ನವಜೋತ್ ಸಿಂಗ್ ಸಿಧುಗೆ ಸಚಿವ ಸ್ಥಾನ?
Team Udayavani, Mar 13, 2017, 3:45 AM IST
ಚಂಡೀಗಢ: ಪಂಜಾಬ್ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ ಹೊಸ ಸಿಎಂ ಅಮರೀಂದರ್ ಸರ್ಕಾರದಲ್ಲಿ ಮಂತ್ರಿಯಾಗಲು ಪೈಪೊಟಿಯೂ ಹೆಚ್ಚಾಗುತ್ತಿದ್ದು ಕ್ರಿಕೆಟ್ಪಟು- ರಾಜಕಾರಣಿ ನವಜೋತ್ ಸಿಂಗ್ ಸಿಧು, ಮಾಜಿ ಹಾಕಿ ಕ್ಯಾಪ್ಟನ್ ಪರ್ಗತ್ಸಿಂಗ್ ಮತ್ತು ಮನ್ಪ್ರೀತ್ ಸಿಂಗ್ ಬಾದಲ್ ಸೇರಿದಂತೆ ಹಲವರಿಗೆ ಅವಕಾಶ ಸಿಗಲಿದೆ ಎನ್ನಲಾಗಿದೆ.
ಆದರೆ ಸಿಎಂ ಅಭ್ಯರ್ಥಿಯಾಗಿರುವ ಅಮರೀಂದರ್ ಮಾತ್ರ ಯಾರನ್ನು ಸೇರಿಸಿಕೊಳ್ಳ ಬೇಕು ಎಂಬ ಬಗ್ಗೆ ಯಾವುದೇ ಸುಳಿವು ನೀಡಿಲ್ಲ. ಸಿಧು ಇತ್ತೀಚೆಗೆ ಬಿಜೆಪಿಯನ್ನು ಬಿಟ್ಟು ಕಾಂಗ್ರೆಸ್ ಸೇರಿದ್ದರು. ಚುನಾವಣೆಯಲ್ಲಿ ಅವರ ಪ್ರಭಾವವೂ ಹೆಚ್ಚಿದ್ದ ಕಾರಣ, ಅವರಿಗೂ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ. ಇನ್ನೊಂದೆಡೆ, ಮನ್ಪ್ರೀತ್ ಅವರು ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅವರ ಹತ್ತಿರದ ಸಂಬಂಧಿ ಎಂಬುದು ಪ್ರಮುಖ ವಿಷಯ ವಾಗಿದೆ. ಒಟ್ಟಿನಲ್ಲಿ ಯಾರ್ಯಾರಿಗೆ ಪಂಜಾಬ್ನ ಹೊಸ ಸಂಪುಟದಲ್ಲಿ ಅಧಿಕಾರ ಸಿಗಲಿದೆ ಎಂಬುದನ್ನು ಕಾದು ನೋಡಬೇಕು. 10 ವರ್ಷಗಳ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿ ಮರಳಿ ಅಧಿಕಾರ ಹಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್