ಮಹಾರಾಷ್ಟ್ರದಲ್ಲಿ ಶಿವಸೇನೆ – ಎನ್.ಸಿ.ಪಿ. ಸರಕಾರ : ಪವಾರ್ ಸುಳಿವು

ಮಹಾರಾಷ್ಟ್ರದಲ್ಲಿ ಜನರ ಸರಕಾರಕ್ಕಾಗಿ ಶಿವಸೇನೆಯನ್ನು ಬೆಂಬಲಿಸಲು ಸಿದ್ಧ ಎಂದ ಎನ್.ಸಿ.ಪಿ.

Team Udayavani, Nov 3, 2019, 1:07 PM IST

Sharad-Pawar-726

ಮುಂಬೈ: ವಾಣಿಜ್ಯ ನಗರಿ ಮಾಹಾರಾಷ್ಟ್ರದಲ್ಲಿ ನೂತನ ಸರಕಾರ ರಚನೆಯ ಬಿಕ್ಕಟ್ಟು ಮುಂದುವರಿದಿದ್ದು ಹೊಸ ಬೆಳವಣಿಗೆಯಲ್ಲಿ ತನ್ನ ದೀರ್ಘಕಾಲದ ರಾಜಕೀಯ ಮಿತ್ರಪಕ್ಷವಾಗಿರುವ ಬಿಜೆಪಿಗೆ ಕೈಕೊಟ್ಟು ಶಿವಸೇನೆ ಸರಕಾರ ರಚಿಸುವ ಸಾಧ್ಯತೆ ದಟ್ಟವಾಗುತ್ತಿದೆ.

ಇದಕ್ಕೆ ಇಂಬು ನೀಡುವಂತೆ ಎನ್.ಸಿ,ಪಿ, ನಾಯಕರು ನೀಡುತ್ತಿರುವ ಹೇಳಿಕೆಗಳು ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸರಕಾರದ ಬದಲಿಗೆ ಶಿವಸೇನೆಯೇ ಇತರರ ಬೆಂಬಲದೊಂದಿಗೆ ಸರಕಾರ ರಚಿಸಲಿದೆಯೇ ಎಂಬ ಸಂದೇಹವೂ ಇದೀಗ ರಾಜಕೀಯ ವಲಯದಲ್ಲಿ ಬಲವಾಗುತ್ತಿದೆ.

‘ಛತ್ರಪತಿ ಶಿವಾಜಿ ಮಹಾರಾಜರ ಪರಿಕಲ್ಪನೆಯಾಗಿದ್ದ ‘ಜನ ಸರಕಾರ’ವನ್ನು ರೂಪಿಸುವ ಇರಾದೆಯೊಂದಿಗೆ ಶಿವಸೇನಾ ನಾಯಕರು ಎನ್.ಸಿ.ಪಿ. ಬೆಂಬಲವನ್ನು ಯಾಚಿಸಿದ ಪಕ್ಷದಲ್ಲಿ ಸರಕಾರ ರಚನೆಯಲ್ಲಿ ಭಾಗಿಯಾಗಲು ಪಕ್ಷದ ನಾಯಕ ಶರದ್ ಪವಾರ್ ಅವರು ತಮ್ಮ ಒಪ್ಪಿಗೆಯನ್ನು ಸೂಚಿಸಲಿದ್ದಾರೆ’ ಎಂದು ಎನ್.ಸಿ.ಪಿ. ಪಕ್ಷದ ಮಾಧ್ಯಮ ವಕ್ತಾರ ನವಾಬ್ ಮಲಿಕ್ ಅವರು ಹೇಳಿರುವುದು ಮಹಾರಾಷ್ಟ್ರದಲ್ಲಿ ಬಿಜೆಪಿಯೇತರ ಸರಕಾರ ಅಸ್ತಿತ್ವಕ್ಕೆ ಬರುವ ಸುಳಿವನ್ನು ನೀಡಿದೆ.

‘ಮಹಾರಾಷ್ಟ್ರದ ಜನರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಶಿವಸೇನಾ ನಾಯಕ ಉದ್ಭವ್ ಠಾಕ್ರೆ ಅವರು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವುದಾದರೆ ಅವರಿಗೆ ಉತ್ತಮ ಬದಲೀ ಆಯ್ಕೆಗಳು ಲಭಿಸಲಿವೆ’ ಎಂಬ ಮಾತನ್ನೂ ಸಹ ನವಾಬ್ ಮಲಿಕ್ ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಜನತೆ ತಮ್ಮ ಪಕ್ಷಕ್ಕೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಜನಾದೇಶವನ್ನು ನೀಡಿದ್ದಾರೆ ಹಾಗಾಗಿ ಎನ್.ಸಿ.ಪಿ. ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಲಿದೆ ಎಂಬ ಮಾತನ್ನು ಎನ್.ಸಿ.ಪಿ. ನಾಯಕ ಶರದ್ ಪವಾರ್ ಅವರು ಶುಕ್ರವಾರವಷ್ಟೇ ಹೇಳಿದ್ದರು. ಆದರೆ ಅದಾದ ಒಂದು ದಿನದ ಬಳಿಕ ಪಕ್ಷದ ವಕ್ತಾರರಿಂದ ಸಂಪೂರ್ಣ ಭಿನ್ನ ಹೇಳಿಕೆ ಬಂದಿರುವುದು ರಾಜಕೀಯ ಪಡಸಾಲೆಯಲ್ಲಿ ವಿವಿಧ ರೀತಿಯ ಚರ್ಚೆಗಳನ್ನು ಹುಟ್ಟು ಹಾಕಿದೆ.

288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 145 ಸ್ಥಾನಗಳ ಅಗತ್ಯವಿದೆ. ಸದ್ಯಕ್ಕೆ 105 ಸ್ಥಾನಗಳನ್ನು ಗೆದ್ದುಕೊಂಡಿರುವ ಭಾರತೀಯ ಜನತಾ ಪಕ್ಷ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೆ ಬಿಜೆಪಿಯ ಮಿತ್ರ ಪಕ್ಷ ಶಿವಸೇನೆ 56 ಸ್ಥಾನಗಳನ್ನು ಗೆದ್ದುಕೊಂಡು ನಂತರದ ಸ್ಥಾನದಲ್ಲಿದೆ. ಒಟ್ಟು 162 ಸ್ಥಾನಗಳನ್ನು ಹೊಂದಿರುವ ಈ ಎರಡೂ ಪಕ್ಷಗಳ ನಡುವೆ ಅಧಿಕಾರ ಸೂತ್ರ ಹಂಚಿಕೆಯಲ್ಲಿ ಭಿನ್ನಾಭಿಪ್ರಾಯ ಮೂಡಿರುವುದು ಸದ್ಯ ಮಹಾರಾಷ್ಟ್ರದಲ್ಲಿ ನೂತನ ಸರಕಾರ ರಚನೆಯ ಗೊಂದಲಕ್ಕೆ ಕಾರಣವಾಗಿದೆ.

ಇದೀಗ ತನ್ನ ರಾಜಕೀಯ ಮಿತ್ರ ಬಿಜೆಪಿಯನ್ನು ಹೊರಗಿರಿಸಿ ಸರಕಾರ ರಚಿಸಬೇಕಾದರೆ ಶಿವಸೇನೆಗೆ ಎನ್.ಸಿ.ಪಿ. ಬೆಂಬಲ ಮಾತ್ರವೇ ಸಾಕಾಗುವುದಿಲ್ಲ. ಬದಲಾಗಿ ಕಾಂಗ್ರೆಸ್ ಪಕ್ಷದ ಬೆಂಬಲವೂ ಅಗತ್ಯವಾಗಿರುತ್ತದೆ. ಶಿವಸೇನೆ, ಎನ್.ಸಿ.ಪಿ. ಮತ್ತು ಕಾಂಗ್ರೆಸ್ ಕೈಜೋಡಿಸಿದರೆ ಆಗ ಈ ಮೂರೂ ಪಕ್ಷಗಳ ಬಲಾಬಲ 154 ಆಗಲಿದೆ.

ಒಂದುವೇಳೆ ಶಿವಸೇನೆಗೆ ಎನ್.ಸಿ.ಪಿ. ಬೆಂಬಲ ನೀಡಿದರೆ ಈ ಎರಡು ಪಕ್ಷಗಳ ಬಲಾಬಲ 110 ಆಗಲಿದ್ದು ಆಗ ಬಹುಮತಕ್ಕೆ 35 ಸ್ಥಾನಗಳ ಕೊರತೆ ಎದುರಾಗಲಿದೆ. 13ಜನ ಪಕ್ಷೇತರರು, ಬಹುಜನ ವಿಕಾಸ್ ಅಘಾಡಿ ಪಕ್ಷದ 02 ಶಾಸಕರು ಮತ್ತು ಪಿಜೆಪಿ ಪಕ್ಷದ ಇಬ್ಬರು ಶಾಸಕರ ಬೆಂಬಲ ಲಭಿಸಿದರೂ ಒಟ್ಟು ಬಲಾಬಲ 127 ಮಾತ್ರವೇ ಆಗಲಿದ್ದು ಬಹುಮತಕ್ಕೆ 18 ಸ್ಥಾನಗಳು ಕಡಿಮೆ ಬೀಳಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ತೀರ್ಮಾನವೇ ಇಲ್ಲಿ ನಿರ್ಣಾಯಕವಾಗಲಿದೆ.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.