ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿ ಪಶ್ಚಿಮ ಬಂಗಾಳದ ರಾಜ್ಯಪಾಲ ಧನಕರ್
Team Udayavani, Jul 16, 2022, 8:14 PM IST
ನವದೆಹಲಿ : ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರ ಹೆಸರನ್ನು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಘೋಷಿಸಿದ್ದಾರೆ.
ಧನಕರ್ ಅವರು 18 ಮೇ 1951 ರಂದು ರಾಜಸ್ಥಾನ ದ ಕಿತಾನ ಎಂಬ ಸಣ್ಣ ಹಳ್ಳಿಯಲ್ಲಿ ರೈತ ಕುಟುಂಬದಲ್ಲಿ ಜನಿಸಿದರು. ಅವರು ತಮ್ಮ ಶಾಲಾ ಶಿಕ್ಷಣವನ್ನು ಚಿತ್ತೋರ್ಗಢದ ಸೈನಿಕ ಶಾಲೆಯಲ್ಲಿ ಪೂರ್ಣಗೊಳಿಸಿದರು ನಂತರ ಜೈಪುರದ ರಾಜಸ್ಥಾನ ವಿಶ್ವವಿದ್ಯಾಲಯದಿಂದ ಪದವಿ ಪಡೆದರು.
ಧನಕರ್ ಅವರು 9 ನೇ ಲೋಕಸಭೆಯಲ್ಲಿ 1989-91 ರ ಅವಧಿಯಲ್ಲಿ ರಾಜಸ್ಥಾನದ ಜುಂಜುನು ಲೋಕಸಭಾ ಕ್ಷೇತ್ರದಿಂದ ಜನತಾ ದಳವನ್ನು ಪ್ರತಿನಿಧಿಸಿ ಸಂಸದರಾಗಿದ್ದರು. 1993-98 ರ ಅವಧಿಯಲ್ಲಿ ರಾಜಸ್ಥಾನದ ಕಿಶನ್ಗಢ್ನಿಂದ ಶಾಸಕರಾಗಿದ್ದರು. ಜೈಪುರದ ರಾಜಸ್ಥಾನ ಹೈಕೋರ್ಟ್ ಬಾರ್ ಅಸೋಸಿಯೇಷನ್ನ ಮಾಜಿ ಅಧ್ಯಕ್ಷರಾಗಿದ್ದರು.
ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಂತಹ ಹಲವಾರು ಉನ್ನತ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.
ಧನ್ಕರ್ ಆಯ್ಕೆ ಏಕೆ?
– ಮುಂದಿನ ವರ್ಷದ ರಾಜಸ್ಥಾನ ಚುನಾವಣೆಯಲ್ಲಿ ಜಾಟ್ ಮತಗಳನ್ನು ಸೆಳೆಯುವ ಯತ್ನ
– ಉ.ಪ್ರದೇಶದಲ್ಲಿ ಕೃಷಿ ಕಾಯ್ದೆ ವಿರುದ್ಧ ದೊಡ್ಡ ಹೋರಾಟ ನಡೆದರೂ ಬಿಜೆಪಿಯ ಕೈಬಿಡದ ಜಾಟ್ ಸಮುದಾಯದ ಋಣ ತೀರಿಸುವುದು
– ಕಳೆದ 2 ದಶಕಗಳಿಂದಲೂ ಬಿಜೆಪಿಗೆ ನಿಷ್ಠರಾಗಿ ಕಾರ್ಯನಿರ್ವಹಿಸಿದ್ದು
ಜಗದೀಪ್ ಧನ್ಕರ್ಜೀ ಸಂವಿಧಾನದ ಬಗ್ಗೆ ಅತ್ಯುತ್ತಮ ಜ್ಞಾನ ಹೊಂದಿದ್ದಾರೆ. ಶಾಸಕಾಂಗ ವ್ಯವಹಾರಗಳಲ್ಲೂ ಅವರದ್ದು ಎತ್ತಿದಕೈ. ಇವರಿಂದ ರಾಜ್ಯಸಭೆಗೆ ಉತ್ತಮ ಮಾರ್ಗದರ್ಶನ ಸಿಗಲಿದೆ ಎಂಬ ವಿಶ್ವಾಸ ನನಗಿದೆ.
– ನರೇಂದ್ರ ಮೋದಿ, ಪ್ರಧಾನಿ
ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಧನ್ಕರ್ ಅವರಿಗೆ ಅಭಿನಂದನೆಗಳು. ಮಣ್ಣಿನ ಮಗನೊಬ್ಬ ಗೌರವಾನ್ವಿತ ಹುದ್ದೆಗೇರುವುದು ದೇಶಕ್ಕೇ ಹೆಮ್ಮೆಯ ಸಂಗತಿ.
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ