ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ದಿಲ್ಲಿಗೆ ಭೇಟಿ ನೀಡುವ ಸಾಧ್ಯತೆ
Team Udayavani, Nov 17, 2019, 6:23 PM IST
ಮುಂಬಯಿ: ಮಹಾರಾಷ್ಟ್ರದಲ್ಲಿ ರಾಜಕೀಯ ಕೋಲಾಹಲದ ಮಧ್ಯೆ ಶರದ್ ಪವಾರ್ ಅವರು ಸೋಮವಾರ ದಿಲ್ಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿ¨ªಾರೆ. ಇದಕ್ಕೂ ಮೊದಲು ಶರದ್ ಪವಾರ್ ಅವರು ಸೋನಿಯಾ ಗಾಂಧಿ ಅವರನ್ನು ರವಿವಾರ ಭೇಟಿ ಆಗುವವರಿದ್ದರು. ಆದರೆ ಎನ್ಸಿಪಿಯ ಸಭೆ ರವಿವಾರ ಆಯೋಜಿಸಿದ ಕಾರಣದಿಂದ ದಿಲ್ಲಿಗೆ ಸೋಮವಾರ ಭೇಟಿ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್-ಎನ್ಸಿಪಿ ಮೈತ್ರಿಯು ನವೆಂಬರ್ 22 ರಂದು ರಾಜ್ಯದ 27 ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಚುನಾವಣೆಗಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಚರ್ಚೆ ನಡೆಯಲಿದೆ.
ರಾಜ್ಯದಲ್ಲಿ 5 ವರ್ಷಗಳ ಕಾಲ ಶಾಶ್ವತ ಸರಕಾರ ರಚನೆಯಾಗುತ್ತದೆ – ಪವಾರ್
ನಾಗಪುರರದ ಕಾಂಗ್ರೆಸ್ ಶಾಸಕ ನಿತಿನ್ ರಾವುತ್ ಅವರ ನಿವಾಸಕ್ಕೆ ಆಗಮಿಸಿದ ಪವಾರ್, ಅವರು, ಮಧ್ಯಂತರ ಚುನಾವಣೆಯ ಸಾಧ್ಯತೆಯನ್ನು ತಳ್ಳಿಹಾಕಿದರು. ಸರಕಾರವಾಗಲು ಸ್ವಲ್ಪ ವಿಳಂಬವಾಗಿದ್ದರೂ, 5 ವರ್ಷಗಳ ಕಾಲ ರಾಜ್ಯದಲ್ಲಿ ಶಾಶ್ವತ ಸರಕಾರ ರಚನೆಯಾಗುತ್ತದೆ ಎಂದು ಅವರು ಹೇಳಿದರು, ಮಹಾರಾಷ್ಟ್ರದಲ್ಲಿ ಸರಕಾರ ರಚನೆಯ ಕುರಿತು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದಿಲಿಯಲ್ಲಿ ಸಭೆ ನಡೆಸಬೇಕಾಗಿತ್ತು. ಆದರೆ ಪವಾರ್ ಅವರು ಸೋನಿಯಾ ಅವರನ್ನು ಭೇಟಿ ಮಾಡಲು ನವೆಂಬರ್ 18 ರಂದು ದಿಲ್ಲಿ ತೆರಳಲಿದ್ದಾರೆ ಎನ್ನಲಾಗಿದೆ. ಮೂರು ಪಕ್ಷಗಳ ನಡುವೆ ಸರಕಾರ ರಚನೆಯಾಗುವ ಮೊದಲೇ, ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಕರಡನ್ನು ಇನ್ನೂ ಮೊಹರು ಮಾಡಬೇಕಾಗಿದೆ.
ಸಾಮಾನ್ಯ ಕನಿಷ್ಠ ಹಂಚಿದ ಕಾರ್ಯಕ್ರಮದ ಒಪ್ಪಂದ
ಶಿವಸೇನೆ, ಕಾಂಗ್ರೆಸ್ ಮತ್ತು ಎನ್ಸಿಪಿ ನಡುವೆ ಕನಿಷ್ಠ ಹಂಚಿಕೆಯ ಕಾರ್ಯಕ್ರಮವನ್ನು ಒಪ್ಪಲಾಗಿದೆ. ರೈತರ ಸಾಲ ಮನ್ನಾ, ಬೆಳೆ ವಿಮಾ ಯೋಜನೆಯ ಪರಿಶೀಲನೆ, ಉದ್ಯೋಗ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಬಿ.ಆರ್.ಅಂಬೇಡ್ಕರ್ ಸ್ಮಾರಕ ಈ ಕಾರ್ಯಕ್ರಮದಲ್ಲಿ ಸೇರಿವೆ. ಅದೇ ಸಮಯದಲ್ಲಿ, ಶಿವಸೇನೆ ಸಂಪೂರ್ಣ ಅವಧಿಗೆ ಮುಖ್ಯಮಂತ್ರಿ ಹು¨ªೆಯನ್ನು ಪಡೆಯಲಿದೆ. ಎನ್ಸಿಪಿ ಮತ್ತು ಕಾಂಗ್ರೆಸ್ ಉಪ ಮುಖ್ಯಮಂತ್ರಿ ಸ್ಥಾನಗಳನ್ನು ಹಂಚಿಕೊಳ್ಳಲಿದೆ. ಇದಲ್ಲದೆ, ಶಿವಸೇನೆಗೆ 14 ಸಚಿವ ಸ್ಥಾನಗಳು, ಎನ್ಸಿಪಿಗೆ 14 ಮತ್ತು ಕಾಂಗ್ರೆಸ್ 12 ಸ್ಥಾನಗಳು ದೊರೆಯಲಿವೆ.
ಇದಕ್ಕೂ ಮುನ್ನ ಶನಿವಾರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ರಾಜ್ಯದ ಕಾಂಗ್ರೆಸ್ ಎನ್ಸಿಪಿ ನಾಯಕರು ಭೇಟಿ ನೀಡಿದರು. ಗಮನಾರ್ಹ ವಿಷಯವೆಂದರೆ ಎನ್ಸಿಪಿ ವಕ್ತಾರ ನವಾಬ್ ಮಲಿಕ್ ಅವರು, ನಾವು ಸರಕಾರ ರಚಿಸಲು ಶಿವಸೇನೆಯ ಜತೆ ಮಾತುಕತೆ ನಡೆಸುತ್ತಿದ್ದೇವೆ. ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಪ್ರಸ್ತಾವವಿಲ್ಲ ಎಂದು ನವಾಬ್ ಮಲಿಕ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ