ಸುರಕ್ಷಿತ ನೀಟ್ ಪರೀಕ್ಷೆಗೆ ಮಾರ್ಗಸೂಚಿ: ಇದೇ 13ರಂದು ದೇಶಾದ್ಯಂತ ಪರೀಕ್ಷೆ
ಇದೇ 13ರಂದು ದೇಶಾದ್ಯಂತ ಪರೀಕ್ಷೆ; ಕೋವಿಡ್ ನಿಯಮ ಪಾಲಿಸಲು ಸೂಚನೆ
Team Udayavani, Sep 11, 2020, 6:00 AM IST
ಸಾಂದರ್ಭಿಕ ಚಿತ್ರ
ನವದೆಹಲಿ: ನೀಟ್ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯವು ಪರೀಕ್ಷೆಗೆ ಸಂಬಂಧಿಸಿದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇನ್ನೊಂದೆಡೆ, ಅ.4ರಂದು ನಡೆಯುವ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿ ಯುಪಿಎಸ್ಸಿ ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸೆ.13ರಂದು ಎಲ್ಲ ನಿಯಮಗಳ ಅನ್ವಯ ಸುರಕ್ಷಿತವಾಗಿ ನೀಟ್ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಯಾರಿಗಾದರೂ ಕೊರೊನಾ ಲಕ್ಷಣ ಕಂಡುಬಂದರೆ, ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಟ್ ಮಾಡಿ, ವೈದ್ಯರಿಗೆ ಮಾಹಿತಿ ನೀಡಬೇಕು. ಮಾಸ್ಕ್, ಶಾರೀರಿಕ ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಸರ್ ಬಳಕೆ ಮತ್ತಿತರ ಕಡ್ಡಾಯ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ.
ಮಾರ್ಗಸೂಚಿಯಲ್ಲೇನಿದೆ?
ಕಂಟೈನ್ಮೆಂಟ್ ವಲಯದ ಹೊರಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಮಾತ್ರವೇ ಪರೀಕ್ಷೆ ನಡೆಸಬೇಕು. ಕಂಟೈನ್ಮೆಂಟ್ ವಲಯದಲ್ಲಿರುವ ಸಿಬ್ಬಂದಿ ಅಥವಾ ಪರೀಕ್ಷಾರ್ಥಿಗಳಿಗೆ ಪ್ರವೇಶವಿರುವುದಿಲ್ಲ. ಇವರಿಗೆ ಬೇರೆ ವಿಧಾನಗಳ ಮೂಲಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು.
ಪೆನ್ ಮತ್ತು ಪೇಪರ್ ಆಧಾರಿತ ಪರೀಕ್ಷೆಯಿದ್ದಾಗ, ಆಯಾ ಕೊಠಡಿಯ ವೀಕ್ಷಕರು ಪ್ರಶ್ನೆಪತ್ರಿಕೆ ಅಥವಾ ಉತ್ತರಪತ್ರಿಕೆಗಳನ್ನು ವಿತರಿಸುವ ಮುನ್ನ ಕೈಗಳನ್ನು ಸ್ವಚ್ಛಗೊಳಿಸಬೇಕು.
ಪರೀಕ್ಷಾರ್ಥಿಗಳು ಕೂಡ ಪತ್ರಿಕೆ ಸ್ವೀಕರಿಸುವ ಮುನ್ನ ಮತ್ತು ವಾಪಸ್ ನೀಡಿದ ಬಳಿಕ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳಬೇಕು
ಉತ್ತರಪತ್ರಿಕೆಗಳನ್ನು ಸಂಗ್ರಹಿಸಿದ 72 ಗಂಟೆಗಳ ಬಳಿಕವೇ ತೆರೆಯಬೇಕು ಶೀಟ್ಗಳನ್ನು ವಿತರಿಸುವಾಗ ಅಥವಾ ಲೆಕ್ಕ ಹಾಕುವಾಗ ಎಂಜಲು ಬಳಕೆ ಮಾಡುವಂತಿಲ್ಲ
ವೈಯಕ್ತಿಕ ವಸ್ತುಗಳು ಅಥವಾ ಸ್ಟೇಷನರಿಗಳನ್ನು ಪರಸ್ಪರ ಹಂಚಿಕೊಳ್ಳುವಂತಿಲ್ಲ
ಆನ್ಲೈನ್ ಪರೀಕ್ಷೆಯಾಗಿದ್ದರೆ, ಪರೀಕ್ಷೆ ಮುನ್ನ ಆಲ್ಕೋಹಾಲ್ ವೈಪ್ಸ್ ಮೂಲಕ ಕಂಪ್ಯೂಟರ್ ಗಳನ್ನು ಸ್ವಚ್ಛಗೊಳಿಸಬೇಕು
ಪರೀಕ್ಷಾರ್ಥಿಗಳು ಮತ್ತು ಅಲ್ಲಿರುವ ಸಿಬ್ಬಂದಿ ತಮ್ಮ ಆರೋಗ್ಯದ ಕುರಿತ ಘೋಷಣಾ ಪತ್ರವನ್ನು ನೀಡಬೇಕು
ಪರೀಕ್ಷಾ ಕೊಠಡಿಗಳು, ವಿದ್ಯಾರ್ಥಿಗಳನ್ನು ಕರೆದೊಯ್ಯಲು ಇರುವಂಥ ವಾಹನಗಳನ್ನೂ ಸ್ವಚ್ಛಗೊಳಿಸುತ್ತಿರಬೇಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್