ಭಾರತ ಸಂಬಂಧ ಕೆಡಲು ಮೋದಿ ಪಾಕ್ ವಿರೋಧಿ ನೀತಿ ಕಾರಣ: ಇಮ್ರಾನ್ ಖಾನ್
Team Udayavani, Jul 5, 2018, 7:48 PM IST
ಇಸ್ಲಾಮಾಬಾದ್ : ಭಾರತ ಜತೆಗಿನ ಪಾಕ್ ಸಂಬಂಧಗಳು ಇಷ್ಟೊಂದು ಹಳಸಲು ಕಾರಣವೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ “ಆಕ್ರಮಣಕಾರಿ ಪಾಕ್ ವಿರೋಧಿ ನೀತಿ’ ಎಂದು ಪಾಕಿಸ್ಥಾನ ತೆಹರೀಕ್ ಎ ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ, ಮಾಜಿ ಕ್ರಿಕೆಟಿಗ, ಇಮ್ರಾನ್ ಖಾನ್ ಡಾನ್ ನ್ಯೂಸ್ ಗೆ ಹೇಳಿದ್ದಾರೆ.
ಭಾರತದ ಜತೆಗಿನ ಸಂಬಂಧವನ್ನು ಸುಧಾರಿಸಲು ಹಿಂದಿನ ಪ್ರಧಾನಿ ನವಾಜ್ ಷರೀಫ್ ಅವರು ತನ್ನಿಂದಾದ ಗರಿಷ್ಠ ಪ್ರಯತ್ನಗಳನ್ನು ಮಾಡಿದ್ದಾರೆ; ಆದರೆ ಭಾರತ ಸರಕಾರದ “ಆಕ್ರಮಣಕಾರಿ ಪಾಕ್ ವಿರೋಧಿ ನೀತಿ’ಯಿಂದಾಗಿ ಉಭಯ ದೇಶಗಳ ಸಂಬಂಧಗಳು ತೀವ್ರವಾಗಿ ಹದಗೆಟ್ಟಿವೆ ಎಂದು ಇಮ್ರಾನ್ ಖಾನ್ ಹೇಳಿದರು.
ಕಾಶ್ಮೀರದಲ್ಲಿ ಭಾರತ ನಡೆಸುತ್ತಿರುವ ಎಲ್ಲ ದೌರ್ಜನ್ಯಗಳಿಗೆ ಪಾಕಿಸ್ಥಾನವೇ ಕಾರಣ ಎಂದು ದೂರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ “ಆಕ್ರಮಣಕಾರಿ ಪಾಕ್ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ’ ಎಂದು ಇಮ್ರಾನ್ ಆಪಾದಿಸಿದರು.
ಪಾಕಿಸ್ಥಾನವನ್ನು ಜಾಗತಿಕ ಮಟ್ಟದಲ್ಲಿ ಪ್ರತ್ಯೇಕಗೊಳಿಸುವ ಭಾರತೀಯ ಜನತಾ ಪಕ್ಷ ನೇತೃತ್ವದ ಭಾರತ ಸರಕಾರದ ತಪ್ಪು ನೀತಿಯಿಂದಾಗಿ ಉಭಯ ದೇಶಗಳ ನಡುವಿನ ಸಂಬಂಧ ಹಳಸಿಹೋಗಿವೆ ಎಂದು ಇಮ್ರಾನ್ ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!