ವಿವಾದದ ಮಧ್ಯೆಯೇ ಸಿನಿಮಾ ಪ್ರಶಸ್ತಿ ಪ್ರದಾನ


Team Udayavani, May 4, 2018, 8:00 AM IST

Film-Award-3-5.jpg

ಹೊಸದಿಲ್ಲಿ: ಈ ಬಾರಿಯ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ವಿವಾದದ ಗೂಡಾಗಿದೆ. 65 ವರ್ಷಗಳಿಂದಲೂ ಪ್ರಶಸ್ತಿ ಪುರಸ್ಕೃತರಿಗೆ ರಾಷ್ಟ್ರಪತಿಯೇ ಪ್ರಶಸ್ತಿ ಪ್ರದಾನ ಮಾಡುತ್ತಿದ್ದರು. ಆದರೆ ಈ ಬಾರಿ ಕೇವಲ 11 ಪುರಸ್ಕೃತರಿಗೆ ಮಾತ್ರವೇ ರಾಷ್ಟ್ರಪತಿ ಪ್ರದಾನ ಮಾಡಿದ್ದು, ಇತರರಿಗೆ ಸಚಿವೆ ಸ್ಮತಿ ಇರಾನಿ ಮತ್ತು ಸಚಿವ ರಾಜ್ಯವರ್ಧನ ರಾಥೋಡ್‌ ಪ್ರದಾನ ಮಾಡಿದ್ದಾರೆ. ಬುಧವಾರ ಈ ವಿಷಯ ತಿಳಿಯುತ್ತಿದ್ದಂತೆಯೇ 60 ಕ್ಕೂ ಹೆಚ್ಚು ಪುರಸ್ಕೃತರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಕಾರ್ಯಕ್ರಮಕ್ಕೆ ಹಾಜರಾಗಲ್ಲ ಎಂದು ರಾಷ್ಟ್ರಪತಿಗಳಿಗೆ ಪತ್ರ ಬರೆದದ್ದಲ್ಲದೆ, ಸಮಾರಂಭಕ್ಕೆ ಗೈರಾಗಿದ್ದಾರೆ.

ಮಾಮ್‌ ಸಿನಿಮಾಗಾಗಿ ನಟಿ ಶ್ರೀದೇವಿಗೆ ಘೋಷಿಸಲಾದ ಪುರಸ್ಕಾರವನ್ನು ಪತಿ ಬೋನಿ ಕಪೂರ್‌, ಪುತ್ರಿಯರಾದ ಜಾಹ್ನವಿ ಮತ್ತು ಖುಷಿ ಸ್ವೀಕರಿಸಿದರು. ವಿನೋದ್‌ ಖನ್ನಾಗೆ ಘೋಷಿಸಲಾದ ದಾದಾಸಾಹೇಬ್‌ ಫಾಲ್ಕೆ ಪುರಸ್ಕಾರವನ್ನು ಅಕ್ಷಯ್‌ ಖನ್ನಾ ಮತ್ತು ಕವಿತಾ ಖನ್ನಾ ಸ್ವೀಕರಿಸಿದರು. ಇವರೂ ಸೇರಿ 11 ಗಣ್ಯರಿಗೆ ಕೋವಿಂದ್‌ ಪ್ರಶಸ್ತಿ ನೀಡಿದರು.
 
ಖ್ಯಾತ ಹಿನ್ನೆಲೆ ಗಾಯಕ ಕೆ.ಜೆ.ಯೇಸುದಾಸ್‌ ಹಾಗೂ ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್‌ ಅವರೂ ಕಾರ್ಯಕ್ರಮದಲ್ಲಿ ಹಾಜರಿದ್ದರು. ಮಲಯಾಳಂ ನಿರ್ದೇಶಕ ಜಯರಾಜ್‌, ಮರಾಠಿ ನಿರ್ದೇಶಕ ನಾಗರಾಜ್‌ ಮಂಜುಳೆ ಸಹಿತ ಹಲವರು ಸಮಾರಂಭಕ್ಕೆ ಗೈರಾಗಿದ್ದಾರೆ. ಪ್ರತಿಭಟನಾರ್ಥವಾಗಿ ಕಳುಹಿಸಿದ ಪತ್ರಕ್ಕೂ ಸಹಿ ಹಾಕಿದ್ದಾರೆ. ಈ ಪತ್ರಕ್ಕೆ ಯೇಸುದಾಸ್‌ ಕೂಡ ಸಹಿ ಹಾಕಿದ್ದಾರೆ. ರಾಷ್ಟ್ರಪತಿ ಕಾರ್ಯಾಲಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಯಾವುದೇ ಪ್ರಶಸ್ತಿ ಸಮಾರಂಭದಲ್ಲಿ 1 ಗಂಟೆಗಿಂತ ಹೆಚ್ಚು ಕಾಲ ಕೋವಿಂದ್‌ ಅವರು ಹಿಂದಿನಿಂದಲೂ ಭಾಗವಹಿಸುತ್ತಿಲ್ಲ ಎಂದು ಹೇಳಿದೆ.

ರಾಜ್ಯದವರಿಂದಲೂ ವಿರೋಧ
65ನೇ ರಾಷ್ಟ್ರಪ್ರಶಸ್ತಿ ವಿಜೇತರಿಗೆ ರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡದಿರುವುದನ್ನು ಕರ್ನಾಟಕದ ಪ್ರಶಸ್ತಿ ವಿಜೇತರು ಕೂಡ ವಿರೋಧಿಸಿದ್ದಾರೆ. 65ನೇ ರಾಷ್ಟ್ರಪ್ರಶಸ್ತಿಯಲ್ಲಿ ಕರ್ನಾಟಕಕ್ಕೆ ಮೂರು ಪ್ರಶಸ್ತಿಗಳು ಬಂದಿದ್ದವು. ವಿಜೇತರಾದ ನಿರ್ದೇಶಕ ನಂಜುಂಡೇಗೌಡ, ಅಭಯ್‌ ಸಿಂಹ ಹಾಗೂ ಗೀತರಚನೆಕಾರ ಜೆ.ಎಂ.ಪ್ರಹ್ಲಾದ್‌ ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ತೆರಳಿದ್ದರು. ಆದರೆ, ವಿವಾದದ ಹಿನ್ನೆಲೆಯಲ್ಲಿ ಇವರೂ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಈ ಕುರಿತು ‘ಉದಯವಾಣಿ’ ಜತೆ  ಮಾತನಾಡಿದ “ಪಡ್ಡಾಯಿ’ ನಿರ್ದೇಶಕ ಅಭಯ್‌ ಸಿಂಹ, ‘ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸದಿರುವುದು ಬೇಸರವಾಗಿದೆ. ಹೀಗಾಗಿ ಸಮಾರಂಭಕ್ಕೆ ಹೋಗದೆ, ಬೆಂಗಳೂರಿಗೆ ವಾಪಸ್‌ ಆಗುತ್ತೇವೆ’ ಎಂದಿದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.