ನೆರೆ ಸೇನೆ ಆಧುನೀಕರಣ ಅಪಾಯಕಾರಿ
Team Udayavani, Nov 12, 2018, 8:47 AM IST
ಹೊಸದಿಲ್ಲಿ: ಭಾರತದ ಗಡಿ ಭಾಗದಲ್ಲಿ ಸಂಭವಿಸ ಬಹುದಾದ ಯಾವುದೇ ದಾಳಿಯನ್ನೂ ಎದುರಿಸಲು ಭಾರತೀಯ ವಾಯುಪಡೆ ಸಮರ್ಥವಾಗಿದೆ. ಆದರೆ ನೆರೆ ದೇಶಗಳಲ್ಲಿನ ಅಭಿವೃದ್ಧಿ ದರ ಹಾಗೂ ಹೊಸ ಶಸ್ತ್ರಾಸ್ತ್ರಗಳ ಖರೀದಿಯು ಆತಂಕಕಾರಿ ಎಂದು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್. ಧನೋವಾ ಹೇಳಿದ್ದಾರೆ. ಆದರೆ ಇದನ್ನು ಎದುರಿಸಲು ವಾಯು ಪಡೆದ ಸನ್ನದ್ಧವಾಗಿದೆ. ಗಡಿಯಲ್ಲಿ ಎದುರಾಗಬಹು ದಾದ ಯಾವುದೇ ದಾಳಿಯನ್ನೂ ವಾಯು ಪಡೆ ಸಮರ್ಥ ವಾಗಿ ಮಟ್ಟ ಹಾಕಲಿದೆ.
ಸದ್ಯ ಸಮಸ್ಯೆ ಎದುರಾಗುತ್ತಿರುವುದು ವಿವಾದಿತ ಭೂಭಾಗದಲ್ಲಿ ಹಾಗೂ ವಿದೇಶಗಳು ಬೆಂಬಲಿಸುವ ಉಗ್ರರು ಮತ್ತು ಬಾಹ್ಯ ಶಕ್ತಿಗಳಿಂದ ಎಂದು ಧನೋವಾ ಹೇಳಿದ್ದಾರೆ. ಪಾಕಿಸ್ಥಾನ ಮತ್ತು ಚೀನ ಸರಕಾರಗಳು ಹೆಚ್ಚಿನ ಪ್ರಮಾಣದಲ್ಲಿ ರಕ್ಷಣಾ ಆಧುನೀಕರಣಗೊಳಿಸುತ್ತಿರುವುದನ್ನು ಅವರು ಪರೋಕ್ಷವಾಗಿ ಪ್ರಸ್ತಾವಿಸಿದ್ದಾರೆ.
ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು ಗಡಿ ನಿಯಂತ್ರಣ ರೇಖೆಯ ಆಚೆ ಸಕ್ರಿಯವಾಗಿರುವ ಉಗ್ರರ ತರಬೇತಿ ಶಿಬಿರಗಳನ್ನು ನಾಶ ಮಾಡುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ ಅದನ್ನು ಐಎಎಫ್ ಮುಖ್ಯಸ್ಥರು ನಿರಾಕರಿಸಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ