ಹೊಸ ನಕ್ಷೆ ವಿವಾದದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿಗೆ ನೇಪಾಳ ಪ್ರಧಾನಿ ಫೋನ್ ಕರೆ
ಮಾತುಕತೆ ವೇಳೆ ಭಾರತ ಮತ್ತು ನೇಪಾಳದ ಸಂಸ್ಕೃತಿ ಹಾಗೂ ನಾಗರಿಕತೆ ಕುರಿತ ವಿಷಯ ಹಂಚಿಕೊಂಡಿದ್ದರು.
Team Udayavani, Aug 15, 2020, 5:46 PM IST
ನವದೆಹಲಿ: ಭಾರತದ ಹಲವಾರು ಭೂ ಪ್ರದೇಶ ತಮಗೆ ಸೇರಿದ್ದು ಎಂದು ಹೊಸ ನಕ್ಷೆಯನ್ನು ಬಿಡುಗಡೆಗೊಳಿಸುವ ಮೂಲಕ ಕ್ಯಾತೆ ತೆಗೆದಿದ್ದ ನೇಪಾಳ ಇದೀಗ ಮೊದಲ ಬಾರಿಗೆ ಎಂಬಂತೆ ಭಾರತದ 74ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ದೂರವಾಣಿ ಕರೆ ಮಾಡಿ ಮಾತನಾಡಿರುವುದಾಗಿ ವರದಿ ತಿಳಿಸಿದೆ.
ಕರೆ ಮಾಡಿದ್ದ ನೇಪಾಳ ಪ್ರಧಾನಿ, 74ನೇ ಸ್ವಾತಂತ್ರ್ಯೋತ್ಸವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರಿಗೆ ಶುಭ ಕೋರಿರುವುದಾಗಿ ವರದಿ ಹೇಳಿದೆ. ಅಲ್ಲದೇ ಇತ್ತೀಚೆಗೆ ವಿಶ್ವಸಂಸ್ಥೆಯಲ್ಲಿ ನಡೆದ ಚುನಾವಣೆಯಲ್ಲಿ ಭಾರತ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಸ್ಥಾನ ಪಡೆದಿರುವುದಕ್ಕೆ ಅಭಿನಂದನೆ ಸಲ್ಲಿಸಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಉಭಯ ನಾಯಕರು ಪರಸ್ಪರ ಒಗ್ಗಟ್ಟನ್ನು ವ್ಯಕ್ತಪಡಿಸಿದ್ದು, ಇನ್ನು ಮುಂದೆಯೂ ನೇಪಾಳಕ್ಕೆ ಭಾರತದ ಬೆಂಬಲ ಇರಲಿದೆ ಎಂಬುದಾಗಿ ಪ್ರಧಾನಿ ಮೋದಿ ತಿಳಿಸಿರುವುದಾಗಿ ಹೇಳಿದೆ.
ನೇಪಾಳ ಪ್ರಧಾನಿ ಒಲಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಮಾತುಕತೆ ವೇಳೆ ಭಾರತ ಮತ್ತು ನೇಪಾಳದ ಸಂಸ್ಕೃತಿ ಹಾಗೂ ನಾಗರಿಕತೆ ಕುರಿತ ವಿಷಯ ಹಂಚಿಕೊಂಡಿದ್ದರು. ಆದರೆ ಇತ್ತೀಚೆಗಿನ ಗಡಿ ವಿಚಾರದ ಬೆಳವಣಿಗೆ ಕುರಿತಂತೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ