CAA, NRC ಬಳಿಕ ಎನ್ ಪಿಆರ್ ಗೆ ಕೇಂದ್ರ ಸಂಪುಟ ಅಸ್ತು; ಏನಿದು, ಇದಕ್ಕೂ ವಿರೋಧವೇಕೆ?
ರಾಷ್ಟ್ರೀಯ ಜನಸಂಖ್ಯಾ ನೋಂದಣಿ ದತ್ತಾಂಶ ಸಂಗ್ರಹಿಸುವ ಈ ಯೋಜನೆಗೆ 8,500 ಕೋಟಿ ರೂಪಾಯಿ ವ್ಯಯ
Team Udayavani, Dec 24, 2019, 4:12 PM IST
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ನಂತರ ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್ ಪಿಆರ್) ಮಾಹಿತಿ ಸಂಗ್ರಹ ಮೇಲ್ದರ್ಜೆಗೇರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮತಿ ನೀಡಿದ್ದು, ಎನ್ ಪಿಆರ್ ಜನಗಣತಿ ಜತೆ ಜೋಡಣೆಯಾಗಲಿದೆ ಎಂದು ವರದಿ ತಿಳಿಸಿದೆ.
ರಾಷ್ಟ್ರೀಯ ಜನಸಂಖ್ಯಾ ನೋಂದಣಿ ದತ್ತಾಂಶ ಸಂಗ್ರಹಿಸುವ ಈ ಯೋಜನೆಗೆ 8,500 ಕೋಟಿ ರೂಪಾಯಿ ವ್ಯಯವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಜನಗಣತಿ ಆಯೋಗದ ಪ್ರಕಾರ, ದೇಶದ ಪ್ರತಿಯೊಬ್ಬ ಪ್ರಜೆಯ ಗುರುತಿನ ಸಮಗ್ರ ಮಾಹಿತಿಯನ್ನೊಳಗೊಂಡ ದತ್ತಾಂಶದ ಸಂಗ್ರಹವೇ ಎನ್ ಪಿಆರ್ (ರಾಷ್ಟ್ರೀಯ ಜನಸಂಖ್ಯಾ ನೋಂದಣಿ) ಎಂದು ವಿವರಿಸಿದೆ.
ಕೇಂದ್ರದ ಗ್ರೀನ್ ಸಿಗ್ನಲ್ ನಂತರ ಜನಗಣತಿ ದೇಶಾದ್ಯಂತ 2020ರ ಏಪ್ರಿಲ್ 1ರಿಂದ ಆರಂಭವಾಗಲಿದೆ. ಕಾಯ್ದೆಯ ಪ್ರಕಾರ, ಸಾಮಾನ್ಯ ನಿವಾಸಿಯೊಬ್ಬರು ಒಂದು ಪ್ರದೇಶದಲ್ಲಿ ಆರು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ವಾಸ್ತವ್ಯ ಹೂಡಿದ್ದರೆ. ಪ್ರತಿಯೊಬ್ಬ ನಾಗರಿಕನೂ (ಎನ್ ಪಿಆರ್) ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.
ಏತನ್ಮಧ್ಯೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಿಎಎ, ಎನ್ ಸಿಆರ್ ರೀತಿಯೇ ಎನ್ ಪಿಆರ್ ಅನ್ನು ವಿರೋಧಿಸಿದ್ದು, ಎನ್ ಪಿಆರ್ ಅಪ್ ಡೇಟ್ ಮಾಡುವ ಪ್ರಕ್ರಿಯೆಗೆ ಪಶ್ಚಿಮಬಂಗಾಳ ಸಹಕಾರ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಎನ್ ಪಿಆರ್ ರಾಷ್ಟ್ರೀಯ ಪೌರತ್ವ ನೋಂದಣಿಯ ಪೂರ್ವ ಭಾವಿ ತಯಾರಿಯಾಗಿದೆ ಎಂದು ಆರೋಪಿಸಿದ್ದಾರೆ.
ಪಶ್ಚಿಮಬಂಗಾಳ ರಾಜ್ಯದ ಜತೆಗೆ ಕೇರಳ, ಪಂಜಾಬ್ ಕೂಡಾ ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ವಿರೋಧ ವ್ಯಕ್ತಪಡಿಸಿದೆ. ಆದರೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಬೇರೆ ಆಯ್ಕೆಗಳಿಲ್ಲ. ಅದನ್ನು ಪ್ರತಿಯೊಬ್ಬ ನಾಗರಿಕನ ನೋಂದಣಿಯಾಗಲೇಬೇಕಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
MUST WATCH
ಹೊಸ ಸೇರ್ಪಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್