ನೀಟ್ ಕೌನ್ಸೆಲಿಂಗ್: ಸುಪ್ರೀಂ ತರಾಟೆ : 1,456 ಸೀಟು ಖಾಲಿ ಇರುವುದಕ್ಕೆ ಆಕ್ಷೇಪ
Team Udayavani, Jun 9, 2022, 6:35 AM IST
ಹೊಸದಿಲ್ಲಿ: 2021ನೇ ಸಾಲಿನ ನೀಟ್ ಪಿಜಿ ಕೌನ್ಸೆಲಿಂಗ್ನಲ್ಲಿ 1,456 ಸೀಟುಗಳನ್ನು ಖಾಲಿ ಬಿಟ್ಟ ವಿಚಾರದಲ್ಲಿ ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ)ಯನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ.
ಖಾಲಿ ಇರುವ ಸೀಟುಗಳನ್ನು ಸ್ಟ್ರೇ ಸುತ್ತಿನಲ್ಲಿ ಹಂಚಿಕೆ ಮಾಡಬೇಕೆಂದು ಕೋರಿ ಕೆಲವು ನೀಟ್ ಅಭ್ಯರ್ಥಿಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ರಜಾಕಾಲದ ನ್ಯಾಯಪೀಠ ದಲ್ಲಿರುವ ನ್ಯಾ| ಎಂ.ಆರ್. ಶಾ, ನ್ಯಾ| ಅನಿರುದ್ಧ್ ಬೋಸ್ ಅವರುಳ್ಳ ನ್ಯಾಯಪೀಠ ವಿಚಾರಣೆ ನಡೆಸಿ, ಸರಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿದೆ.
“ಎಂಸಿಸಿಯ ಈ ಕ್ರಮದಿಂದಾಗಿ ಅಭ್ಯರ್ಥಿಗಳಿಗೆ ತೊಂದರೆಯಾಗುವುದಷ್ಟೆ ಅಲ್ಲದೆ, ದೇಶದಲ್ಲಿ ವೈದ್ಯರ ಕೊರತೆ ಉಂಟಾಗಲಿದೆ. ಒಂದೇ ಒಂದು ಸೀಟನ್ನು ಖಾಲಿ ಉಳಿಯದಂತೆ ನೋಡಿಕೊಳ್ಳುವುದು ಎಂಸಿಸಿ ಜವಾಬ್ದಾರಿ. ಆದರೆ ಪ್ರತೀ ಸುತ್ತಿನ ಕೌನ್ಸೆಲಿಂಗ್ನಲ್ಲೂ ಇದೇ ರೀತಿಯಾಗುತ್ತಿದೆ’ ಎಂದು ನ್ಯಾಯಾಲಯ ಬೇಸರ ವ್ಯಕ್ತಪಡಿ ಸಿದೆ. ಹಾಗೆಯೇ 24 ಗಂಟೆಗಳೊಳಗಾಗಿ ಖಾಲಿ ಇರುವ ಸೀಟುಗಳ ಸಂಪೂರ್ಣ ಮಾಹಿತಿ ನೀಡಬೇಕು ಹಾಗೂ ಸೀಟುಗಳನ್ನು ಭರ್ತಿ ಮಾಡದೇ ಇರುವುದಕ್ಕೆ ಇರುವ ಸೂಕ್ತ ಕಾರಣಗಳನ್ನು ಪಟ್ಟಿ ಮಾಡಿ ಕೊಡಬೇಕು ಎಂದು ಕೇಂದ್ರ ಸರಕಾರ ಹಾಗೂ ಎಂಸಿಸಿಗೆ ನ್ಯಾಯಪೀಠ ಸೂಚನೆ ನೀಡಿದೆ.
ಸೀಟು ಹಂಚಿಕೆಯ ಎಲ್ಲಾ ಸುತ್ತುಗಳು ಮುಗಿದು, ಅನಂತರ ಉಳಿಯುವ ಸೀಟು ಗಳಿಗೆ ಮಾಪ್-ಅಪ್ ಸುತ್ತಿನ ಕೌನ್ಸೆಲಿಂಗ್ ಮೂಲಕ ಸೀಟು ವಿತರಣೆ ಮಾಡಲಾಗು ತ್ತದೆ. ಅದರಲ್ಲಿಯೂ ಮಿಕ್ಕುವ ಸೀಟು ಗಳನ್ನು ಸ್ಟ್ರೇ ಸುತ್ತಿನ ಕೌನ್ಸೆಲಿಂಗ್ ಮೂಲಕ ನೀಡ ಬೇಕೆಂದು ಅಭ್ಯರ್ಥಿಗಳ ಆಗ್ರಹವಾಗಿದೆ.
ಪರಿಹಾರಕ್ಕೆ ಆದೇಶಿಸುತ್ತೇವೆ ಹುಷಾರ್: ವಿದ್ಯಾರ್ಥಿಗಳಿಗೆ ಬಾಕಿ ಉಳಿದಿರುವ ಸೀಟನ್ನು ಹಂಚಿಕೆ ಮಾಡದಿದ್ದರೆ, ಸೀಟುಗ ಳನ್ನು ಹಂಚಿಕೆ ಕಡ್ಡಾಯವಾಗಿ ಮಾಡ ಲೇಬೇಕು ಹಾಗೂ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಹಾರ ನೀಡಬೇಕೆಂದು ತಾನೇ ಆದೇಶ ನೀಡುವುದಾಗಿ ನ್ಯಾಯಪೀಠ ತಿಳಿಸಿದೆ. “ಒಂದೇ ಒಂದು ಸೀಟು ಖಾಲಿ ಬಿಡಕೂ ಡದು. ಹಾಗೆ ಖಾಲಿ ಬಿಡದಂತೆ ನೋಡಿಕೊ ಳ್ಳುವುದು ನಿಮ್ಮ ಜವಾಬ್ದಾರಿ’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್