1947ರ ಆ.15ರಂದು ಕೆಂಪುಕೋಟೆ ಮೇಲೆ ಧ್ವಜ ಹಾರಿಲ್ಲ, “ಆ” ತ್ರಿವರ್ಣ ಧ್ವಜ ಎಲ್ಲಿದೆ ?


Team Udayavani, Aug 14, 2019, 4:37 PM IST

Flag-Old

ನವದೆಹಲಿ:ಲಕ್ಷಾಂತರ ಜನರ ತ್ಯಾಗ, ಹೋರಾಟ, ಬಲಿದಾನಗಳ ಮೂಲಕ ಭಾರತ 1947ರ ಆಗಸ್ಟ್ 15ರಂದು ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಕಳಚಿಕೊಂಡು ಸ್ವಾತಂತ್ರ್ಯ ಪಡೆದಿತ್ತು ಎಂಬುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಗುರುವಾರ ದೇಶಾದ್ಯಂತ 73ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ.

73ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಈ ಬಾರಿ ಜಮ್ಮು-ಕಾಶ್ಮೀರ, ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿಯೂ ಭಾರತದ ತ್ರಿವರ್ಣ ಧ್ವಜ ರಾರಾಜಿಸಲಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 72 ವರ್ಷಗಳೇ ಕಳೆದಿದೆ. ಭಾರತದ ಮೊತ್ತ ಮೊದಲ ಪ್ರಧಾನಿ ಜವಾಹರ ಲಾಲ್ ನೆಹರು ಪ್ರಥಮ ಬಾರಿಗೆ ಧ್ವಜಾರೋಹಣ ನೆರವೇರಿಸಿದ್ದು ಎಲ್ಲಿ ಎಂಬುದು ಬಹುತೇಕರಿಗೆ ತಿಳಿದಿರದ ವಿಷಯವಾಗಿದೆ!

1947ರ ಆಗಸ್ಟ್ 14, 15ರಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿತ್ತೇ?

1947ರ ಆಗಸ್ಟ್ 14ರಂದು ಮಧ್ಯರಾತ್ರಿ ಭಾರತ ಸ್ವತಂತ್ರಗೊಂಡಿತ್ತು. ಪಂಡಿತ್ ಜವಾಹರಲಾಲ್ ನೆಹರು ಅವರು ದೇಶದ ಪ್ರಥಮ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಅಂದು ನೆಹರು ಮೊತ್ತ ಮೊದಲು ತ್ರಿವರ್ಣ ಧ್ವಜ ಹಾರಿಸಿದ್ದು ಸಂಸತ್ ನ ಸೆಂಟ್ರಲ್ ಹಾಲ್ ನಲ್ಲಿ. ಈ ಸಂದರ್ಭದಲ್ಲಿ ಲಾರ್ಡ್ ಮೌಂಟ್ ಬ್ಯಾಟನ್ ಕೂಡಾ ಹಾಜರಿದ್ದರು.

ಕುತೂಹಲಕಾರಿ ವಿಷಯ ಏನೆಂದರೆ 1947ರ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದ ಸಂಭ್ರಮ ಕೆಂಪುಕೋಟೆಯಲ್ಲಿ ನಡೆದಿರಲಿಲ್ಲ! ಆಗಸ್ಟ್ 15ರಂದು ಇಂಡಿಯಾ ಗೇಟ್ ಬಳಿ ಸಾವಿರಾರು ಜನರು ಈ ಅಮೃತ ಗಳಿಗೆಗೆ ಸಾಕ್ಷಿಯಾಗಿದ್ದರು. ಅದೇನೆಂದರೆ ಪ್ರಧಾನಿ ಜವಾಹರಲಾಲ್ ನೆಹರು, ಭಾರತದ ಕೊನೆಯ ವೈಸರಾಯ್ ಲಾರ್ಡ್ ಮೌಂಟ್ ಬ್ಯಾಟನ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅನೇಕ ಗಣ್ಯರ ಸಮ್ಮುಖದಲ್ಲಿ ಬೆಳಗ್ಗೆ 8.30ಕ್ಕೆ ಭಾರತದ ರಾಷ್ಟ್ರಧ್ವಜ ಹಾಗೂ ಅದರ ಕೆಳಗೆ ಯೂನಿಯನ್ ಜಾಕ್(ಬ್ರಿಟನ್ ಧ್ವಜ) ಜೊತೆ ಧ್ವಜಾರೋಹಣ ನೆರವೇರಿಸಲಾಗಿತ್ತು ಎಂದು ಲೈವ್ ಮಿಂಟ್ ವರದಿ ತಿಳಿಸಿದೆ. ಆಗಸ್ಟ್ 16ರ ಬೆಳಗ್ಗೆ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ರಾರಾಜಿಸಿತ್ತು ಎಂಬುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.

ಆಗಸ್ಟ್ 14ರ ಮಧ್ಯರಾತ್ರಿ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಜವಾಹರಲಾಲ್ ನೆಹರು ಅಂದು ದೇಶದ ಜನತೆಯನ್ನು ಉದ್ದೇಶಿಸಿ “ಟ್ರಸ್ಟ್ ವಿಥ್ ಡೆಸ್ಟಿನಿ” ಎಂಬ ಜನಪ್ರಿಯ ಭಾಷಣ ಮಾಡಿದ್ದರು.

ಮೊತ್ತ ಮೊದಲು ಹಾರಿದ್ದ ಧ್ವಜ ಎಲ್ಲಿದೆ ಎಂಬುದೇ ಯಕ್ಷಪ್ರಶ್ನೆ!

ದೇಶಕ್ಕೆ ಸ್ವಾತಂತ್ರ್ಯ ಬಂದು 72ವರ್ಷಗಳೇ ಸಂದು ಹೋಗಿದೆ. ಆದರೆ 1947ರ ಆಗಸ್ಟ್ 15, 16ರಂದು ರಾರಾಜಿಸಿದ್ದ ತ್ರಿವರ್ಣ ಧ್ವಜ ಎಲ್ಲಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ದಾಖಲೆಯಿಂದ ಲಭ್ಯವಾಗಿಲ್ಲವಂತೆ!

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದ ಅಂದಿನ ತ್ರಿವರ್ಣ ಧ್ವಜಕ್ಕಾಗಿ ಸಾಕಷ್ಟು ಶೋಧ ನಡೆದಿದ್ದರೂ ಸಹ ಅದು ಪತ್ತೆಯಾಗಿಲ್ಲ. ನ್ಯಾಶನಲ್ ಮ್ಯೂಸಿಯಂ, ಕೆಂಪು ಕೋಟೆಯ ಮ್ಯೂಸಿಯಂ, ನೆಹರು ಮೆಮೋರಿಯಲ್, ರಾಷ್ಟ್ರಪತಿ ಭವನ ಮ್ಯೂಸಿಯಂ, ಸಂಸತ್ ಮ್ಯೂಸಿಯಂ ಸೇರಿದಂತೆ ಎಲ್ಲಿಯೂ ಮೊದಲ ಸ್ವಾತಂತ್ರ್ಯೋತ್ಸವ ದಿನ ನೆಹರು ಹಾರಿಸಿದ್ದ ತ್ರಿವರ್ಣ ಧ್ವಜ ಇಂದಿಗೂ ಎಲ್ಲಿದೆ ಎಂಬುದು ಗೊತ್ತಾಗಿಲ್ಲ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.