ದೇವಿಂದರ್ ಗಿತ್ತೇ ISI ಸಂಪರ್ಕ ; ಈತನ ಮಕ್ಕಳು ಬಾಂಗ್ಲಾದಲ್ಲಿ ಕಲಿಯುತ್ತಿರುವುದೇಕೆ?


Team Udayavani, Jan 19, 2020, 6:58 PM IST

Davinder-Singh-DSP-730

ನವದೆಹಲಿ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಸ್ವಯಂಘೋಷಿತ ಕಮಾಂಡರ್ ನವೀದ್ ಬಾಬು ಹಾಗೂ ಅತೀಫ್ ಮತ್ತು ವಕೀಲ ಇರ್ಫಾನ್ ಮಿರ್ ಅವರನ್ನು ತನ್ನ ಪೊಲೀಸ್ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಭದ್ರತಾ ಪಡೆಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಡಿಎಸ್.ಪಿ. ದೇವಿಂದರ್ ಸಿಂಗ್ ಅವರನ್ನು ಎನ್.ಐ.ಎ. ಕಳೆದ ಕೆಲವು ದಿನಗಳಿಂದ ತೀವ್ರ ತಪಾಸಣೆಗೆ ಒಳಪಡಿಸುತ್ತಿದೆ.

ಇದೀಗ ಕೇಂದ್ರ ಗೃಹಸಚಿವಾಲಯದ ಆದೇಶದ ಮೇಲೆ ರಾಷ್ಟ್ರೀಯ ತನಿಖಾ ತಂಡವು ದೇವಿಂದರ್ ಮೇಲೆ ಅಧಿಕೃತ ಪ್ರಕರಣವನ್ನು ದಾಖಲು ಮಾಡಿಕೊಂಡಿದೆ. ಮತ್ತು ಪಾಕಿಸ್ಥಾನಿ ಗುಪ್ತಚರ ಇಲಾಖೆ ಐ.ಎಸ್.ಐ. ಜೊತೆಗೆ ದಾವಿಂದರ್ ಗಿರುವ ನಂಟಿನ ಜಾಡಿನಲ್ಲಿ ತನ್ನ ತನಿಖೆಯನ್ನು ಮುಂದುವರಿಸಿದೆ.

2019ರಲ್ಲಿ ದೇವಿಂದರ್ ಬಾಂಗ್ಲಾದೇಶಕ್ಕೆ ಮೂರು ಸಲ ಭೇಟಿ ಕೊಟ್ಟಿರುವುದು ಹಲವಾರು ಸಂಶಯಗಳನ್ನು ಹುಟ್ಟುಹಾಕಿದೆ.  ತಮ್ಮ ಈ ಮೂರು ಭೇಟಿಯ ಅವಧಿಯಲ್ಲೂ ಸಹ ದೇವಿಂದರ್ ಅಲ್ಲಿ ಹಲವು ದಿನಗಳ ಕಾಲ ತಂಗಿದ್ದರು. ಮಾತ್ರವಲ್ಲದೇ ದೇವಿಂದರ್ ಅವರ ಇಬ್ಬರು ಪುತ್ರಿಯರು ಬಾಂಗ್ಲಾದೇಶದಲ್ಲಿ ಕಲಿಯುತ್ತಿರುವ ಮಾಹಿತಿಯೂ ಸಹ ತನಿಖಾ ಸಂಸ್ಥೆಗಳಿಗೆ ಲಭ್ಯವಾಗಿದ್ದು, ಐ.ಎಸ್.ಐ. ಸಂಘಟನೆಯೇ ಇವರಿಬ್ಬರ ಕಲಿಕಾ ಖರ್ಚು-ವೆಚ್ಚಗಳನ್ನು ನೋಡಿಕೊಳ್ಳುತ್ತಿರುವ ಸಂದೇಹ ಇದೀಗ ವ್ಯಕ್ತವಾಗಿದೆ.

ಈ ಎಲ್ಲಾ ಹಿನ್ನಲೆಯಲ್ಲಿ ದೇವಿಂದರ್ ಅವರು ಐ.ಎಸ್.ಐ. ಏಜೆಂಟ್ ಗಳನ್ನು ಢಾಕಾ ಅಥವಾ ಬಾಂಗ್ಲಾದೇಶದಲ್ಲಿ ಭೇಟಿಯಾಗಿದ್ದರೇ ಎಂಬುದನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಅವರ ವಿಚಾರಣೆಯನ್ನು ತೀವ್ರಗೊಳಿಸುವ ಸಾಧ್ಯತೆಗಳಿವೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆ ಹಾಗೂ ಇತರೇ ಏಜೆನ್ಸಿಗಳು ಈಗಾಗಲೇ ದೇವಿಂದರ್ ಅವರ ಬ್ಯಾಂಕ್ ಅಕೌಂಟ್ ಗಳ ಪರಿಶೀಲನೆಯನ್ನು ನಡೆಸಿದ್ದು ಯಾವುದಾದರೂ ಶಂಕಾಸ್ಪದ ಹಣಕಾಸಿನ ವ್ಯವಹಾರಗಳು ನಡೆದಿವೆಯೋ ಎಂಬ ಪರಿಶೀಲನೆಯನ್ನೂ ಸಹ ನಡೆಸಿವೆ. ಆದರೆ ದೇವಿಂದರ್ ಸಿಂಗ್ ಅವರ ಮನೆಯಲ್ಲಿ ಸಿಕ್ಕಿದ 7.5 ಲಕ್ಷ ರೂಪಾಯಿ ಹಣದ ಮೂಲ ಮಾತ್ರ ಇದುವರೆಗೂ ಪತ್ತೆಯಾಗಿಲ್ಲ.

ದೇವಿಂದರ್ ಜೊತೆ ಕಾರಿನಲ್ಲಿ ಸೆರೆ ಸಿಕ್ಕಿದ ಹಿಜ್ಬುಲ್ ಉಗ್ರ ನವೀದ್ ಬಾಬು ತಲೆಯ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈಗಾಗಲೇ 20 ಲಕ್ಷ ರೂಪಾಯಿಗಳ ಬಹುಮಾನವನ್ನು ಘೋಷಿಸಿದ್ದರು. ಆದರೆ ಅತನನ್ನು ಬಂಧಿಸುವ ಬದಲು ದೇವಿಂದರ್ ಸಿಂಗ್ ಆತನನ್ನು ಸುರಕ್ಷಿತವಾಗಿ ದೆಹಲಿ ತಲುಪಿಸಲು ಆತನಿಂದ 12 ಲಕ್ಷ ರೂಪಾಯಿಗಳನ್ನು ಪಡೆದುಕೊಂಡಿರುವುದು ವಿಚಿತ್ರವಾಗಿದೆ.

ದೇವಿಂದರ್ ಈ ಮೊದಲು 1990ರಲ್ಲಿ ಪಾಕಿಸ್ಥಾನದ ಉಗ್ರ ಮಹಮ್ಮದ್ ಗೆ ಕಾಶ್ಮೀರದಿಂದ ದೆಹಲಿಗೆ ಸುರಕ್ಷಿತವಾಗಿ ಹೋಗಲು ಸಹಾಯ ಮಾಡಿದ್ದ. ಇದೇ ಮಹಮ್ಮದ್ ಬಳಿಕ 2001ರ ಸಂಸತ್ ಭವನದ ಮೇಲಿನ ದಾಳಿಯಲ್ಲಿ ಭದ್ರತಾ ಪಡೆಗಳ ಕೈಯಿಂದ ಹತನಾಗಿದ್ದ. ಮಾತ್ರವಲ್ಲದೇ ದೇವಿಂದರ್ 2005ರಲ್ಲಿ ಬಂಧನಕ್ಕೊಳಗಾಗಿದ್ದ ನಾಲ್ಕು ಜನ ಕಾಶ್ಮೀರಿ ಉಗ್ರರಿಗೂ ಸಹ ದೇವಿಂದರ್ ಸುರಕ್ಷಿತವಾಗಿ ಸಾಗಲು ಸಹಾಯ ಮಾಡಿದ್ದ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ಇವರಲ್ಲಿ ಒಬ್ಬ ಉಗ್ರನಿಗೆ ವಯರ್ ಲೆಸ್ ಸೆಟ್, ಒಂದು ಪಿಸ್ತೂಲ್ ಹಾಗೂ ಸುರಕ್ಷಿತವಾಗಿ ಪಾರಾಗಲು ಅಗತ್ಯವಾಗಿದ್ದ ಶಿಫಾರಸು ಪತ್ರವನ್ನೂ ಸಹ ನೀಡಿದ್ದ ಎಂಬ ಮಾಹಿತಿ ಲಭಿಸಿದೆ.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.