ಜೂನ್ ನಲ್ಲಿ 120 ಮಿಲಿಯನ್ ನಷ್ಟು ಕೋವಿಡ್ ಲಸಿಕೆಗಳು ಲಭ್ಯ : ಕೇಂದ್ರ ಆರೋಗ್ಯ ಸಚಿವಾಲಯ
Team Udayavani, May 30, 2021, 5:03 PM IST
ನವ ದೆಹಲಿ : ಕೋವಿಡ್ ಲಸಿಕೆಯ ಕೊರತೆಯ ಆರೋಪಗಳು ಕೇಳಿ ಬರುತ್ತಿರುವುದರ ನಡುವೆಯೇ ಕೇಂದ್ರ ಸರ್ಕಾರ ಜೂನ್ ನಲ್ಲಿ 120 ಮಿಲಿಯನ್ ಡೋಸ್ ನಷ್ಟು ಕೋವಿಡ್ ಲಸಿಕೆಗಳು ಲಭ್ಯವಿರಲಿದೆ ಎಂದು ತಿಳಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಮೇ ತಿಂಗಳಲ್ಲಿ 79.4 ಮಿಲಿಯನ್ ಡೋಸ್ ಗಳು ಲಭ್ಯವಿದ್ದವು. ಜೂಣ್ ನಲ್ಲಿ 120 ಮಿಲಿಯನ್ ನಷ್ಟು ಲಸಿಕೆಗಳೂ ಲಭ್ಯವಿರಲಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆಗಳ ಸರಬರಾಜು ಹಂಚಿಕೆಯನ್ನು ಬಳಕೆಯ ಮಾದರಿ, ಜನಸಂಖ್ಯೆ ಮತ್ತು ಲಸಿಕೆ ವ್ಯರ್ಥದ ಮೇಲೆ ನಿರ್ಧರಿಸಲಾಗುತ್ತದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ : ಮಹಿಳಾ ಲೊಕೋ ಪೈಲಟ್ ಶಿರಿಶಾ ಕಾರ್ಯಕ್ಕೆ ಮೋದಿ ಶ್ಲಾಘನೆ
ಜೂನ್ ನಲ್ಲಿ ಒಟ್ಟು 6.09 ಕೋಟಿ ಲಸಿಕೆಗಳನ್ನು ರಾಜ್ಯ ಹಾಗು ಕೇಂದ್ರಾಡಳಿತ ಪ್ರದೇಶಗಳ ವ್ಯಧ್ಯಕೀಯ ಸಿಬ್ಬಂದಿಗಳಿಗೆ, ಫ್ರಂಟ್ ಲೈನ್ ವರ್ಕರ್ಸ್ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಉಚಿವಾಗಿ ಕೇಂದ್ರ ಸರ್ಕಾರ ಸರಬರಾಜು ಮಾಡಲಿದೆ ಎಂದು ಮಾಹಿತಿ ನೀಡಿದೆ.
ಉಳಿದಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 5.86 ಕೋಟಿ ಲಸಿಕೆಗಳ ಡೋಸ್ ಗಳು ಲಭ್ಯವಿರಲಿದೆ. ಒಟ್ಟ್ಉ ಜೂನ್ ನಲ್ಲಿ ಒಟ್ಟು ಹತ್ತಿರ ಹತ್ತಿರ 120 ಮಿಲಿಯನ್ (11, 95, 70,000) ಕೋವಿಡ್ ಲಸಿಕೆ ಡೋಸ್ ಗಳು ಲಭ್ಯವಿರಲಿದೆ ಎಂದು ಸಚಿವಾಲಯ ತಿಳಿಸಿದೆ.
ಇನ್ನು, ಮೂರನೇ ಹಂತದ ಅಂದರೆ 18-44ವರ್ಷದವರಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಪೂರೈಕೆ ಮಾಡುವುದಿಲ್ಲ. ಲಸಿಕೆ ಉತ್ಪಾದಕರಿಂದ ರಾಜ್ಯ ಸರ್ಕಾರಗಳು ನೇರವಾಗಿ ಖರೀದಿಸಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ರಾಜ್ಯಗಳಿಂದ ಬೇಡಿಕೆ ಹೆಚ್ಚಾಗಿಯೇ ಇದ್ದು, ಆದಷ್ಟು ಶೀಘ್ರದಲ್ಲೇ ಪೂರೈಕೆಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಅಭಯ ನೀಡಿದೆ.
ಇದನ್ನೂ ಓದಿ : ನರಕದಲ್ಲಿ ಕೂಡಿ ಹಾಕಿದ್ದಾರೆ, ಮನೆಗೆ ಕಳ್ಸಿ: ಸೋಂಕಿತ ಮಹಿಳೆಯ ಗೋಳಾಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್