ಎನ್ಡಿಎ ಸಂಸದರಿಂದ ವೇತನ ತ್ಯಾಗ: ಸಚಿವ ಅನಂತಕುಮಾರ್
Team Udayavani, Apr 5, 2018, 12:33 PM IST
ನವದೆಹಲಿ: ಸಂಸತ್ನಲ್ಲಿ ಕಲಾಪ ನಡೆಯದೇ ಇರುವ ಹಿನ್ನೆಲೆಯಲ್ಲಿ 23 ದಿನಗಳ ವೇತನ ಸ್ವೀಕರಿಸದೇ ಇರಲು ಎನ್ಡಿಎ ಸಂಸದರು ನಿರ್ಧರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳಿಗೆ ಮುಜುಗರ ಉಂಟು ಮಾಡುವ ಹೊಸ ತಂತ್ರವನ್ನು ಕೇಂದ್ರ ಪ್ರಯೋಗಿಸಿದೆ. ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ನವದೆಹಲಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ಮೋದಿ ಮತ್ತು ಎನ್ಡಿಎಯ ಇತರ ಮೈತ್ರಿ ಪಕ್ಷಗಳ ಜತೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಸಂಸತ್ನಲ್ಲಿ ಕಲಾಪ ನಡೆಯದೇ ಇರಲು ಕಾಂಗ್ರೆಸ್ ಕಾರಣ. ಅದಕ್ಕೆ ಇತರ ಪ್ರತಿಪಕ್ಷಗಳೂ ಬೆಂಬಲ ನೀಡುತ್ತಿವೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಹೆಚ್ಚು ಅಸಹಿಷ್ಣುತೆಯ ದೋರಣೆ ಪ್ರದರ್ಶಿಸುತ್ತಿದೆ. ಎಲ್ಲ ವಿಚಾರಗಳನ್ನು ಚರ್ಚಿಸಲೂ ಸರ್ಕಾರ ಸಿದ್ಧವಿರುವುದಾಗಿ ಎಂದಿದ್ದಾರೆ ಅನಂತಕುಮಾರ್.
11 ಬಾರಿ ಕಲಾಪ ಮುಂದೂಡಿಕೆ: ಇದೇ ವೇಳೆ ಸಂಸತ್ನಲ್ಲಿ 20 ದಿನ ಯಾವುದೇ ಕಲಾಪ ನಡೆಸಲು ಸಾಧ್ಯವಾಗಲಿಲ್ಲ. ರಾಜ್ಯಸಭೆಯಲ್ಲಿ ಬುಧವಾರ ಯಾವುದೇ ರೀತಿ ಕಲಾಪ ನಡೆಸಲು ಸಾಧ್ಯವೇ ಆಗಲಿಲ್ಲ. ಬರೋಬ್ಬರಿ ಹನ್ನೊಂದು ಬಾರಿ ಕಲಾಪ ಮುಂದೂಡಿಕೆಯಾಗಿದೆ. ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭವಾಗುತ್ತಲೇ ಕೋಲಾಹಲದ ವಾತಾವರಣ ಉಂಟಾಯಿತು. ಬೆಳಗ್ಗಿನ ಅವಧಿಯಲ್ಲಿಯೇ ನಾಲ್ಕು ಬಾರಿ ಕಲಾಪ ಮುಂದೂಡಿಕೆಯಾಗಿತ್ತು. ಲೋಕಸಭೆಯಲ್ಲಿ ಕಾವೇರಿ ನಿರ್ವಹಣಾ ಮಂಡಳಿಗಾಗಿ ಎಐಎಡಿಎಂಕೆ ಸಂಸದರು ಗದ್ದಲ ಎಬ್ಬಿಸಿದ್ದರಿಂದ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು