ನೀರವ್ ಜಾಮೀನು ಅರ್ಜಿ ಮತ್ತೆ ತಿರಸ್ಕೃತ
Team Udayavani, Mar 30, 2019, 6:00 AM IST
ಹೊಸದಿಲ್ಲಿ: ಲಂಡನ್ನಲ್ಲಿ ತಲೆಮರೆಸಿಕೊಂಡಿದ್ದ ವಜ್ರದ ವ್ಯಾಪಾರಿ ನೀರವ್ ಮೋದಿಯ ಜಾಮೀನು ಅರ್ಜಿ ಸತತ ಎರಡನೇ ಬಾರಿ ತಿರಸ್ಕೃತ ಗೊಂಡಿದೆ. ಹಾಗಾಗಿ, ನೀರವ್ ಅವರು ಎಚ್ಎಂಪಿ ವ್ಯಾಂಡ್ಸ್ವರ್ತ್ ಪ್ರಿಸನ್ ಜೈಲಿಗೆ ಮರಳಿದ್ದಾರೆ. ಕಳೆದ ವಾರ ಬಂಧನಕ್ಕೊಳಗಾಗಿದ್ದ ಬೆನ್ನಲ್ಲೇ ನೀರವ್ ಸಲ್ಲಿಸಿದ್ದ ಜಾಮೀನು ಅರ್ಜಿ ಸಹ ತಿರಸ್ಕೃತಗೊಂಡಿತ್ತು.
ಶುಕ್ರವಾರದ ವಿಚಾರಣೆಯಲ್ಲಿ ನೀರವ್ ಮೋದಿಯಿಂದ ಮೋಸ ಹೋಗಿರುವ ಬ್ಯಾಂಕುಗಳ ಪರವಾಗಿ ವಾದ ಮಂಡಿಸಿದ ಕ್ರೌನ್ ಪ್ರಾಸಿಕ್ಯೂಷನ್ ಸರ್ವೀಸ್ನ (ಸಿಪಿಎಸ್) ವಕೀಲರು, ನೀರವ್ ವಿರುದ್ಧದ ಪ್ರಕರಣವೊಂದಕ್ಕೆ ಸಂಬಂಧಿಸಿದ ಸಾಕ್ಷಿಯೊಬ್ಬರಿಗೆ ನೀರವ್ ಕೊಲೆ ಬೆದರಿಕೆ ಹಾಕಿದ್ದರು ಹಾಗೂ ಮತ್ತೂಬ್ಬ ಸಾಕ್ಷಿಗೆ 20 ಲಕ್ಷ ರೂ. ಲಂಚ ನೀಡುವ ಆಮಿಷ ಒಡ್ಡಿದ್ದರು.
ಹಾಗಾಗಿ, ನೀರವ್ಗೆ ಜಾಮೀನು ನೀಡಿದರೆ, ಅವರು ಸಾಕ್ಷಿಗಳನ್ನು ಬೆದರಿಸುವ ಅಥವಾ ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಸಾಧ್ಯತೆಗಳಿವೆ ಎಂದು ವಾದಿಸಿದರು. ವಾದ ಆಲಿಸಿದ ಲಂಡನ್ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯದ ನ್ಯಾಯಾಧೀಶರಾದ ಎಮ್ಮಾ ಅಬುತ್ರೋಟ್, ಜಾಮೀನು ಪಡೆದು ಹೊರನಡೆದರೆ ನೀರವ್ ಅವರು ಪುನಃ ಶರಣಾಗುವ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿ, ಅವರ ಜಾಮೀನು ಅರ್ಜಿಯನ್ನು ತಳ್ಳಿಹಾಕಿದರು. ಇದೇ ನ್ಯಾಯಾಧೀಶರೇ, ಕೆಲ ದಿನಗಳ ಹಿಂದೆ ವಿಜಯ್ ಮಲ್ಯ ಹಸ್ತಾಂತರಕ್ಕೂ ಆದೇಶ ನೀಡಿದ್ದರೆಂಬುದು ಗಮನಾರ್ಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ