ಪ್ರವಾದಿ ಅವಹೇಳನ ವಿವಾದ: ಇಸ್ಲಾಮ್ ರಾಷ್ಟ್ರಗಳ ಟೀಕೆ ಸಂಕುಚಿತ ಮನಸ್ಸಿನದ್ದು: ಭಾರತ

ಯಾವುದೇ ಒಂದು ಧರ್ಮವನ್ನು ಗುರಿಯಾಗಿರಿಸಿಕೊಂಡು ದ್ವೇಷ ಸಾಧಿಸುತ್ತಿಲ್ಲ

Team Udayavani, Jun 6, 2022, 2:51 PM IST

ಪ್ರವಾದಿ ಅವಹೇಳನ ವಿವಾದ: ಇಸ್ಲಾಮ್ ರಾಷ್ಟ್ರಗಳ ಟೀಕೆ ಸಂಕುಚಿತ ಮನಸ್ಸಿನದ್ದು: ಭಾರತ

ನವದೆಹಲಿ: ಸುದ್ದಿ ವಾಹಿನಿಯೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಇಸ್ಲಾಮ್ ರಾಷ್ಟ್ರಗಳ ಸಹಕಾರ ಒಕ್ಕೂಟ( ಒಐಸಿ) ನೀಡಿರುವ ಪ್ರತಿಕ್ರಿಯೆಗೆ ಭಾರತ ಸರ್ಕಾರ ಸೋಮವಾರ (ಜೂನ್ 06) ತಿರುಗೇಟು ನೀಡಿದ್ದು, ಐಒಸಿ ಟೀಕೆ “ಅನಗತ್ಯವಾದದ್ದು ಮತ್ತು ಸಂಕುಚಿತ ಮನಸ್ಸಿನದ್ದಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ:ಚಾಮುಂಡೇಶ್ವರಿಯ ಮತದಾರರು ಸಿದ್ದರಾಮಯ್ಯ ಚಡ್ಡಿ,ಪಂಚೆ ಕಳಚಿದ್ದಾರೆ: ಸಚಿವ ಜೋಶಿ

ನೂಪುರ್ ಅವರ ವಿವಾದಿತ ಹೇಳಿಕೆ ಕುರಿತು ಐಒಸಿಯ ಜನರಲ್ ಸೆಕ್ರೆಟರಿಯೇಟ್ ನೀಡಿರುವ ಪ್ರತಿಕ್ರಿಯೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಾಮ್ ಬಾಗ್ಚಿ, ಭಾರತದ ಬಗ್ಗೆ ಇಸ್ಲಾಮ್ ರಾಷ್ಟ್ರಗಳ ಸಹಕಾರ ಒಕ್ಕೂಟ ನೀಡಿರುವ ಹೇಳಿಕೆಯನ್ನು ಗಮನಿಸಿದ್ದೇವೆ. ಆದರೆ ಐಒಸಿಯ ಅನಗತ್ಯವಾದ ಮತ್ತು ಸಂಕುಚಿತ ಮನಸ್ಸಿನ ಟೀಕೆಯನ್ನು ಸಾರಸಗಟಾಗಿ ತಿರಸ್ಕರಿಸುವುದಾಗಿ ತಿಳಿಸಿದ್ದಾರೆ.

ಭಾರತ ಎಲ್ಲಾ ಧರ್ಮದವರ ಬಗ್ಗೆಯೂ ಅಪಾರ ಗೌರವ ಹೊಂದಿದೆ. ಯಾವುದೇ ಒಂದು ಧರ್ಮವನ್ನು ಗುರಿಯಾಗಿರಿಸಿಕೊಂಡು ದ್ವೇಷ ಸಾಧಿಸುತ್ತಿಲ್ಲ ಎಂದು ತಿಳಿಸಿದೆ. ಅಲ್ಲದೇ ಧಾರ್ಮಿಕ ಮುಖಂಡರನ್ನು ನಿಂದಿಸುವ, ಧರ್ಮವನ್ನು ಅವಹೇಳನ ಮಾಡುವ ಆಕ್ಷೇಪಾರ್ಹ ಟ್ವೀಟ್ ಮತ್ತು ಹೇಳಿಕೆಯನ್ನು ಕೆಲವು ವ್ಯಕ್ತಿಗಳು ನೀಡಿದ್ದಾರೆ. ಅವು ಯಾವುದೇ ರೀತಿಯಲ್ಲೂ ಭಾರತ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಅಂತಹ ಹೇಳಿಕೆಯನ್ನು ಕೊಟ್ಟವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಬಾಗ್ಚಿ ಸ್ಪಷ್ಟನೆ ನೀಡಿದ್ದಾರೆ.

ವಿವಾದಿತ ಹೇಳಿಕೆ ಬಗ್ಗೆ ಇಸ್ಲಾಮ್ ರಾಷ್ಟ್ರಗಳ ಸಹಕಾರ ಒಕ್ಕೂಟ ಮತ್ತೊಮ್ಮೆ ಇಂತಹ ಪ್ರತಿಕ್ರಿಯೆ ನೀಡಿರುವುದು ದುರದೃಷ್ಟಕರವಾಗಿದೆ. ಇದೊಂದು ಭಾರತದ ಕುರಿತ ಪೂರ್ವಾಗ್ರಹ ಪೀಡಿತ ಟೀಕೆಯಾಗಿದೆ ಎಂದು ಭಾರತ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರವಾದಿ ಮಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಕಾನ್ಪುರ್ ಹಿಂಸಾಚರಕ್ಕೆ ಕಾರಣವಾದ ನೂಪುರ್ ಶರ್ಮಾ ಅವರನ್ನು ಬಿಜೆಪಿ ತನ್ನ ವಕ್ತಾರೆ ಸ್ಥಾನದಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿತ್ತು. ಅಷ್ಟೇ ಅಲ್ಲ ದಿಲ್ಲಿ ಬಿಜೆಪಿ ಮಾಧ್ಯಮ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರನ್ನು ವಜಾ ಮಾಡಿ ಆದೇಶ ಹೊರಡಿಸಿತ್ತು.

ನಿಮ್ಮಿಂದ ಪಾಠ ಕಲಿಯಬೇಕಿಲ್ಲ:
ಪಾಕಿಸ್ಥಾನಕ್ಕೆ ಭಾರತ ತಿರುಗೇಟು
ಬಿಜೆಪಿ ನಾಯಕರ ಹೇಳಿಕೆಯನ್ನು ಖಂಡಿಸಿ ಪಾಕ್‌ ಪ್ರಧಾನಿ ಶೆಹಬಾದ್‌ ಶ‌ರೀಫ್ ಟ್ವೀಟ್‌ ಮಾಡಿದ್ದು, ಅದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. “ಅಲ್ಪಸಂಖ್ಯಾಕರ ಹಕ್ಕುಗಳ ಉಲ್ಲಂಘನೆಯಲ್ಲಿ ದಾಖಲೆ ಬರೆದಿರುವ ದೇಶದಿಂದ ಪಾಠ ಕಲಿಯಬೇಕಾದ ಆವಶ್ಯಕತೆ ನಮಗಿಲ್ಲ. ಹಿಂದೂಗಳು, ಸಿಕ್ಖರು, ಕ್ರೈಸ್ತರು ಮತ್ತು ಅಹ್ಮದಿಯಾಗಳನ್ನು ಪಾಕಿಸ್ಥಾನದಲ್ಲಿ ಹೇಗೆ ವ್ಯವಸ್ಥಿತವಾಗಿ ಹಿಂಸಿಸಲಾಗುತ್ತಿದೆ ಎನ್ನುವುದು ಇಡೀ ಜಗತ್ತಿಗೇ ಗೊತ್ತಿರುವ ವಿಚಾರ’ ಎಂದು ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್‌ ಬಗಿc ಹೇಳಿದ್ದಾರೆ. ಭಾರತದಲ್ಲಿ ಕೋಮುಸಾಮರಸ್ಯ ಕದಡಲು ಯತ್ನಿಸುವ ಬದಲು ನಿಮ್ಮ ದೇಶದಲ್ಲಿರುವ ಅಲ್ಪಸಂಖ್ಯಾಕರ ಸುರಕ್ಷತೆ, ಕ್ಷೇಯೋಭಿವೃದ್ಧಿಯ ಕಡೆಗೆ ಗಮನ ಕೊಡಿ. ಭಾರತ ಸರಕಾರವು ಎಲ್ಲ ಧರ್ಮಗಳನ್ನೂ ಗೌರವಿಸುತ್ತದೆ. ನಿಮ್ಮಂತೆ ಮತಾಂಧರನ್ನು ಸ್ತುತಿಸುತ್ತಾ, ಅವರಿಗಾಗಿ ಸ್ಮಾರಕಗಳನ್ನು ನಿರ್ಮಿಸುವುದಿಲ್ಲ ಎಂದೂ ಬಗಿc ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.