ಸಾಗರ ದಾಳಿ ಹತ್ತಿಕ್ಕಲು ಸಜ್ಜು
Team Udayavani, Aug 27, 2019, 5:05 AM IST
ಪುಣೆ: ಪಾಕಿಸ್ತಾನದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯಲ್ಲಿ ಜಲಾಂತರ್ಗಾಮಿ ಪಡೆಯೊಂದಿದ್ದು, ಆ ತಂಡವು ಸಾಗರದೊಳಗೆ ಪ್ರಯಾಣಿಸಿ ಭಾರತದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದೆ. ಗುಪ್ತಚರ ಇಲಾಖೆಯು ಈ ನಿಟ್ಟಿನಲ್ಲಿ ಎಚ್ಚರಿಸಿದ್ದು, ಅಂಥ ದಾಳಿಗಳನ್ನು ಹತ್ತಿಕ್ಕಲು ನಾವು ಸನ್ನದ್ಧವಾಗಿದ್ದೇವೆ ಎಂದು ನೌಕಾಪಡೆಯ ಸಿಬ್ಬಂದಿ ವಿಭಾಗದ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ತಿಳಿಸಿದ್ದಾರೆ.’ಭಾರತೀಯ ಸಾಗರ ತೀರಗಳಲ್ಲಿ ಬದಲಾಗುತ್ತಿರುವ ಭದ್ರತಾ ಸ್ವರೂಪ’ ಎಂಬ ಕುರಿತಾದ ಉಪನ್ಯಾಸ ನೀಡಲು ಪುಣೆಗೆ ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡುವಾಗ ಈ ವಿಚಾರ ತಿಳಿಸಿದ್ದಾರೆ. ಕರಾವಳಿ ಕಾವಲು ಹೊಣೆ ಹೊತ್ತಿರುವ ಎಲ್ಲಾ ಭದ್ರತಾ ಪಡೆಗಳಿಗೆ ಈ ಕುರಿತಂತೆ ಎಚ್ಚರಿಕೆ ರವಾನಿಸಲಾಗಿದೆ. ಸಾಗರದ ಮೂಲಕ ಆಗಬಹುದಾದ ದಾಳಿಗಳನ್ನು ತಡೆಯುವ ಬಗ್ಗೆ ಮಾರ್ಗಸೂಚಿಗಳನ್ನೂ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ
LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ
CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Brahmavara-ಉಡುಪಿ ಟ್ರಾಫಿಕ್ ಜಾಮ್ ಸಮಸ್ಯೆ: ಸವಾರರು ಸುಸ್ತೋ ಸುಸ್ತು