‘ಬಾಂಬೆ ಬೇಗಮ್ಸ್’ ಪ್ರಸಾರ ರದ್ದುಗೊಳಿಸುವಂತೆ ನೆಟ್ ಫ್ಲಿಕ್ಸ್ ಗೆ NCPCR ನೋಟಿಸ್
Team Udayavani, Mar 13, 2021, 7:20 PM IST
ನವದೆಹಲಿ: ಅಪ್ರಾಪ್ತ ವಯಸ್ಸಿನವರು ಅಸಭ್ಯವಾಗಿ ವರ್ತಿಸುವ ದೃಶ್ಯಗಳನ್ನು ಒಳಗೊಂಡಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ವೆಬ್ ಸರಣಿಯಾದ ‘ಬಾಂಬೆ ಬೇಗಮ್ಸ್’ ಅನ್ನು OTT ವೇದಿಕೆಯಾಗಿರುವ ನೆಟ್ ಫ್ಲಿಕ್ಸ್ ಪ್ರಸಾರ ಮಾಡಬಾರದು ಎಂದು ಮಕ್ಕಳ ಹಕ್ಕುಗಳ ರಕ್ಷಣೆಯ ಹಿನ್ನೆಲೆಯಲ್ಲಿ ರೂಪುಗೊಂಡಿರುವ ರಾಷ್ಟ್ರೀಯ ಆಯೋಗ NCPCR ನಿರ್ದೇಶನ ನೀಡಿದೆ.
ಈ ಕುರಿತಾಗಿ ನೆಟ್ ಫ್ಲಿಕ್ಸ್ ಗೆ ನೋಟಿಸ್ ನೀಡಿರುವ NCPCR ಬಾಂಬೆ ಬೇಗಮ್ ವೆಬ್ ಸರಣಿಯ ಪ್ರಸಾರವನ್ನು ನಿಲ್ಲಿಸಬೇಕು ಎಂದಿದೆ. ಈ ಕುರಿತು ಮಾಹಿತಿ ನೀಡಿರುವ NCPCR ಅಧ್ಯಕ್ಷರಾದ ಪ್ರಿಯಾಂಕ್ ಕನಂಗೊ, ಈ ವೆಬ್ ಸರಣಿಯಲ್ಲಿ ಅಪ್ರಾಪ್ತ ವಯಸ್ಸಿನವರು ಅಸಭ್ಯವಾಗಿ ಕಾಣಿಸಿಕೊಳ್ಳುತ್ತಿರುವುದನ್ನು ಗಮನಿಸಿದ್ದು, ಈ ಸರಣಿಯನ್ನು ಪ್ರಸಾರ ಮಾಡುವುದನ್ನು ನಿಲ್ಲಿಸಲು ನಾವು ನಿರ್ದೇಶನ ನೀಡಿದ್ದೇವೆ ಎಂದಿದ್ದಾರೆ.
ಈ ನಿರ್ಧಾರದ ಕುರಿತು ಮಾಹಿತಿ ನೀಡಿರುವ ಆಯೋಗ ನಾವು 2 ಜನ ಟ್ವೀಟರ್ ಖಾತೆಯನ್ನು ನಿರ್ವಹಣೆ ಮಾಡುವವರಿಂದ ದೂರನ್ನು ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಗುಣಮಟ್ಟದ ಶಿಕ್ಷಣಕ್ಕೆ ಎಸ್.ಎಂ. ಶೆಟ್ಟಿ ಶಿಕ್ಷಣ ಸಂಸ್ಥೆ ಹೆಸರುವಾಸಿ: ಚಂದ್ರಹಾಸ್ ಶೆಟ್ಟಿ
ಈ ದೂರುಗಳ ಕುರಿತಾಗಿಯೂ ಆಯೋಗ ಮಾಹಿತಿ ನೀಡಿದ್ದು, ಮೊದಲ ದೂರಿನ ಅನ್ವಯ ಈ ಸರಣಿಯಲ್ಲಿ ಅಪ್ರಾಪ್ತೆಯೊಬ್ಬಳು ಅಮಲಿನ ಪದಾರ್ಥಗಳಿಗೆ ದಾಸಳಾಗಿರುವುದನ್ನು ಚಿತ್ರಿಸಲಾಗಿದೆ. ಆಕೆ ಪಾರ್ಟಿಗಳಿಗೆ ತೆರಳಿದಾಗಲೂ ಅಮಲಿನ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವ ದೃಶ್ಯಗಳನ್ನು ಇದು ಒಳಗೊಂಡಿದೆ ಎಂದಿದ್ದಾರೆ.
ಈ ನಡುವೆ ಇನ್ನೊಂದು ದೂರಿನ ಕುರಿತಾಗಿಯೂ ಆಯೋಗ ಮಾಹಿತಿ ನೀಡಿದ್ದು, ಈ ಸರಣಿ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟುಮಾಡಲಿದೆ ಎಂದಿರುವ NCPCR ಈ ರೀತಿಯಾದ ಮಾಹಿತಿಗಳನ್ನು ಒಳಗೊಂಡಿರುವ ಸರಣಿಯಿಂದ ಕೇವಲ ಸಮಾಜದ ಮೇಲೆ ಕೆಟ್ಟ ಪರಿಣಾಮವನ್ನು ಮಾತ್ರ ಬೀರದೆ ಜೊತೆ ಜೊತೆಗೆ ಇದು ದುಷ್ಕರ್ಮಿಗಳಿಂದ ಮಕ್ಕಳ ಮೇಲೆ ಶೋಷಣೆ ಆಗಲು ಕಾರಣವಾಗಬಹುದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’