ಹೂಳು ತುಂಬಿಕೊಂಡ ಕಾರಣ ವಿದ್ಯುತ್ ಉತ್ಪಾದನೆಗೆ ತಡೆ
ಹೂಳು ತುಂಬಿದ ಕಾರಣ ದೇಶದ ಬೃಹತ್ ಸುರಂಗ ಜಲ ವಿದ್ಯುತ್ ಘಟಕದಲ್ಲಿ ಉತ್ಪಾದನೆ ಸ್ಥಗಿತ
Team Udayavani, Aug 18, 2019, 9:57 PM IST
ಶಿಮ್ಲಾ: ಸಟ್ಲೇಜ್ ನದಿಯ ಉಪನದಿ ಭಾಬಾ ಖಾಡ್ ನದಿಯಲ್ಲಿ ಹೂಳಿನ ಮಟ್ಟ ಹೆಚ್ಚಾಗಿರುವುದರಿಂದ ಹಿಮಾಚಲ ಪ್ರದೇಶದಲ್ಲಿರುವ ದೇಶದ ಅತೀದೊಡ್ಡ ಭೂಮಿ ಅಡಿ ಬಾಗದಲ್ಲಿ ಕಾರ್ಯ ನಿರ್ವಹಿಸುವ ಜಲವಿದ್ಯುತ್ ಘಟಕದಲ್ಲಿ ವಿದ್ಯುತ್ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಅನಿವಾರ್ಯತೆಗೆ ಘಟಕದ ಅಧಿಕಾರಿಗಳು ಸಿಲುಕಿದ್ದಾರೆ.
ಕಳೆದ ಕೆಲವು ದಿನಗಳಿಂದ ನದೀ ಪಾತ್ರವಿರುವ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದ ನದಿಯಲ್ಲಿ ಮಣ್ಣಿನ ಮಟ್ಟ ಹೆಚ್ಚು ತುಂಬಿಕೊಂಡಿದೆ. ಹೀಗಾಗಿ 1500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನಾ ಕಾರ್ಯದ ಜೊತೆಗೆ 421 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನಾ ಕಾರ್ಯವನ್ನೂ ಸಹ ಆದಿತ್ಯವಾರದಂದು ರದ್ದುಗೊಳಿಸಲಾಗಿದೆ.
ಕಿನ್ನೌರ್ ಜಿಲ್ಲೆಯಲ್ಲಿರುವ ನಾತ್ಪಾ ಝಾಕ್ರಿ ಆಣೆಕಟ್ಟು ಭಾಗದಲ್ಲಿ ಸಟ್ಲೇಜ್ ನದಿಯಲ್ಲಿ ಹೂಳಿನ ಮಟ್ಟ 8000 ಪಿಪಿಎಂ (ಪ್ರತೀ ಮಿಲಿಯನ್ ನಲ್ಲಿ ಒಂದು ಭಾಗ) ಮಟ್ಟವನ್ನು ದಾಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಟ್ಟ 5000 ಪಿಪಿಎಂಗೆ ಬರದ ಹೊರತಾಗಿ ಇಲ್ಲಿ ವಿದ್ಯುತ್ ಉತ್ಪಾದನೆ ಅಸಾಧ್ಯವಾಗಲಿದೆ ಎಂಬುದು ಅಧಿಕಾರಿಗಳ ಹೇಳಿಕೆಯಾಗಿದೆ. ಅಲ್ಲಿಯವರೆಗೆ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ ಬೇರೆ ವಿಧಿಯಿಲ್ಲ ಎಂದು ಜಲವಿದ್ಯುತ್ ಯೋಜನಾ ಘಟಕದ ಮುಖ್ಯಸ್ಥ ಸಂಜೀವ್ ಸೂದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್