ನೌಟಂಕಿ ಬಂದ್‌ ಕರೋ: ಕುಶಿನಗರ ಪ್ರತಿಭಟನಕಾರರಿಗೆ ಯೋಗಿ ತಿರುಗೇಟು


Team Udayavani, Apr 27, 2018, 11:55 AM IST

Kushinagar-CM-700.jpg

ಕುಶಿನಗರ : ಮಾನವ ಕಾವಲು ಇಲ್ಲದ ರೈಲ್ವೇ ಕ್ರಾಸಿಂಗ್‌ನಲ್ಲಿ  ಧಾವಿಸಿ ಬರುತ್ತಿದ್ದ ರೈಲಿಗೆ ಶಾಲಾ ವ್ಯಾನ್‌ ಢಿಕ್ಕಿ ಹೊಡೆದು 13 ಮಕ್ಕಳ ಸಾವಿಗೆ ಕಾರಣವಾದ ಭೀಕರ ದುರಂತದ ತಾಣಕ್ಕೆ ತೆರಳಿ ಸಂತ್ರಸ್ತರಿಗೆ ಸಾಂತ್ವನ ಹೇಳಲು ಹೋಗಿದ್ದಾಗ ಪ್ರತಿಭಟನಕಾರರಿಂದ ಮಾರ್ಗತಡೆ ಪ್ರತಿಭಟನೆಯನ್ನು ಎದುರಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಸಿಟ್ಟಿನ ಭರದಲ್ಲಿ ಮೆಗಾಫೋನ್‌ ಕೈಗೆತ್ತಿಕೊಂಡು  “ನಾರೇ ಬಾಜೀ ಬಂದ್‌ ಕರೋ, ನೌಟಂಕಿ ಬಂದ್‌ ಕರೋ (ಘೋಷಣೆ ಕೂಗುವುದನ್ನು ನಿಲ್ಲಿಸಿ, ನಾಟಕ ಮಾಡುವುದನ್ನು ನಿಲ್ಲಿಸಿ)’ ಎಂದು ಗುಡುಗಿದುದು ಹಲವರ ಹುಬ್ಬೇರಿಸಿದೆ; ಅನೇಕರ ಸಿಟ್ಟಿಗೆ ಕಾರಣವಾಗಿದೆ. 

“ನಾನಿಲ್ಲಿ ಬಂದಿರೋದು ಸಂತ್ರಸ್ತರಿಗೆ ಸಾಂತ್ವನ ಹೇಳಲು, ನೆರವಾಗಲು; ನೀವು ನನ್ನನ್ನು ಈ ರೀತಿ ತಡೆಯಲು ಸಾಧ್ಯವಿಲ್ಲ’ ಎಂದು ಸಿಎಂ ಯೋಗಿ ಹೇಳಿದ ಹೊರತಾಗಿಯೂ ಬಗ್ಗದ ಪ್ರತಿಭಟನಕಾರರು ರೈಲು ಹಳಿಯಲ್ಲಿ ಕುಳಿತು ಘೋಷಣೆ ಕೂಗಿ ಪ್ರತಿಭಟನೆ ಮುಂದುವರಿಸಿದರು. 

ಈ ರೀತಿಯ ದುರ್ಘ‌ಟನೆ ಭವಿಷ್ಯದಲ್ಲಿ ಪುನರಪಿ ನಡೆಯದಂತೆ ಮಾಡಲು ರೈಲ್ವೇ ಸಿಬಂದಿಗಳನ್ನು ಈ ಮಾನವ ಕಾವಲು ಇಲ್ಲದ ಕ್ರಾಸಿಂಗ್‌ಗೆ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. 

ಸಿಎಂ ಯೋಗಿ ಅವರಿಗೆ ಪ್ರತಿಭಟನೆ ತೋರಿದ ಎಸ್‌ಪಿ ಮತ್ತು ಬಿಎಸ್‌ಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ, “ಇಂತಹ ಕಾರುಣ್ಯಮಯ ವಿಷಯವನ್ನು ಅನಗತ್ಯವಾಗಿ ರಾಜಕೀಯ ಮಾಡಬೇಡಿ’ ಎಂದು ಸಿಎಂ ಆಕ್ರೋಶಭರಿತರಾಗಿಯೇ ಹೇಳಿದರು. 

ಸಿಎಂ ಯೋಗಿ ಅವರು ತಮ್ಮ ಆಕ್ರೋಶದ ಮಾತಿಗೆ ಎಲ್ಲೆಡೆಯಿಂದ ಖಂಡನೆ, ಟೀಕೆ, ಪ್ರತಿಭಟನೆ ಎದುರಿಸುತ್ತಿರುವುದನ್ನು ಕಂಡು ಬಿಜೆಪಿ ನಾಯಕ ಹಾಗೂ ಯುಪಿ ಸಚಿವ ಶ್ರೀಕಾಂತ ಶರ್ಮಾ ಅವರು “ಬಿಎಸ್‌ಪಿ, ಎಸ್‌ಪಿ ಈ ರೀತಿಯ ಕುತ್ಸಿತ ರಾಜಕಾರಣ ಮಾಡುವುದು ಸರಿಯಲ್ಲ; ಸಿಎಂ ಇಲ್ಲಿಗೆ ಬಂದಿರೋದು ಸಂತ್ರಸ್ತರಿಗೆ ನೆರವಾಗಿ ಸಾಂತ್ವನ ಹೇಳಲು ಎಂಬುದನ್ನು ಅವರು ತಿಳಿದಿರಬೇಕು’ ಎಂದು ಹೇಳಿದರು.  

ರೈಲಿಗೆ ಶಾಲಾ ವಾಹನ ಢಿಕ್ಕಿ ಹೊಡೆಯುವ ವೇಳೆ ಅದರ ಚಾಲಕನ ತನ್ನ ಕಿವಿಗೆ ಇಯರ್‌ ಫೋನ್‌ ಸಿಕ್ಕಿಸಿಕೊಂಡಿದ್ದ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಪೊಲೀಸರು ವ್ಯಾನ್‌ ಚಾಲಕ, ಶಾಲೆಯ ಪ್ರಾಂಶುಪಾಲ, ಆಡಳಿತ ವರ್ಗದ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.