ಚಿತ್ರಪ್ರದರ್ಶನಕ್ಕಿಂತ ಮೊದಲು ರಾಷ್ಟ್ರಗೀತೆ ಕಡ್ಡಾಯವಲ್ಲ; ಸುಪ್ರೀಂ
Team Udayavani, Jan 9, 2018, 1:53 PM IST
ನವದೆಹಲಿ: ಚಿತ್ರಮಂದಿರಗಳಲ್ಲಿ ಪ್ರತಿ ಸಿನಿಮಾ ಪ್ರದರ್ಶನದ ಆರಂಭಕ್ಕೂ ಮೊದಲು ರಾಷ್ಟ್ರಗೀತೆ ಕಡ್ಡಾಯ ಎಂದು ಈ ಹಿಂದೆ ನೀಡಿರುವ ಆದೇಶವನ್ನು ಸುಪ್ರೀಂಕೋರ್ಟ್ ಮಂಗಳವಾರ ಪರಿಷ್ಕರಿಸಿದ್ದು, ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಲ್ಲ ಎಂದು ಹೇಳಿದೆ.
ಚಿತ್ರಪ್ರದರ್ಶನಕ್ಕಿಂತ ಮೊದಲು ರಾಷ್ಟ್ರಗೀತೆ ಕಡ್ಡಾಯವಲ್ಲ ಎಂದು ಸುಪ್ರೀಂಕೋರ್ಟ್ ತಾನು ಈ ಹಿಂದೆ ನೀಡಿರುವ ಆದೇಶದ ಬಗ್ಗೆ ಸ್ಪಷ್ಟನೆ ನೀಡಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ನಿಯಮಾವಳಿ ರೂಪಿಸುವಂತೆ ಸೂಚಿಸಿದೆ.
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಎಂದು ಸುಪ್ರೀಂಕೋರ್ಟ್ 2016ರ ನವೆಂಬರ್ ನಲ್ಲಿ ಆದೇಶ ನೀಡಿತ್ತು. ಅನಂತರದಲ್ಲಿ ಕೇಂದ್ರ ಸರಕಾರ ಕೂಡ ಸುಪ್ರೀಂ ನಿರ್ಧಾರಕ್ಕೆ ಸಹಮತ ವ್ಯಕ್ತಪಡಿಸಿ, ವೈವಿಧ್ಯತೆಯುಳ್ಳ ಭಾರತದಂಥ ದೇಶದಲ್ಲಿ ರಾಷ್ಟ್ರಗೀತೆ ಜನರನ್ನು ಒಂದುಗೂಡಿಸುತ್ತದೆ ಎಂದಿತ್ತು.
ಏತನ್ಮಧ್ಯೆ ಸಿನಿಮಾ ಹಾಲ್ ಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಎಂಬ ಆದೇಶವನ್ನು ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಮನವಿ ಮಾಡಿತ್ತು.
ಕೇಂದ್ರಕ್ಕೆ ತರಾಟೆ: ಕಳೆದ ಅ. 23ರಂದು ಈ ಸಂಬಂಧ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ದೇಶಭಕ್ತಿ ವಿಚಾರದಲ್ಲಿ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿತ್ತು. ಪ್ರತಿಯೊಬ್ಬರು ತಮ್ಮ ಭುಜದ ಮೇಲೆ ದೇಶಭಕ್ತಿಯ ಸಂಕೇತವನ್ನು ಹೊಂದಿರಬೇಕು. ಈ ಮೂಲಕ ದೇಶಭಕ್ತಿ ಪ್ರದರ್ಶಿಸಬೇಕು ಎಂದು ಹೇಳುವುದು ಸರಿಯಲ್ಲ. ಅಲ್ಲದೆ ಈ ವಿಚಾರದಲ್ಲಿ ಜನರ ದೇಶಭಕ್ತಿ ಪರೀಕ್ಷಿಸುವುದೂ ಸರಿಯಲ್ಲ. ಇಂಥ ನಿರ್ಧಾರಗಳು ಕೋರ್ಟ್ ಕಡೆಯಿಂದಲೇ ಬರಬೇಕು ಎಂದು ಏಕೆ ಬಯಸುತ್ತೀರಿ ಎಂದು ಹೇಳುವ ಮೂಲಕ ಹಿಂದಿನ ಆದೇಶ ವಾಪಸ್ ತೆಗೆದುಕೊಳ್ಳುವ ಬಗ್ಗೆ ಸುಳಿವು ನೀಡಿತ್ತು. ಆಗ ಕೇಂದ್ರದ ಪರ ಹಾಜರಾಗಿದ್ದ ಅಟಾರ್ನಿ ಜನರಲ್ ಸಿನೆಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡುವುದು ಸರಿ ಎಂದೇ ವಾದ ಮಾಡಿ, ಇದು ಏಕತೆ ಸಾರುತ್ತದೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ