ಸಿಧು ಮುಖ್ಯಮಂತ್ರಿಯಾಗಲು ಯತ್ನಿಸುತ್ತಿದ್ದಾರೆ; ಅಮರೀಂದರ್ ಸಿಂಗ್
ಪಂಜಾಬ್ನಲ್ಲಿ ಕುರ್ಚಿ ಕಿತ್ತಾಟ ಆರಂಭ; ಸಿಎಂ ಬಹಿರಂಗ ಅಸಮಾಧಾನ
Team Udayavani, May 19, 2019, 4:28 PM IST
ಅಮೃತಸರ:ಪಂಜಾಬ್ನ ಕಾಂಗ್ರೆಸ್ ಸರ್ಕಾರದ ಅಸಮಾಧಾನಕ್ಕೆ ಸಾಕ್ಷಿಯಾಗಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸಚಿವ ನವಜೋತ್ ಸಿಂಗ್ ವಿರುದ್ಧ ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ.
7 ನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಹಕ್ಕು ಚಲಾವಣೆಗೂ ಮುನ್ನ ಸುದ್ದಿಗಾರರೊಂದಿಗೆ ಅಮರೀಂದರ್ ಸಿಂಗ್ ಮಾತನಾಡಿದರು.
ನನ್ನ ಪತ್ನಿಗೆ ಟಿಕೆಟ್ ನೀಡಲು ತಡೆಯೊಡ್ಡಿದ್ದರು ಎಂದು ಆರೋಪಿಸಿದ್ದ ಸಿಧು ವಿರುದ್ಧ ಅಮರೀಂದರ್ ಸಿಂಗ್ ಆಕ್ರೋಶ ಹೊರ ಹಾಕಿದರು.
ಸಿಧು ಅವರೊಂದಿಗೆ ಯಾವುದೇ ಮಾತಿನ ಚಕಮಕಿ ನಡೆದಿಲ್ಲ. ಅವರು ಮಹತ್ವಾಕಾಂಕ್ಷಿ, ಅದು ಒಳ್ಳೆಯದು. ಜನರು ಮಹತ್ವಾಕಾಂಕ್ಷೆಗಳನ್ನು ಹೊಂದಿರಬೇಕು. ಬಾಲ್ಯದಿಂದಲೂ ನಾನು ಸಿಧುವನ್ನು ನೋಡಿದ್ದೇನೆ ಮತ್ತು ಅವರೊಂದಿಗೆ ಯಾವುದೇ ಅಭಿಪ್ರಾಯವಿಲ್ಲ. ಅವರು ಬಹುಶಃ ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆ ಮತ್ತು ನನ್ನನ್ನುಬದಲಿಸಲು ಬಯಸಿದ್ದಾರೆ, ಅದೇ ಅವರ ವ್ಯವಹಾರವಾಗಿದೆ ಎಂದು ಕಿಡಿ ಕಾರಿದರು.
ಸಿಧು ಮತದಾನಕ್ಕೂ ಮುನ್ನ ಬೇಜವಾಬ್ಧಾರಿಯುತವಾಗಿ ನಡೆದುಕೊಂಡಿದ್ದಾರೆ. ಅಂತಹ ವರ್ತನೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…