ಬ್ಯಾನರ್ಗೆ ಪರ್ಮಿಶನ್ ಕೊಡಿ
ತ.ನಾ.ಸರಕಾರದಿಂದ ಮದ್ರಾಸ್ ಹೈಕೋರ್ಟ್ಗೆ ಅರ್ಜಿ
Team Udayavani, Oct 3, 2019, 6:41 AM IST
ಚೆನ್ನೈ: ಚೀನದ ವುಹಾನ್ನಲ್ಲಿ 2018 ರಲ್ಲಿ ನಡೆದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ಎರಡನೇ ಹಂತದ ಅನೌಪಚಾರಿಕ ಸಭೆ ಅ. 11-13ರ ವರೆಗೆ ಮಹಾಬಲಿಪುರಂನಲ್ಲಿ ನಡೆಯಲಿದೆ. ಅದಕ್ಕೆ ಪೂರಕವಾಗಿ ತಮಿಳು ನಾಡು ಸರಕಾರ ಸ್ವಾಗತ ಕಮಾನು, ಫ್ಲೆಕ್ಸ್ ಹಾಕಲು ಅನುಮತಿ ನೀಡುವಂತೆ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದೆ. ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.
ಕೆಲ ದಿನಗಳ ಹಿಂದೆ ಎಐಎಡಿಎಂಕೆ ಸ್ಥಳೀಯ ನಾಯಕರೊಬ್ಬರ ಪರ ಹಾಕಲಾಗಿದ್ದ ಪ್ಲೆಕ್ಸ್ ಬಿದ್ದು ಮಹಿಳಾ ಟೆಕ್ಕಿ ಅಸುನೀಗಿದ್ದರು. ಈ ಪ್ರಕರಣ ವಿವಾದಕ್ಕೆ ಒಳಗಾದ ಬಳಿಕ ಸರಕಾರ ಕೋರ್ಟ್ ಮೊರೆ ಹೋಗಿದೆ. ನಗರಾಭಿವೃದ್ಧಿ ಆಯುಕ್ತ ಕೆ. ಭಾಸ್ಕರನ್ ಅರ್ಜಿ ಸಲ್ಲಿಸಿದ್ದು “ಎರಡು ರಾಷ್ಟ್ರಗಳ ನಾಯಕರು ಭೇಟಿಗಾಗಿ ಆಗಮಿಸುತ್ತಿದ್ದಾರೆ. ಸಂಪ್ರದಾಯ ಪ್ರಕಾರ ವಿದೇಶಾಂಗ ಸಚಿವಾಲಯ ಬ್ಯಾನರ್ಗಳನ್ನು ಕಟ್ಟಿ ಸ್ವಾಗತ ಮಾಡಬೇಕಿದೆ. ಅದರ ಜತೆಗೆ ರಾಜ್ಯ ಸರಕಾರದ ಹೊಣೆಯೂ ಇದೆ. ಹೀಗಾಗಿ, ಬ್ಯಾನರ್ಗಳಿಗೆ ಅನುಮತಿ ನೀಡಬೇಕು’ ಎಂದು ಅರಿಕೆ ಮಾಡಿಕೊಳ್ಳ ಲಾಗಿದೆ. ಅದರಿಂದ ಸಾರ್ವಜನಿಕರಿಗೆ ತೊಂದ ರೆಯಾಗದಂತೆ ಎಚ್ಚರಿಕೆ ವಹಿಸಲಾಗುತ್ತದೆ ಎಂದೂ ಸರಕಾರ ಹೇಳಿಕೊಂಡಿದೆ.
ಸಿಎಂ ಪರಿಶೀಲನೆ
ಈ ನಡುವೆ ಮಹಾ ಬಲಿಪುರಂನಲ್ಲಿ ನಡೆಯಲಿರುವ ಅನೌಪ ಚಾರಿಕ ಸಭೆಯ ಬಗೆಗಿನ ಸಿದ್ಧತೆಗಳನ್ನು ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಓ. ಪನ್ನೀರ್ಸೆಲ್ವಂ ಬುಧವಾರ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ