ಅಯೋಧ್ಯಾ ತೀರ್ಪು ಯಾರ ಗೆಲುವೂ ಅಲ್ಲ, ಯಾರ ಸೋಲು ಅಲ್ಲ: ಮೋದಿ
Team Udayavani, Nov 9, 2019, 10:27 AM IST
ಹೊಸದಿಲ್ಲಿ: ವಿಶ್ವದ ಗಮನ ಸೆಳೆದಿರುವ ಅಯೋಧ್ಯೆ ಭೂ ವಿವಾದ ಸಂಬಂಧ ಅಂತಿಮ ತೀರ್ಪು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದ್ದು, ಶಾಂತಿ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಯೋಧ್ಯೆ ವಿಷಯದಲ್ಲಿ ಸುಪ್ರೀಂ ಕೋರ್ಟ್ ಏನೇ ತೀರ್ಪು ನೀಡಲಿ, ಅದು ಯಾರ ಗೆಲುವೂ ಅಲ್ಲ, ಯಾರ ಸೋಲೂ ಅಲ್ಲ. ಶಾಂತಿ, ಏಕತೆ, ಸದ್ಭಾವನೆಯನ್ನು ಗಟ್ಟಿಗೊಳಿಸಬೇಕು ಎಂದು ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ.
अयोध्या पर सुप्रीम कोर्ट का जो भी फैसला आएगा, वो किसी की हार-जीत नहीं होगा। देशवासियों से मेरी अपील है कि हम सब की यह प्राथमिकता रहे कि ये फैसला भारत की शांति, एकता और सद्भावना की महान परंपरा को और बल दे।
— Narendra Modi (@narendramodi) November 8, 2019