ಸಿಧುಗೆ ಜೈಲಲ್ಲಿ ವಿಶೇಷ ಟೀ, ಸೌತೆಕಾಯಿ ಜ್ಯೂಸ್‌!


Team Udayavani, May 27, 2022, 6:40 AM IST

thumb 6

ಪಟಿಯಾಲಾ: “ಬೆಳಗ್ಗೆ ಗಿಡಮೂಲಿಕೆಯುಕ್ತ ಅಂಶಗಳಿಂದ ಕೂಡಿದ ಟೀ, ರಾತ್ರಿ ನಿದ್ದೆಗೆ ಜಾರುವ ಮೊದಲು ಕ್ಯಾಮೊಮೈಲ್‌ ಹೂವುಗಳ ಎಸಳುಗಳಿಂದ ತಯಾರಿಸಿದ ಚಹಾ, ಇದರ ಮಧ್ಯೆ ಜ್ಯೂಸ್‌, ಎಳನೀರು, ಹಣ್ಣು, ರೋಟಿ…’

ಒಂದು ವರ್ಷದ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ನವಜೋತ್‌ ಸಿಂಗ್‌ ಸಿಧು ಅವರಿಗೆ ಜೈಲಲ್ಲಿ ನೀಡಲಾ ಗುವ ಆಹಾರದ ಚಾರ್ಟ್‌ನಲ್ಲಿನ ಅಂಶ. ಸಿಧು ಅವರ ವೈದ್ಯಕೀಯ ಸ್ಥಿತಿ ಗಮನಿಸಿ ವೈದ್ಯರು ಸೂಚಿಸಿರುವ ಆಹಾರದ ಪಟ್ಟಿಯಲ್ಲಿ ಬೀಟ್‌ರೂಟ್‌ ಅಥವಾ ಸೋರೆಕಾಯಿ, ಎಳೆಸೌತೆಕಾಯಿ ಜ್ಯೂಸ್‌ ನೀಡಲು ಶಿಫಾರಸು ಮಾಡಲಾಗಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿಯ ಊಟಕ್ಕಾಗಿ ವಿಶೇಷ ರೀತಿಯ ತಿನಸುಗಳನ್ನೂ ಪಟಿಯಾಲದ ರಾಜೇಂದ್ರ ಆಸ್ಪತ್ರೆಯ ಆಹಾರ ತಜ್ಞರು ಶಿಫಾರಸು ಮಾಡಿದ್ದಾರೆ. ಜಾಲತಾಣಗಳಲ್ಲಿ ಸಿಧುಗೆ ನೀಡಲಾಗಿರುವ ಆಹಾರದ ಚಾರ್ಟ್‌ ವೈರಲ್‌ ಆಗಿದೆ.

ತಾಜಾ ಹಾಲು, ಎಳನೀರು, ಬಾದಾಮಿ, ವಾಲ್‌ನಟ್‌, ಅಲೋವೇರಾ ಅಥವಾ ತುಳಸಿ, ಪುದಿನ ಅಥವಾ ಕ್ಯಾರೆಟ್‌ ಜ್ಯೂಸ್‌, ಕಲ್ಲಂಗಡಿ, ಕಿವಿ, ಸ್ಟ್ರಾಬೆರಿ, ಬೆಣ್ಣೆಹಣ್ಣು ಜ್ಯೂಸ್‌, ಮಧ್ಯಾಹ್ನಕ್ಕೆ ಒಂದು ಚಪಾತಿ ಅಥವಾ ರೋಟಿ, ಸಲಾಡ್‌, ಲಸ್ಸಿ, ಸಂಜೆಗೆ ಟೀ, ಪನೀರ್‌ ಸ್ಲೆ„ಸ್‌, ರಾತ್ರಿಗೆ ಸೂಪ್‌, ಚಹಾ…. ಹೀಗೆ ಪಟ್ಟಿ ಬಹಳ ಉದ್ದವಿದೆ. ಇದನ್ನು ನೋಡಿದ ಜೈಲಧಿಕಾರಿಯೊಬ್ಬರು, “ಇದು ಸೆವೆನ್‌ ಸ್ಟಾರ್‌ ಹೋಟೆಲ್‌ ಮೆನು’ ಎಂದು ಬಣ್ಣಿಸಿದ್ದಾರೆ.

ವರ್ಕ್‌ ಫ್ರಂ ಸೆಲ್‌: ಇಷ್ಟು ಮಾತ್ರವಲ್ಲ  ಸಿಧು ಇನ್ನು ಮುಂದೆ ಕ್ಲರ್ಕ್‌ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಆದರೆ, ಅವರು ಜೈಲಿನ ಸೆಲ್‌ನಿಂದಲೇ ಕೆಲಸ ಮಾಡಲಿದ್ದಾರೆ. ಮೊದಲ ಮೂರು ತಿಂಗಳ ಅವಧಿಯಲ್ಲಿ ಅವರಿಗೆ ಸಂಬಳ ನೀಡಲಾಗುವುದಿಲ್ಲ. ನಂತರದ ಅವಧಿಯಲ್ಲಿ ಸಿಧು ಅವರಿಗೆ 30 ರೂ.ಗಳಿಂದ 90 ರೂ.ವರೆಗೆ ವೇತನ ನೀಡಲಾಗುತ್ತದೆ. ಅದನ್ನು ಸಿಧು ಅವರ ಬ್ಯಾಂಕ್‌ ಖಾತೆಗೇ ಜಮೆ ಮಾಡಲಾಗುತ್ತದೆ. ಕೋರ್ಟ್‌ಗಳಿಗೆ ಸಂಬಂಧಿಸಿದ ಕಡತಗಳಲ್ಲಿರುವ ದೀರ್ಘಾವಧಿಯ ತೀರ್ಪುಗಳನ್ನು ಜೈಲಿನ ಕಡತಗಳಿಗೆ ಅನ್ವಯವಾಗುವಂತೆ ಸಂಕ್ಷಿಪ್ತಗೊಳಿ ಸುವ ಕೆಲಸವನ್ನು ಅವರಿಗೆ ವಹಿಸಿಕೊಡಲಾಗುತ್ತದೆ. ಭದ್ರತಾ ಕಾರಣಗಳಿಗಾಗಿ ಕಾರಾಗೃಹದಿಂದ ಹೊರಕ್ಕೆ ಕಳುಹಿಸಿ ಕೆಲಸ ಮಾಡಿಸದೇ ಇರಲು ಅಧಿಕಾರಿಗಳು ಈಗಾಗಲೇ ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.