ಮೋದಿ ಚರಿಷ್ಮಾಕ್ಕೆ ಹೆದರಿ ‘ಆಯುಷ್ಮಾನ್ ಭಾರತ್ ಬೇಡ’ವೆಂದ ಪಟ್ನಾಯಕ್
Team Udayavani, Jan 29, 2019, 11:24 AM IST
ಕುಲಿಯಾ: ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಅಮಿತ್ ಶಾ ಅವರು ನವೀನ್ ಪಟ್ನಾಯಕ್ ನೇತೃತ್ವದ ಆಡಳಿತಾರೂಢ ಬಿಜು ಜನತಾದಳ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿವಿಧ ಯೋಜನೆಗಳಡಿಯಲ್ಲಿ ಕೇಂದ್ರ ಸರಕಾರದಿಂದ ಒಡಿಶಾಗೆ ಸಾಕಷ್ಟು ಹಣ ಬರುತ್ತಿದ್ದರೂ ಅವುಗಳನ್ನು ರಾಜ್ಯದ ಫಲಾನುಭವಿಗಳಿಗೆ ತಲುಪಿಸುವಲ್ಲಿ ಒಡಿಶಾ ಸರಕಾರ ವಿಫಲವಾಗಿದೆ ಎಂದು ಶಾ ಕಿಡಿಕಾರಿದ್ದಾರೆ.
ರಾಜ್ಯ ಸರಕಾರದ ಸೀಮಿತ ಮನಸ್ಥಿತಿಯಿಂದಾಗಿ ಕೇಂದ್ರ ಸರಕಾರದ ಯೋಜನೆಗಳು ಇಲ್ಲಿನ ಬಡಕುಟುಂಬಗಳಿಗೆ ಸಿಗದಂತಾಗಿದೆ ಎಂದವರು ಹೇಳಿದರು. ನರೇಂದ್ರ ಮೋದಿಯವರ ಚರಿಷ್ಮಾ ಒಡಿಶಾದಲ್ಲಿ ಹೆಚ್ಚಾಗಬಹುದು ಎಂಬ ಒಂದೇ ಒಂದು ಕಾರಣಕ್ಕಾಗಿ ಪಟ್ನಾಯಕ್ ಸರಕಾರವು ಆಯುಷ್ಮಾನ್ ಭಾರತ ಯೋಜನೆಗೆ ಸೇರ್ಪಡೆಗೊಳ್ಳಲು ನಿರಾಕರಿಸಿದೆ ಎಂಬ ವಿಷಯವನ್ನು ಶಾ ಅವರು ಸಭೆಯಲ್ಲಿ ಬಹಿರಂಗಗೊಳಿಸಿದರು. ಒಡಿಶಾದ ಜನರೆಲ್ಲರೂ ಶ್ರಮಜೀವಿಗಳು ಮತ್ತು ಈ ರಾಜ್ಯವೂ ಪ್ರಾಕೃತಿಕ ಸಂಪನ್ಮೂಲಗಳಿಂದ ಸಂಪದ್ಭರಿತವಾಗಿದೆ ಆದರೂ ರಾಜ್ಯವು ಹಿಂದುಳಿಯಲು ರಾಜ್ಯಸರಕಾರದ ನಿರಾಸಕ್ತಿಯೇ ಕಾರಣ ಎಂದವರು ದೂರಿದರು.
ಬುಡಕಟ್ಟು ಸುಮದಾಯ ಸಹಿತ ಎಲ್ಲಾ ವರ್ಗಗಳ ಜನಸಮುದಾಯಕ್ಕೆ ಬೇಕಾಗುವಂತಹ ಯೋಜನೆಗಳನ್ನು ಜಾರಿಗೊಳಿಸಿರುವ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದವರು ವಿಶ್ವಾಸ ವ್ಯಕ್ತಪಡಿಸಿದರು. ‘ಮೋದಿಜಿಯವರ ನೇತೃತ್ವದಲ್ಲಿ ನಾವು ನವ ಒಡಿಶಾ ರೂಪುಗೊಳ್ಳುವಂತೆ ಮಾಡುತ್ತೇವೆ. ನಿರುದ್ಯೋಗ ರಹಿತ, ಉತ್ತಮ ಆರೋಗ್ಯ ಸೇವೆಗಳನ್ನು ಒಳಗೊಂಡಿರುವ ಮತ್ತು ಎಲ್ಲರೂ ಬಡತನ ರೇಖೆಗಿಂತ ಮೇಲಿರುವ ಆದರ್ಶ ಒಡಿಶಾ ನಿರ್ಮಾಣ ನಮ್ಮ ಧ್ಯೇಯವಾಗಿದೆ..’ ಎಂದು ಶಾ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ