ಲೋಕಸಭೆಯಲ್ಲೂ ನೂತನ ಕೃಷಿ ಕಾಯ್ದೆ ಸಮರ್ಥಿಸಿಕೊಂಡ ಪ್ರಧಾನಿ ಮೋದಿ
ಕೃಷಿ ಕಾಯ್ದೆಯಿಂದ ರೈತರಿಗೆ ಸಮಸ್ಯೆ ಆದರೆ ಅದನ್ನು ಬದಲಾಯಿಸಲು ಸಿದ್ಧ
Team Udayavani, Feb 10, 2021, 5:24 PM IST
ನವದೆಹಲಿ: ಕೃಷಿ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿ ಯಿಂದ ಮೂರು ನೂತನ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಇದು ರೈತರ ಬದುಕನ್ನು ಬದಲಾಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬುಧವಾರ (ಫೆ10) ರಂದು ಲೋಕಸಭೆಯಲ್ಲಿ ರಾಷ್ಟ್ರ ಪತಿ ಭಾಷಣಕ್ಕೆ ಧನ್ಯವಾದ ಅರ್ಪಿಸಿ ಮಾತನಾಡಿರುವ ಅವರು ಕೋವಿಡ್ ಸಮಯದಲ್ಲಿಯೂ ರೈತರ ಏಳಿಗೆಯ ಉದ್ದೇಶದಿಂದ ನೂತನ ಕೃಷಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದು ರೈತರಿಗೆ ಅತೀ ಅವಶ್ಯಕವಾಗಿರುವ ಕಾಯ್ದೆಗಳಾಗಿದ್ದು, ರೈತರ ಬದುಕನ್ನು ಅಭಿವೃದ್ಧಿ ಪಡಿಸಲಿದೆ. ಈ ಕಾಯ್ದೆಗಳಿಂದ ಯಾರಿಗೂ ತೊಂದರೆಯಾಗದು. ಒಂದು ವೇಳೆ ಈ ಕೃಷಿ ಕಾಯ್ದೆಯಿಂದ ರೈತರಿಗೆ ಸಮಸ್ಯೆ ಆದರೆ ಅದನ್ನು ಬದಲಾಯಿಸಲು ಸಿದ್ಧ ಎಂದರು.
ಸದನದಲ್ಲಿ 15 ಗಂಟೆಗಳ ಕಾಲ ಚರ್ಚೆ ನಡೆಸಲಾಗಿದೆ. ಕೆಲವು ದಿನಗಳಲ್ಲಿ ರಾತ್ರಿ 12 ಗಂಟೆಗಳವರೆಗೂ ಚರ್ಚೆ ಮುಂದುವರೆದಿದೆ. ಈ ಸಮಯದಲ್ಲಿ ಮಹಿಳಾ ಸದಸ್ಯರನ್ನು ಒಳಗೊಂಡಂತೆ ಎಲ್ಲಾ ಸದಸ್ಯರೂ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ ಎಂದು ತಮ್ಮ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಇದನ್ನೂ ಓದಿ:ಕರ್ನಾಟಕವನ್ನು ‘ಅಗ್ರಿ ಸ್ಟಾರ್ಟಪ್ ಹಬ್’ ಆಗಿಸುವ ಗುರಿಯಿದೆ: ಬಿ.ಸಿ.ಪಾಟೀಲ್
ಕೋವಿಡ್ ನಂತರ ಹೊಸ ಜಗತ್ತು ನಿರ್ಮಾಣ ಗೊಂಡಿದೆ. ಕೋವಿಡ್ ಸಮಯದಲ್ಲಿ ದೇವರು ನಮ್ಮ ಸಹಾಯಕ್ಕೆ ಬಂದಿದ್ದಾರೆ. ಅವರು ವೈದ್ಯರು, ನರ್ಸ್ ಗಳನ್ನು ಒಳಗೊಂಡಂತೆ ಅಂಬ್ಯುಲೆನ್ಸ್ ಚಾಲಕರ ರೂಪದಲ್ಲಿ ಆಗಮಿಸಿ ನಮ್ಮನ್ನು ರಕ್ಷಿಸಿದ್ದಾರೆ ಎಂದಿರುವ ಪ್ರಧಾನಿ ಮೋದಿ ಎಲ್ಲಾ ಸಮಸ್ಯೆಗಳನ್ನು ಎದುರಿಸಿ ಭಾರತ ಬಲಿಷ್ಟ ದೇಶವಾಗಿ ಹೊರಹೊಮ್ಮಬೇಕಿದೆ ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು