ಕಾಶ್ಮೀರ ಸಮಸ್ಯೆಗೆ ನೆಹರು ನೇರ ಜವಾಬ್ಧಾರ:ಅಮಿತ್ ಶಾ ತೀವ್ರ ವಾಗ್ಧಾಳಿ
Team Udayavani, Feb 21, 2019, 1:53 PM IST
ರಾಜಾಮಂಡ್ರಿ : ಜವಹಾರ್ ಲಾಲ್ ನೆಹರು ಅವರ ಬದಲಾಗಿ ಸರ್ದಾರ್ ಪಟೇಲ್ ಅವರು ಭಾರತದ ಮೊದಲ ಪ್ರಧಾನ ಮಂತ್ರಿಯಾಗಿದ್ದರೆ ಕಾಶ್ಮೀರ ವಿವಾದಕ್ಕೆ ಆಸ್ಪದ ದೊರಕುತ್ತಿರಲಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುರುವಾರ ಕಿಡಿ ಕಾರಿದ್ದಾರೆ.
ಪುಲ್ವಾಮಾ ದಾಳಿಯ ಕುರಿತಾಗಿ ಮಾತನಾಡಿದ ಶಾ, ಪಾಕಿಸ್ಥಾನ ಕಾಶ್ಮೀರಕ್ಕಾಗಿ ಉಗ್ರವಾದವನ್ನು ಮಾಡುತ್ತಿದೆ. ಈ ಸಮಸ್ಯೆಗೆ ಯಾರಾದರೂ ಜವಾಬ್ಧಾರಾಗಿದ್ದರೆ ಅದು ನೆಹರು. ಸರ್ದಾರ್ ಪಟೇಲ್ ಅವರು ಅಂದು ಪ್ರಧಾನಿಯಾಗಿರುತ್ತಿದ್ದರೆ ಈ ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ.
ಇಡೀ ದೇಶವೇ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರ ಪರವಾಗಿ ನಿಂತಿದ್ದರೆ, ವಿಪಕ್ಷ ಕಾಂಗ್ರೆಸ್ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಮೂಲಕ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಕಿಡಿ ಕಾರಿದರು.
ಪ್ರಧಾನಿ ಪುಲ್ವಮಾ ದಾಳಿ ಬಳಿಕ ಶೂಟಿಂಗ್ನಲ್ಲಿ ನಿರತರಾಗಿದ್ದರು ಎಂದು ಆರೋಪಿಸಿದೆ. ಕಾಂಗ್ರೆಸ್ ಎಷ್ಟು ಆರೋಪ ಮಾಡುತ್ತದೆಯೋ ಅಷ್ಟು ಮಾಡಲಿ ನಾವದನ್ನು ಸ್ವಾಗತಿಸುತ್ತೇವೆ ಎಂದು ಕಿಡಿ ಕಾರಿದರು.
ಪ್ರಧಾನಿ ಮೋದಿ ದಿನದ 18 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ. ಅವರು ದಾಳಿಗೆ ಪ್ರತೀಕಾರ ನೀಡಲು ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ