಮ್ಮದಿಯನ್ನು ಹಂಚುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ನಮೋ ಆ್ಯಪ್‌ನಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸುತ್ತಿದ್ದ ಅವರು, ಇದೀಗ ವಿಧಾನಸಭಾ ಚುನಾವಣೆಗಳತ್ತ ಮುಖ ಮಾಡಿರುವ ಐದು ರಾಜ್ಯಗಳಲ್ಲಿ ಜನರು ಪರಸ್ಪರ ಕಚ್ಚಾಡುವಂತೆ ಮಾಡಲು ಕಾಂಗ್ರೆಸ್‌ ಹವಣಿಸುತ್ತಿದೆ ಎಂದು ಆರೋಪಿಸಿದರು. 

ನಿನ್ನೆಯಷ್ಟೇ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಕಾಂಗ್ರೆಸ್‌ ಪಕ್ಷ  “ಭಾರತ್‌ ತೇರೇ ಟುಕ್‌ಡೇ ಹೋಂಗೆ’ ದುಷ್ಟತೆಯನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕೆ ಕಾಂಗ್ರೆಸ್‌ ನಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಆ ಹಿನ್ನೆಲೆಯಲ್ಲಿ  ಪ್ರಧಾನಿ ಮೋದಿ ಕಾಂಗ್ರೆಸ್‌ ವಿರುದ್ಧದ ವಾಕ್‌ ದಾಳಿಯನ್ನು ಮುಂದುವರಿಸಿ ‘ದೇಶದ ಹಳೇ ಪಕ್ಷವು ಸಮಾಜವನ್ನು ಹೋಳು ಮಾಡುವಲ್ಲಿ ವ್ಯಸ್ತವಾಗಿದೆ’ ಎಂದು ಖಂಡಿಸಿದರು. 

‘ಆಂಧ್ರ ಪ್ರದೇಶವನ್ನು ಒಡೆದು ತೆಲಂಗಾಣವನ್ನು ಸೃಷ್ಟಿಸುವ ಮೂಲಕ ಕಾಂಗ್ರೆಸ್‌ ಪಕ್ಷ ಒಂದೇ ಭಾಷೆ ಮಾತನಾಡುವ ಜನರು ಪರಸ್ಪರ ಕಚ್ಚಾಡುವಂತೆ ಮಾಡಿತು’ ಎಂದು ಮೋದಿ ಟೀಕಿಸಿದರು. 

‘ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರೂ ಮೂರು ಹೊಸ ರಾಜ್ಯಗಳನ್ನು ರೂಪಿಸಿದ್ದರು. ಆದರೆ ಹಾಗೆ ಮಾಡುವ ಮುನ್ನ  ಅವರು ಎಲ್ಲ ಹಿತಾಸಕ್ತಿದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ ಕಾಂಗ್ರೆಸ್‌ ಪಕ್ಷ  ಆಂಧ್ರ ಪ್ರದೇಶವನ್ನು ಒಡೆದು ತೆಲಂಗಾಣವನ್ನು ಸೃಷ್ಟಿಸುವ ಮೂಲಕ ಅವುಗಳ ಜನರನ್ನು ಪರಸ್ಪರ ಶತ್ರುಗಳನ್ನಾಗಿ ಮಾಡಿತು’ ಎಂದು ಮೋದಿ ಟೀಕಿಸಿದರು. 

‘ರಾಜಕೀಯ ಲಾಭಕ್ಕಾಗಿ ಮಹಾಘಟಬಂಧನ ರೂಪಿಸುವ ವಿರೋಧ ಪಕ್ಷಗಳ ಆಲೋಚನೆ ಸಂಪೂರ್ಣವಾಗಿ ವಿಫ‌ಲವಾಗಿದೆ’ ಎಂದು ಪಿಎಂ ಮೋದಿ ಹೇಳಿದರು.

‘ಪರಸ್ಪರ ಹೊಡೆದುಕೊಂಡು ಕಚ್ಚಾಡುವ ವಿರೋಧ ಪಕ್ಷಗಳು ಸಮಯಸಾಧಕತನದಿಂದ ಹೇಗೆ ಕೈ ಜೋಡಿಸಿಕೊಂಡು ಸರಕಾರ ಮಾಡುತ್ತವೆ ಎಂಬುದನ್ನು ನಾವು ಕರ್ನಾಟಕದಲ್ಲಿ ಕಂಡಿದ್ದೇವೆ. ಅದೇ ರೀತಿಯ ಯತ್ನಗಳು ಉತ್ತರ ಪ್ರದೇಶ, ಮಧ್ಯ ಪ್ರದೇಶದಲ್ಲಿ ನಡೆಯುತ್ತಿವೆ. ಅಂತಿರುವಾಗ ಬಿಜೆಪಿ ಕಾರ್ಯಕರ್ತರು ಈ ರೀತಿಯ ನಾಯಕರ ಹಿನ್ನೆಲೆಗಳನ್ನು ಜನರಿಗೆ ತಿಳಿಸಿ ಜಾಗೃತಿ ಉಂಟು ಮಾಡಬೇಕಿದೆ’ ಎಂದು ಮೋದಿ ಹೇಳಿದರು. 

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.