ಅಮೆರಿಕ-ಉ.ಕೊರಿಯ ರೀತಿ ಭಾರತ-ಪಾಕ್‌ ಮಾತುಕತೆ: ಶಹಬಾಜ್‌ ಷರೀಫ್


Team Udayavani, Jun 13, 2018, 11:40 AM IST

kim-trump-700.jpg

ಇಸ್ಲಾಮಾಬಾದ್‌ : ಹಲವು ದಶಕಗಳ ಬದ್ಧ ವೈರಿಗಳಾಗಿರುವ ಅಮೆರಿಕ ಮತ್ತು ಉತ್ತರ ಕೊರಿಯ ಶಾಂತಿ ಮಾತುಕತೆಯ ಮೂಲಕ ತಮ್ಮೊಳಗಿನ ಎಲ್ಲ ಭಿನ್ನಮತಗಳನ್ನು ನಿವಾರಿಸಕೊಂಡ ರೀತಿಯಲ್ಲೇ ಭಾರತ ಮತ್ತು ಪಾಕಿಸ್ಥಾನ ಶಾಂತಿ ಮಾತುಕತೆ ನಡೆಸಲು ಮುಂದಾಗಬೇಕು ಎಂದು ಪಾಕ್‌ ಪದಚ್ಯುತ ಪ್ರದಾನಿ ನವಾಜ್‌ ಷರೀಫ್ ಅವರ ಸಹೋದರ, ಪಾಕಿಸ್ಥಾನದ ಪ್ರಮುಖ ರಾಜಕೀಯ ನಾಯಕ ಶಹಬಾಜ್‌ ಷರೀಫ್ ಹೇಳಿದ್ದಾರೆ.

ಪರಸ್ಪರ ಅಣು ಯುದ್ಧದ ಅಂಚಿನಿಂದ ಈಚೆಗೆ ಬಂದು ಶಾಂತಿ ಮಾತುಕತೆ ನಡೆಸಲು ಉತ್ತರ ಕೊರಿಯ ಮತ್ತು ಅಮೆರಿಕಕ್ಕೆ ಸಾಧ್ಯವೆಂದಾದರೆ ಭಾರತ ಮತ್ತು ಪಾಕಿಸ್ಥಾನಕ್ಕೆ ಅದು ಏಕೆ ಸಾಧ್ಯವಾಗದು ಎಂದು ಶಹಬಾಜ್‌ ಷರೀಫ್ ಅವರು ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಪಾಕ್‌ ಮಾಧ್ಯಮಗಳು ಈ ಟ್ವೀಟನ್ನು ಶಹಬಾಜ್‌ ಅವರೇ ಮಾಡಿರುವುದಾಗಿ ಹೇಳಿವೆಯಾದರೂ ಇವುಗಳನ್ನು ಶರೀಫ್ ಅವರ ಸಿಬಂದಿಗಳು ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಏಕೆಂದರೆ ಸ್ವತಃ ಶಹಬಾಜ್‌ ಮಾಡುವ ಟ್ವೀಟ್‌ಗಳಲ್ಲಿ ‘SS’ ಎಂಬುದಾಗಿ ಅವರ ಸಹಿ ಇರುತ್ತವೆ. ಆದರೆ ಈ ಟ್ವೀಟ್‌ಗಳಲ್ಲಿ ಅಂತಹ ಸಹಿ ಇಲ್ಲದಿರುವುದರಿಂದ ಈ ಟ್ವೀಟ್‌ಗಳನ್ನು ಸ್ವತಃ ಶಹಬಾಜ್‌ ಅವರೇ ಮಾಡಿರಲಿಕ್ಕಿಲ್ಲ ಎಂದು ಹೇಳಲಾಗಿದೆ. 

ಅದೇನಿದ್ದರೂ ಶಹಬಾಜ್‌ ಅವರ ಟ್ವೀಟ್‌ಗಳು ಭಾರತ ಮತ್ತು ಪಾಕಿಸ್ಥಾನ ನಡುವೆ ಶಾಂತಿ ಮಾತುಕತೆ ಏರ್ಪಡಬೇಕೆಂದು ಹೇಳುತ್ತವೆ; ಜತೆಗೆ ಕಾಶ್ಮೀರವನ್ನು ಅಕ್ರಮವಾಗಿ ತನ್ನ ವಶದಲ್ಲಿ ಇರಿಸಿಕೊಂಡಿರುವ ಭಾರತ, ಕಾಶ್ಮೀರಿಗಳ ಮೇಲೆ ದಬ್ಟಾಳಿಕೆ ನಡೆಸುತ್ತಿದೆ ಎಂದು ಆರೋಪಿಸುತ್ತದೆ.

ಆದರೆ ಸ್ವತಃ ಪಾಕಿಸ್ಥಾನದ ಅಕ್ರಮ ವಶದಲ್ಲಿರುವ ಪಿಓಕೆಯಲ್ಲಿ ಅದರ ಸೇನೆ ಅಲ್ಲಿನ ಜನರ ಮೇಲೆ ನಡೆಸುತ್ತಿರುವ ದಬ್ಟಾಳಿಕೆಯ ಬಗ್ಗೆ ಚಕಾರ ಎತ್ತುವುದಿಲ್ಲ; ಮಾತ್ರವಲ್ಲದೆ ಎಲ್‌ಓಸಿಯಲ್ಲಿ ಪಾಕ್‌ ಉಗ್ರರು ಮತ್ತು ಸೇನೆ ಜಮ್ಮು ಕಾಶ್ಮೀರದ ಅಮಾಯಕ ಜನರನ್ನು ಗುರಿ ಇರಿಸಿ ನಡೆಸುತ್ತಿರುವ ದಾಳಿಗಳ ಬಗ್ಗೆಯೂ ಸೊಲ್ಲೆತ್ತುವುದಿಲ್ಲ ಎನ್ನುವುದು ಸ್ಪಷ್ಟವಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.