ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್ಸಿಬಿ ಸ್ಪಷ್ಟನೆ
ಸಮೀರ್ ವಾಂಖೆಡೆಯನ್ನು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು
Team Udayavani, Oct 28, 2021, 6:55 AM IST
ನವದೆಹಲಿ/ಮುಂಬೈ:ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಆರೋಪಿಯಾಗಿರುವ ಹೈಪ್ರೊಫೈಲ್ ಡ್ರಗ್ಸ್ ಕೇಸ್ನ ತನಿಖೆಯನ್ನು ರಾಷ್ಟ್ರೀಯ ಮಾದಕವಸ್ತು ನಿಯಂತ್ರಣ ಸಂಸ್ಥೆಯ (ಎನ್ಸಿಬಿ) ಮುಂಬೈ ವಲಯದ ಆಯುಕ್ತರಾದ ಸಮೀರ್ ವಾಂಖೆಡೆ ಅವರೇ ಮುಂದುವರಿಸಲಿದ್ದಾರೆ ಎಂದು ಎನ್ಸಿಬಿ ಸ್ಪಷ್ಟಪಡಿಸಿದೆ.
ಅವರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಪೂರಕವಾದ ಸಾಕ್ಷಿಗಳು ಲಭ್ಯವಾಗುವವರೆಗೆ ಅವರನ್ನು ಡ್ರಗ್ಸ್ ಪ್ರಕರಣದ ತನಿಖೆಯಿಂದ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಎನ್ಸಿಬಿ ಮತ್ತೂಮ್ಮೆ ಸ್ಪಷ್ಟಪಡಿಸಿದೆ.
ವಾಂಖೆಡೆ ವಿರುದ್ಧ ಸುಲಿಗೆಯ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಬುಧವಾರದಂದು, ದೆಹಲಿಯಲ್ಲಿರುವ ಎನ್ಸಿಬಿ ಕೇಂದ್ರ ಕಚೇರಿಯಲ್ಲಿ ವಾಂಖೆಡೆಯವರನ್ನು ಸುಮಾರು ನಾಲ್ಕು ಗಂಟೆಗಳ ಕಾಲ ಎನ್ಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದರು. ಆನಂತರ, ಪ್ರಕರಣದ ತನಿಖೆಯನ್ನು ವಾಂಖೆಡೆಯವರೇ ಮುಂದುವರಿಸಲಿದ್ದಾರೆ ಎಂದು ಎನ್ಸಿಬಿ ಪ್ರಕಟಿಸಿದೆ.
ಇದನ್ನೂ ಓದಿ:5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ
ಆರ್ಯನ್ಗೆ ಸಿಗದ ಜಾಮೀನು:
ಪ್ರಕರಣದಲ್ಲಿ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಆರ್ಯನ್, ಅದಕ್ಕಾಗಿ ಇನ್ನೂ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಬಾಂಬೆ ಹೈಕೋರ್ಟ್ನಲ್ಲಿ ನಡೆಯುತ್ತಿರುವ ಅವರ ಜಾಮೀನು ಅರ್ಜಿಯ ವಿಚಾರಣೆ ಗುರುವಾರವೂ ಮುಂದುವರಿಯಲಿದೆ. ಅರ್ಜಿಯ ವಿಚಾರಣೆ ಮಂಗಳವಾರ ಶುರುವಾಗಿತ್ತು.
ಮತ್ತೊಂದೆಡೆ, ಮುಂಬೈ ಸೆಷನ್ಸ್ ನ್ಯಾಯಾಲಯದಿಂದ ಮಂಗಳವಾರ ಜಾಮೀನು ಪಡೆದಿರುವ, ಇದೇ ಪ್ರಕರಣದ ಸಹ ಆರೋಪಿಗಳಾದ ಅವಿನ್ ಸಾಹು ಹಾಗೂ ಮನೀಶ್ ರಾಜ್ಗಾಹಿìಯಾ, ಮುಂಬೈನ ಅರ್ತೂರ್ ಜೈಲಿನಿಂದ ಬುಧವಾರ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ