ದೇಶದಲ್ಲಿ ಕೋವಿಡ್ ಅಟ್ಟಹಾಸದ ಆತಂಕ : NEET ಪರೀಕ್ಷೆ ಮುಂದೂಡಿದ ಕೇಂದ್ರ ಸರ್ಕಾರ!
Team Udayavani, Apr 15, 2021, 9:00 PM IST
ನವದೆಹಲಿ : ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನಡೆಯುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET PG 2021) ಅನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ತಿಳಿಸಿದ್ದಾರೆ.
ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಯುವ ವೈದ್ಯಕೀಯ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದೇ ಏಪ್ರಿಲ್ 18ರಂದು NEET PG ಪರೀಕ್ಷೆಗಳನ್ನು ನಿಗದಿಸಲಾಗಿತ್ತು. ಈಗ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ನಿರ್ಧರಿಸಿ ತಿಳಿಸಲಾಗುವುದು ಎಂದಿದ್ದಾರೆ.
ದೇಶದಲ್ಲಿ ಕೋವಿಡ್ ಎರಡನೇ ಅಲೆ ದಟ್ಟವಾಗಿರುವ ಹಿನ್ನೆಲೆ ಬುಧವಾರವಷ್ಟೇ ಸಿಬಿಎಸ್ಇ 10 ನೇ ತರಗತಿಯ ಪರೀಕ್ಷೆ ರದ್ದು ಹಾಗೂ 12 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೆ ಇದೀಗ NEET ಪರೀಕ್ಷೆಯನ್ನು ಮುಂದೂಡಿದೆ.
ಇನ್ನು ಆತಂಕ ಮೂಡಿಸಿರುವ ಕೋವಿಡ್ ಹಿನ್ನೆಲೆ ಇಂದು ಪಂಜಾಬ್ ಹಾಗೂ ಹರಿಯಾಣ ಸರ್ಕಾರಗಳು 10ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿವೆ. ಆಂತರಿಕ ಮೌಲ್ಯಮಾಪನದ ಮೂಲಕ ಈ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದು ಎಂದು ಸರ್ಕಾರಗಳು ತಿಳಿಸಿವೆ.
In light of the surge in #COVID19 cases,GoI has decided to postpone #NEETPG2021 exam which was earlier scheduled to be held on Apr 18
Next date to be decided laterDecision has been taken keeping wellbeing of our young medical students in mind.@PMOIndia @MoHFW_INDIA #NEETPG
— Dr Harsh Vardhan (@drharshvardhan) April 15, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್