ಉಗ್ರರಿಗೆ “ಬಡ್ಡಿ’ ಸಮೇತ ವಾಪಸ್‌ ನೀಡುತ್ತೇವೆ


Team Udayavani, Mar 2, 2019, 12:30 AM IST

v-47.jpg

ಕನ್ಯಾಕುಮಾರಿ: ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತವು ಎಂದೂ ಅಸಹಾಯಕವಾಗುವುದಿಲ್ಲ. ನವಭಾರತವು ಉಗ್ರರು ಮಾಡುವ ಹಾನಿಯನ್ನು “ಬಡ್ಡಿ ಸಮೇತ’ ವಾಪಸ್‌ ಕೊಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶುಕ್ರವಾರ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ, ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದನೆಯ ಪ್ರಭಾವವನ್ನು ನಾವು ಬೇರು ಸಮೇತ ಕಿತ್ತು ಹಾಕುತ್ತೇವೆ ಎಂದೂ ಶಪಥ ಮಾಡಿದ್ದಾರೆ. 

ಈ ವೇಳೆ, ವಾಯುಪಡೆಯ ವಿಂಗ್‌ ಕಮಾಂಡರ್‌ ಅಭಿನಂದನ್‌ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಅವರು, ಪಾಕ್‌ ಸೇನೆಯ ವಶದಲ್ಲಿದ್ದು ಮರಳಿರುವಂಥ ವೀರ ಯೋಧ ಅಭಿನಂದನ್‌ ಅವರು ತಮಿಳುನಾಡಿನವರಾಗಿದ್ದು, ಅವರ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ ಎಂದು ಹೇಳಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಸಮರವನ್ನು ಅನುಮಾನದಿಂದ ನೋಡುತ್ತಿರುವ ಪ್ರತಿಪಕ್ಷಗಳ ವಿರುದ್ಧವೂ ಅವರು ವಾಗ್ಧಾಳಿ ನಡೆಸಿದ್ದಾರೆ. ಇಡೀ ದೇಶವೇ ಸಶಸ್ತ್ರ ಪಡೆಗಳಿಗೆ ಬೆಂಬಲವಾಗಿ ನಿಂತಿದ್ದರೆ, ಅವರು ಮಾತ್ರ ಸಶಸ್ತ್ರ ಪಡೆಗಳನ್ನೇ ಅನುಮಾನದಿಂದ ನೋಡುತ್ತಾರೆ. ಅವರು ನಮ್ಮ ಸೇನಾಪಡೆಯನ್ನು ನಂಬುತ್ತಾರೋ ಅಥವಾ ತಮ್ಮ ನೆಲದಲ್ಲಿ ಉಗ್ರವಾದವನ್ನು ಪೋಷಿಸುವಂಥ ಶಕ್ತಿಗಳನ್ನು ನಂಬುತ್ತಾರೋ ಎಂಬುದನ್ನು ಸ್ಪಷ್ಟಪಡಿಸಬೇಕು. ಕೆಲವು ರಾಜಕೀಯ ಪಕ್ಷಗಳ ಈ ನಡೆಯು ಪಾಕಿಸ್ತಾನಕ್ಕೆ ವರದಾನವಾಗಿದೆ ಎಂದೂ ಮೋದಿ ಆರೋಪಿಸಿದ್ದಾರೆ. ಮೋದಿ ಬರುತ್ತಾರೆ, ಹೋಗುತ್ತಾರೆ. ಆದರೆ, ಭಾರತವು ಉಳಿಯುತ್ತದೆ ಎಂಬುದನ್ನೂ ಅವರು ಪುನರುಚ್ಚರಿಸಿದ್ದಾರೆ.

ಯುಪಿಎ ಸರ್ಕಾರದ ವಿರುದ್ಧ ಕಿಡಿ: ಹಿಂದಿನ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರವು 2008ರಲ್ಲಿ ಮುಂಬೈ ದಾಳಿ ನಡೆದಾಗ ಸರ್ಜಿಕಲ್‌ ದಾಳಿಯನ್ನು ನಡೆಸದಂತೆ ತಡೆದಿತ್ತು. 2004ರಿಂದ 2014ರ ಅವಧಿಯಲ್ಲಿ ಬೆಂಗಳೂರು, ಹೈದರಾಬಾದ್‌, ದೆಹಲಿ, ಮುಂಬೈ, ಪುಣೆಯಲ್ಲಿ ಹಲವು ಬಾಂಬ್‌ ಸ್ಫೋಟಗಳು ನಡೆದಿದುÌ. ಆದರೆ, ಇದು ನವ ಭಾರತ. ನಾವು ಉಗ್ರವಾದದ ವಿಚಾರದಲ್ಲಿ ಅಸಹಾಯಕರಾಗುವುದಿಲ್ಲ. ಉಗ್ರರು ನಮಗೆ ಏನು ಹಾನಿ ಮಾಡುತ್ತಾರೋ, ಅದನ್ನು ಬಡ್ಡಿ ಸಮೇತ ವಾಪಸ್‌ ನೀಡುತ್ತೇವೆ. ಉರಿ ದಾಳಿ ನಡೆದ ಮೇಲೆ ನಮ್ಮ ವೀರ ಯೋಧರು ಏನು ಮಾಡಿದರು, ಪುಲ್ವಾಮಾ ದಾಳಿಯ ಬಳಿಕ ನಮ್ಮ ವಾಯುಪಡೆ ಏನು ಮಾಡಿತು ಎಂಬುದನ್ನು ನೀವೇ ನೋಡಿದ್ದೀರಿ  ಎಂದೂ ಮೋದಿ ಹೇಳಿದ್ದಾರೆ. 

ಈ ನಡುವೆ, 2019ರ ಚುನಾವಣೆಯು ಸ್ಥಿರತೆ ಮತ್ತು ಅಸ್ಥಿರತೆಯ ನಡುವಿನ ಚುನಾವಣೆಯಾಗಿದೆ ಎಂದ ಅವರು, ನಮ್ಮ ದೇಶದ ಜನರಿಗೆ ಬೇಕಾಗಿರುವುದು ಡೆನಾಸ್ಟಿ(ವಂಶಾಡಳಿತ) ಅಲ್ಲ, ಹಾನೆಸ್ಟಿ(ಪ್ರಾಮಾಣಿಕತೆ) ಎಂದು ಹೇಳಿದ್ದಾರೆ. ದೇಶದ 130 ಕೋಟಿ ಜನರೇ ನನ್ನ ಕುಟುಂಬ. ನಾವು ಅವರಿಗಾಗಿಯೇ ಬದುಕುತ್ತೇನೆ, ಅವರಿಗಾಗಿಯೇ ಸಾಯುತ್ತೇನೆ ಎಂದೂ ಪ್ರಧಾನಿ ಹೇಳಿದ್ದಾರೆ.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.