ವಿವಾದದ ಮಧ್ಯೆಯೇ ಸಿನಿಮಾ ಪ್ರಶಸ್ತಿ ಪ್ರದಾನ
Team Udayavani, May 4, 2018, 8:00 AM IST
ಹೊಸದಿಲ್ಲಿ: ಈ ಬಾರಿಯ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ವಿವಾದದ ಗೂಡಾಗಿದೆ. 65 ವರ್ಷಗಳಿಂದಲೂ ಪ್ರಶಸ್ತಿ ಪುರಸ್ಕೃತರಿಗೆ ರಾಷ್ಟ್ರಪತಿಯೇ ಪ್ರಶಸ್ತಿ ಪ್ರದಾನ ಮಾಡುತ್ತಿದ್ದರು. ಆದರೆ ಈ ಬಾರಿ ಕೇವಲ 11 ಪುರಸ್ಕೃತರಿಗೆ ಮಾತ್ರವೇ ರಾಷ್ಟ್ರಪತಿ ಪ್ರದಾನ ಮಾಡಿದ್ದು, ಇತರರಿಗೆ ಸಚಿವೆ ಸ್ಮತಿ ಇರಾನಿ ಮತ್ತು ಸಚಿವ ರಾಜ್ಯವರ್ಧನ ರಾಥೋಡ್ ಪ್ರದಾನ ಮಾಡಿದ್ದಾರೆ. ಬುಧವಾರ ಈ ವಿಷಯ ತಿಳಿಯುತ್ತಿದ್ದಂತೆಯೇ 60 ಕ್ಕೂ ಹೆಚ್ಚು ಪುರಸ್ಕೃತರು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಕಾರ್ಯಕ್ರಮಕ್ಕೆ ಹಾಜರಾಗಲ್ಲ ಎಂದು ರಾಷ್ಟ್ರಪತಿಗಳಿಗೆ ಪತ್ರ ಬರೆದದ್ದಲ್ಲದೆ, ಸಮಾರಂಭಕ್ಕೆ ಗೈರಾಗಿದ್ದಾರೆ.
ಮಾಮ್ ಸಿನಿಮಾಗಾಗಿ ನಟಿ ಶ್ರೀದೇವಿಗೆ ಘೋಷಿಸಲಾದ ಪುರಸ್ಕಾರವನ್ನು ಪತಿ ಬೋನಿ ಕಪೂರ್, ಪುತ್ರಿಯರಾದ ಜಾಹ್ನವಿ ಮತ್ತು ಖುಷಿ ಸ್ವೀಕರಿಸಿದರು. ವಿನೋದ್ ಖನ್ನಾಗೆ ಘೋಷಿಸಲಾದ ದಾದಾಸಾಹೇಬ್ ಫಾಲ್ಕೆ ಪುರಸ್ಕಾರವನ್ನು ಅಕ್ಷಯ್ ಖನ್ನಾ ಮತ್ತು ಕವಿತಾ ಖನ್ನಾ ಸ್ವೀಕರಿಸಿದರು. ಇವರೂ ಸೇರಿ 11 ಗಣ್ಯರಿಗೆ ಕೋವಿಂದ್ ಪ್ರಶಸ್ತಿ ನೀಡಿದರು.
ಖ್ಯಾತ ಹಿನ್ನೆಲೆ ಗಾಯಕ ಕೆ.ಜೆ.ಯೇಸುದಾಸ್ ಹಾಗೂ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರೂ ಕಾರ್ಯಕ್ರಮದಲ್ಲಿ ಹಾಜರಿದ್ದರು. ಮಲಯಾಳಂ ನಿರ್ದೇಶಕ ಜಯರಾಜ್, ಮರಾಠಿ ನಿರ್ದೇಶಕ ನಾಗರಾಜ್ ಮಂಜುಳೆ ಸಹಿತ ಹಲವರು ಸಮಾರಂಭಕ್ಕೆ ಗೈರಾಗಿದ್ದಾರೆ. ಪ್ರತಿಭಟನಾರ್ಥವಾಗಿ ಕಳುಹಿಸಿದ ಪತ್ರಕ್ಕೂ ಸಹಿ ಹಾಕಿದ್ದಾರೆ. ಈ ಪತ್ರಕ್ಕೆ ಯೇಸುದಾಸ್ ಕೂಡ ಸಹಿ ಹಾಕಿದ್ದಾರೆ. ರಾಷ್ಟ್ರಪತಿ ಕಾರ್ಯಾಲಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಯಾವುದೇ ಪ್ರಶಸ್ತಿ ಸಮಾರಂಭದಲ್ಲಿ 1 ಗಂಟೆಗಿಂತ ಹೆಚ್ಚು ಕಾಲ ಕೋವಿಂದ್ ಅವರು ಹಿಂದಿನಿಂದಲೂ ಭಾಗವಹಿಸುತ್ತಿಲ್ಲ ಎಂದು ಹೇಳಿದೆ.
ರಾಜ್ಯದವರಿಂದಲೂ ವಿರೋಧ
65ನೇ ರಾಷ್ಟ್ರಪ್ರಶಸ್ತಿ ವಿಜೇತರಿಗೆ ರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡದಿರುವುದನ್ನು ಕರ್ನಾಟಕದ ಪ್ರಶಸ್ತಿ ವಿಜೇತರು ಕೂಡ ವಿರೋಧಿಸಿದ್ದಾರೆ. 65ನೇ ರಾಷ್ಟ್ರಪ್ರಶಸ್ತಿಯಲ್ಲಿ ಕರ್ನಾಟಕಕ್ಕೆ ಮೂರು ಪ್ರಶಸ್ತಿಗಳು ಬಂದಿದ್ದವು. ವಿಜೇತರಾದ ನಿರ್ದೇಶಕ ನಂಜುಂಡೇಗೌಡ, ಅಭಯ್ ಸಿಂಹ ಹಾಗೂ ಗೀತರಚನೆಕಾರ ಜೆ.ಎಂ.ಪ್ರಹ್ಲಾದ್ ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ತೆರಳಿದ್ದರು. ಆದರೆ, ವಿವಾದದ ಹಿನ್ನೆಲೆಯಲ್ಲಿ ಇವರೂ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಈ ಕುರಿತು ‘ಉದಯವಾಣಿ’ ಜತೆ ಮಾತನಾಡಿದ “ಪಡ್ಡಾಯಿ’ ನಿರ್ದೇಶಕ ಅಭಯ್ ಸಿಂಹ, ‘ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸದಿರುವುದು ಬೇಸರವಾಗಿದೆ. ಹೀಗಾಗಿ ಸಮಾರಂಭಕ್ಕೆ ಹೋಗದೆ, ಬೆಂಗಳೂರಿಗೆ ವಾಪಸ್ ಆಗುತ್ತೇವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ