ಮಹಾಬಲಿಪುರಂನಲ್ಲಿ ಮೋದಿ–ಕ್ಸಿ ಭೇಟಿ : ಉಭಯ ನಾಯಕರಿಂದ ನೃತ್ಯಕಾರ್ಯಕ್ರಮ ವೀಕ್ಷಣೆ


Team Udayavani, Oct 11, 2019, 5:51 PM IST

Xi-Jinping-Dance-730

ಚೆನ್ನೈ: ಐತಿಹಾಸಿಕ ಮಹತ್ವವನ್ನು ಪಡೆದುಕೊಂಡಿರುವ ಇಲ್ಲಿನ ಕರಾವಳಿ ಪಟ್ಟಣ ಮಹಾಬಲಿಪುರಂನಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಝಿನ್ ಪಿಂಗ್ ನಡುವೆ ನಡೆಯಲಿರುವ ಅನೌಪಚಾರಿಕ ಭೇಟಿಗೆ ಸಿದ್ಧತೆಗಳೆಲ್ಲಾ ಪೂರ್ಣಗೊಂಡಿವೆ.

ಈಗಾಗಲೇ ಏಷ್ಯಾದ ಎರಡು ಬಲಿಷ್ಟ ದೇಶಗಳ ನಾಯಕರ ಮುಖಾಮುಖಿಗೆ ವೇದಿಕೆ ಸಿದ್ಧಗೊಂಡಿದೆ. ದ್ವಿಪಕ್ಷೀಯ ಬಾಂಧವ್ಯಗಳನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಎರಡೂ ದೇಶಗಳ ಅಧಿಕಾರಿಗಳ ನಿಯೋಗದ ಸಭೆಯೂ ಇಲ್ಲಿ ನಡೆಯಲಿದೆ.

ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಝಿನ್ ಪಿಂಗ್ ಅವರು ಇಂದು ಸಾಯಂಕಾಲ ಜೊತೆಯಾಗಿ ಇಲ್ಲಿನ ಯನೆಸ್ಕೋ ವಿಶ್ವಪಾರಂಪರಿಕ ತಾಣಗಳಿಗೆ ಜೊತೆಯಾಗಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಚೀನಾ ಅಧ್ಯಕ್ಷರು ಸಾದಾ ಉಡುಪಿನಲ್ಲಿ ಗಮನ ಸೆಳೆದರೆ ಪ್ರಧಾನಿ ಮೋದಿ ಅವರು ತಮಿಳುನಾಡಿನ ಸಾಂಪ್ರದಾಯಿಕ ಉಡುಗೆಯಾದ ಬಿಳಿ ಪಂಚೆ, ಬಿಳಿ ಅಂಗಿ ಮತ್ತು ಶಾಲು ತೊಟ್ಟುಕೊಂಡು ಗಮನ ಸೆಳೆದರು.

ಈ ಇಬ್ಬರೂ ನಾಯಕರ ಅನೌಪಚಾರಿಕ ಭೇಟಿಯ ವೇಳೆ ಭಯೋತ್ಪಾದನೆ, ವ್ಯಾಪಾರ ಮತ್ತು ಗಡಿ ಸಮರ ಸಂಬಂಧಿಸಿದ ಹಲವು ವಿಚಾರಗಳು ಚರ್ಚೆಯಾಗುವ ನಿರೀಕ್ಷೆ ಇದೆ. ಆದರೆ ಇದೊಂದು ಅನೌಪಚಾರಿಕ ಭೇಟಿಯಾಗಿರುವ ಹಿನ್ನಲೆಯಲ್ಲಿ ಇಲ್ಲಿ ಯಾವುದೇ ರೀತಿಯ ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕುವುದಿಲ್ಲ. ಆದರೆ ಭಾರತ ಮತ್ತು ಚೀನಾ ದೇಶಗಳ ನಡುವಿನ ಬಾಂಧವ್ಯ ಮತ್ತು ವ್ಯಾಪಾರ ಅವಕಾಶಗಳನ್ನು ವೃದ್ಧಿಸಿಕೊಳ್ಳುವ ನಿಟ್ಟಿನಲ್ಲಿ ಉಭಯ ನಾಯಕರ ಈ ಅನೌಪಚಾರಿಕ ಭೇಟಿ ಒಂದಿ ವೇದಿಕೆಯಾಗಲಿದೆ ಎಂಬ ಅಬಿಪ್ರಾಯ ವ್ಯಕ್ತವಾಗಿದೆ.

ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷರ ಮಹಾಬಲಿಪುರಂ ಭೇಟಿಯ LIVE Updates ಇಲ್ಲಿದೆ:

– ಸಾಂಸ್ಕೃತಿಕ ಕಾರ್ಯಕ್ರಮದ ಬಳಿಕ ಕಲಾವಿದರೊಂದಿಗೆ ಗ್ರೂಪ್ ಫೊಟೋಗೆ ಪೋಸ್ ನೀಡಿದ ಉಭಯ ನಾಯಕರು.

– ಉಭಯ ನಾಯಕರು ಕಲಾಕ್ಷೇತ್ರ ಫೌಂಡೇಶನ್ ನ ವಿದ್ಯಾರ್ಥಿಗಳ ನೃತ್ಯ ಕಾರ್ಯಕ್ರಮವನ್ನು ಆಸ್ವಾದಿಸುತ್ತಿದ್ದಾರೆ.


– ಮಹಾಬಲಿಪುರಂನ ಸಮುದ್ರ ತೀರದಲ್ಲಿರುವ ದೇವಾಲಯದ ಸುಂದರ ಪರಿಸರದಲ್ಲಿ ಮೋದಿ ಮತ್ತು ಝಿನ್ ಪಿಂಗ್ ಮಾತುಕತೆ.
Tamil Nadu: Prime Minister Narendra Modi and Chinese President Xi Jinping at the Shore Temple in Mahabalipuram. pic.twitter.com/uEh2oxEuNk


– ಮಹಾಬಲಿಪುರಂನಲ್ಲಿರುವ ಈ ಸ್ಮಾರಕಗಳನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣ ಎಂದು ಘೋಷಿಸಿದೆ. ಕೋರಮಂಡಲ ಸಮುದ್ರ ತೀರ ಪ್ರದೇಶದಲ್ಲಿರುವ ಈ ದೇವಾಲಯಗಳ ಸಮೂಹವನ್ನು ಪಲ್ಲವ ರಾಜವಂಶಸ್ಥರು 7 ಮತ್ತು 8ನೇ ಶತಮಾನದಲ್ಲಿ ನೈಸರ್ಗಿಕ ಬಂಡೆಗಳನ್ನು ಕೊರೆದು ಕಟ್ಟಿಸಿರುವ ಇತಿಹಾಸವಿದೆ.
#WATCH The group of Monuments in Mahabalipuram, a UNESCO World Heritage site. This group of sanctuaries, founded by the Pallava kings, was carved out of rock along the Coromandel coast in the 7th and 8th centuries. #TamilNadu pic.twitter.com/hFCFnzMDcL


– ಮೋದಿ ಮತ್ತು ಝಿನ್ ಪಿಂಗ್ ಅವರು ಇಂದು ಮೂರು ಗಂಟೆಗಳನ್ನು ಜೊತೆಯಾಗಿ ಕಳೆಯಲಿದ್ದು ಒಟ್ಟಾರೆ ಈ ಉಭಯ ನಾಯಕರ ಎರಡು ದಿನಗಳ ಭೇಟಿಯಲ್ಲಿ ಇವರಿಬ್ಬರು ಆರು ಗಂಟೆಗಳನ್ನು ಜೊತೆಯಲ್ಲಿ ಕಳೆಯಲಿದ್ದಾರೆ.

– ವಿದೇಶಾಂಗ ವ್ಯವಹಾರಗಳ ಸಚಿವ ಜೈ ಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಮಹಾಬಲಿಪುರಂ ದೇವಸ್ಥಾನದ ಆವರಣದಲ್ಲಿ ಚೀನಾ ಅಧ್ಯಕ್ಷರನ್ನು ಭೇಟಿ ಮಾಡಿದರು.


– ಸುತ್ತಾಟದ ಬಳಿಕ ಪಂಚ ರಥಗಳ ಬಳಿ ಉಭಯ ನಾಯಕರು ಕುಳಿತು ಮಾತುಕತೆಯನ್ನು ನಡೆಸಿದರು.ಈ ಸಂದರ್ಭದಲ್ಲಿ ಮೋದಿ ಮತ್ತು ಚೀನಾ ಅಧ್ಯಕ್ಷರು ಸೀಯಾಳ ನೀರಿನ ರುಚಿ ಸವಿದದ್ದು ವಿಶೇಷವಾಗಿತ್ತು.
Tamil Nadu: Prime Minister Narendra Modi with Chinese President Xi Jinping at Panch Rathas in Mahabalipuram. pic.twitter.com/z3WvL89PLx


– ಮಹಾಬಲಿಪುರಂನಲ್ಲಿರುವ ಯುನೆಸ್ಕೋ ವಿಶ್ವಪಾರಂಪರಿಕ ತಾಣವಾಗಿರುವ ಗುಹಾ ದೇವಾಲಯದ ಆವರಣದಲ್ಲಿ ಪ್ರಧಾನಿ ಮೋದಿ ಮತ್ತು ಝಿನ್ ಪಿಂಗ್ ಅವರು ಉಭಯಕುಶಲೋಪರಿ ನಡೆಸಿದರು.


– ಪ್ರಧಾನಿ ಮೋದಿ ಅವರು ಚೀನಾ ಅಧ್ಯಕ್ಷರನ್ನು ಮಹಾಬಲಿಪುರಂಗೆ ಆತ್ಮೀಯವಾಗಿ ಸ್ವಾಗತಿಸಿದರು.

– ಚೀನಾ ಅಧ್ಯಕ್ಷರ ಜೊತೆ 100 ಜನ ಸದಸ್ಯರ ನಿಯೋಗ ಆಗಮಿಸಿದ್ದು ಈ ನಿಯೋಗದಲ್ಲಿ ಚೀನಾದ ವಿದೇಶಾಂಗ ಸಚಿವರು ಮತ್ತು ಸ್ಟೇಟ್ ಕೌನ್ಸಿಲರ್ ಸಹ ಇದ್ದಾರೆ. ಈ ನಿಯೋಗವು ಪ್ರಧಾನಿ ಮೋದಿ ಅವರ ಜೊತೆ ಎರಡು ದಿನಗಳ ಕಾಲ ಅನೌಪಚಾರಿಕ ಮಾತುಕತೆಯನ್ನು ನಡೆಸಲಿದೆ.

– ಈ ಇಬ್ಬರು ನಾಯಕರು ಇದಕ್ಕೂ ಮೊದಲು 2018ರ ಎಪ್ರಿಲ್ 27 ಮತ್ತು 28ರಂದು ಚೀನಾದ ವುಹಾನ್ ನಲ್ಲಿ ಮೊದಲನೇ ಅನೌಪಚಾರಿಕ ಭೇಟಿ ನಡೆದಿತ್ತು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.