ನಿಧನದ 1 ವರ್ಷದ ಬಳಿಕ ಬಹುಕೋಟಿ ನಕಲಿ ಛಾಪಾ ಹಗರಣದಲ್ಲಿ ತೆಲಗಿ ಖುಲಾಸೆ
Team Udayavani, Dec 31, 2018, 11:07 AM IST
ನಾಸಿಕ್: ಬಹುಕೋಟಿ ನಕಲಿ ಛಾಪಾ ಕಾಗದ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೃತಪಟ್ಟಿರುವ ಪ್ರಮುಖ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ ಹಾಗೂ ಇತರರನ್ನು ಮಹಾರಾಷ್ಟ್ರದ ನಾಸಿಕ್ ಕೋರ್ಟ್ ಸೋಮವಾರ ಖುಲಾಸೆಗೊಳಿಸಿದೆ.
ನಕಲಿ ಛಾಪಾ ಕಾಗದದ ಹಲವು ಪ್ರಕರಣಗಳಲ್ಲಿ ತೆಲಗಿಗೆ ಕೋರ್ಟ್ ಒಟ್ಟು 30 ವರ್ಷಗಳ ಜೈಲುಶಿಕ್ಷೆ ವಿಧಿಸಲಾಗಿತ್ತು. ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ತೆಲಗಿ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಬೆಂಗಳೂರು ಜೈಲಿನಲ್ಲಿ ಸಾವನ್ನಪ್ಪಿದ್ದ.
ಮಾಜಿ ಟ್ರಾವೆಲ್ ಏಜೆಂಟ್ ಆಗಿದ್ದ ಕರೀಂ ಲಾಲ್ ತೆಲಗಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ನಕಲಿ ಸ್ಟ್ಯಾಂಪ್ ಪೇಪರ್ ದಂಧೆ ನಡೆಸುತ್ತಿದ್ದ. ಸುಮಾರು ದಶಕಗಳ ಕಾಲ ಕಳ್ಳ ವ್ಯವಹಾರ ನಡೆಸುತ್ತಿದ್ದ ತೆಲಗಿಯನ್ನು ಕರ್ನಾಟಕ ಪೊಲೀಸರು 2001ರಲ್ಲಿ ಬಂಧಿಸಿದ್ದರು. ಸುಮಾರು 11 ರಾಜ್ಯಗಳಲ್ಲಿ ಹಲವಾರು ಕೇಸ್ ಗಳು ತೆಲಗಿ ವಿರುದ್ಧ ದಾಖಲಾಗಿದ್ದವು. ಸರ್ಕಾರಿ ಅಧಿಕಾರಿಗಳ ಶಾಮೀಲಿನೊಂದಿಗೆ ತೆಲಗಿ ಈ ನಕಲಿ ಛಾಪಾ ಕಾಗದದ ಜಾಲ ನಡೆಸುತ್ತಿದ್ದ. ಈ ಹಗರಣದಲ್ಲಿ ಹಲವಾರು ಉನ್ನತ ಹುದ್ದೆಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳ ಹೆಸರು ಬಯಲಿಗೆ ಬಂದಿತ್ತು. ಸುಮಾರು 18 ರಾಜ್ಯಗಳ 70 ನಗರಗಳಲ್ಲಿ 350 ಏಜೆಂಟರುಗಳ ಮೂಲಕ ತೆಲಗಿ ಈ ಜಾಲ ನಡೆಸುತ್ತಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ