ಊಹಾಪೋಹಕ್ಕೆ ತೆರೆ; ಪಂಜಾಬ್ ಸಿಎಂಗೆ ರಾಜೀನಾಮೆ ಸಲ್ಲಿಸಿದ ನವಜ್ಯೋತ್ ಸಿಂಗ್ ಸಿಧು
Team Udayavani, Jul 15, 2019, 1:41 PM IST
ನವದೆಹಲಿ:ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಚಿವ ಸಂಪುಟದಿಂದ ನವಜ್ಯೋತ್ ಸಿಂಗ್ ಸಿಧು ಹೊರನಡೆಯಲಿದ್ದಾರೆ ಎಂಬ ಊಹಾಪೋಹಕ್ಕೆ ಕೊನೆಗೂ ತೆರೆಬಿದ್ದಿದ್ದು, ಸಿಧು ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಸಿಎಂ ಸಿಂಗ್ ಗೆ ಕಳುಹಿಸಿದ್ದಾರೆ.
ನಾನು ಇಂದು ನನ್ನ ರಾಜೀನಾಮೆ ಪತ್ರವನ್ನು ಪಂಜಾಬ್ ಮುಖ್ಯಮಂತ್ರಿಗೆ ಕಳುಹಿಸಿದ್ದೇನೆ ಎಂದು ಸಿಧು ತಮ್ಮ ಟ್ವೀಟರ್ ಖಾತೆಯಲ್ಲಿ ತಿಳಿಸಿದ್ದಾರೆ.
ಕಳೆದ ವರ್ಷ ಸಿಧು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ತೆರಳಿದ್ದು, ಈ ಸಂದರ್ಭದಲ್ಲಿ ಪಾಕ್ ಆರ್ಮಿ ಮುಖ್ಯಸ್ಥನನ್ನು ಅಪ್ಪಿಕೊಂಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮತ್ತು ಸಿಧು ನಡುವೆ ಜಟಾಪಟಿಗೆ ಕಾರಣವಾಗಿತ್ತು.
ಈ ಎಲ್ಲಾ ಗೊಂದಲದ ನಡುವೆಯೇ ಸಿಧು ತಮ್ಮ ರಾಜೀನಾಮೆ ಪತ್ರವನ್ನು ಅಮರೀಂದರ್ ಸಿಂಗ್ ಅವರಿಗೆ ಕಳುಹಿಸುವ ಬದಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಕಳುಹಿಸಿದ್ದರು. ಏತನ್ಮಧ್ಯೆ ಕಳೆದ ಒಂದು ತಿಂಗಳಿನಿಂದ ಸಿಧು ತಮ್ಮ ರಾಜೀನಾಮೆ ಪತ್ರವನ್ನು ಅಮರೀಂದರ್ ಸಿಂಗ್ ಅವರಿಗೆ ಯಾಕೆ ಕಳುಹಿಸಿಲ್ಲ ಎಂಬುದಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್