ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರ ವಿರೋಧವಿಲ್ಲ


Team Udayavani, Nov 17, 2017, 6:05 AM IST

Sri-Sri-Ravi-Shankar–800-1.jpg

ಲಕ್ನೋ: “ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿ ಸುವುದಕ್ಕೆ ಮುಸ್ಲಿಮರ ವಿರೋಧವಿಲ್ಲ. ಕೆಲವೊಮ್ಮೆ ಕೆಲವು ಸಮಸ್ಯೆಗಳಿಗೆ ಪರಿಹಾರವೇ ಇಲ್ಲ ಎಂದು ಕಾಣುತ್ತದೆ. ಆದರೆ, ನಮ್ಮ ಜನ, ಯುವಜನತೆ ಮತ್ತು ಎರಡೂ ಸಮುದಾಯಗಳ ನಾಯಕರು ಮನಸ್ಸು ಮಾಡಿದರೆ ಯಾವುದೂ ಅಸಾಧ್ಯವಲ್ಲ.’ಹೀಗೆಂದು ಹೇಳಿರುವುದು ಆರ್ಟ್‌ ಆಫ್ ಲಿವಿಂಗ್‌ನ ಸಂಸ್ಥಾಪಕ, ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್‌ ಗುರೂಜಿ. 

ಹಲವು ವರ್ಷಗಳಿಂದಲೂ ಹಿಂದೂ - ಮುಸ್ಲಿಮರ ನಡುವಿನ ಸಂಘ ರ್ಷದ ಬೆಂಕಿಗೆ ತುಪ್ಪ ಸುರಿಯುತ್ತಾ ಬಂದಿರುವ ಅಯೋಧ್ಯೆ ರಾಮ ಮಂದಿರ ವಿವಾದ ವನ್ನು ಪರಸ್ಪರ ಸಂಧಾನ ಮಾತು ಕತೆಯ ಮೂಲಕ ಬಗೆ ಹರಿಸಲು ಹೊರಟಿ ರುವ ರವಿ ಶಂಕರ್‌ ಗುರೂಜಿ ಗುರುವಾರ ಅಯೋಧ್ಯೆಯಲ್ಲಿ ಆಡಿರುವ ಮಾತಿದು.

ವಿವಿಧ ಧಾರ್ಮಿಕ ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಶ್ರೀ ಶ್ರೀ ಗುರುವಾರ ಮಾತನಾಡಿ, “ಸದ್ಯದ ವಾತಾವರಣವು ಧನಾತ್ಮಕವಾಗಿದೆ. ಜನರು ಈ ವಿವಾದದಿಂದ ಮುಕ್ತರಾಗಲು ಬಯಸುತ್ತಿದ್ದಾರೆ. ಎರಡೂ ಸಮುದಾಯಗಳು ಸದ್ಭಾವನೆಯಿಂದಾಗಿ ಒಂದಾಗಬೇಕಾದ ಅಗತ್ಯವಿದೆ. ಇದು ಸುಲಭದ ಮಾತಲ್ಲ. ಆದರೆ, ಇದರಲ್ಲಿ ನಾವು ಯಶಸ್ವಿಯಾದರೆ ಇಡೀ ಜಗತ್ತಿಗೇ ಮಾದರಿ ಯಾಗುತ್ತೇವೆ. ರಾಜಕೀಯ ಮತ್ತು ಕಾನೂನನ್ನು ಇದರಿಂದ ಹೊರಗಿಡಬೇಕು. ನನ್ನ ಮಾತು ಕೆಲವರಿಗೆ ರುಚಿಸಲಿಕ್ಕಿಲ್ಲ. ಆದರೆ, ಬಹುತೇಕ ಮುಸ್ಲಿಮರು ರಾಮಮಂದಿರ ನಿರ್ಮಾಣ  ವನ್ನು ವಿರೋಧಿಸುತ್ತಿಲ್ಲ’ ಎಂದಿದ್ದಾರೆ.

ಗುರುವಾರ ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ನ್ಯಾಸ್‌ ಮುಖ್ಯಸ್ಥ ನೃತ್ಯ ಗೋಪಾಲ್‌ ದಾಸ್‌, ರಾಮ್‌ವಿಲಾಸ್‌ ವೇದಾಂತಿ, ದಿಗಂಬರ ಅಖಾಡದ ಮಹಾಂತ ಸುರೇಶ್‌ ದಾಸ್‌, ಮಹಾಂತ ಗ್ಯಾನ್‌ದಾಸ್‌, ವಿವಾದದ ಅರ್ಜಿ ದಾರರಾದ ಇಕ್ಬಾಲ್‌ ಅನ್ಸಾರಿ, ಹಾಜಿ ಮೆಹಬೂಬ್‌ ಮತ್ತಿತರರನ್ನು ಗುರೂಜಿ ಭೇಟಿಯಾಗಿದ್ದಾರೆ.

ಬಹಳ ವಿಳಂಬವಾಯ್ತು ಎಂದ ಯೋಗಿ: ಇದೇ ವೇಳೆ, ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, “ರಾಮಮಂದಿರ ವಿವಾದದ ಕುರಿತು ಸಂಧಾನ ಮಾತುಕತೆ ಪ್ರಕ್ರಿಯೆಯು ತುಂಬಾ ವಿಳಂಬ ವಾಯಿತು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ವಿವಾದ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪಿಗೆ ಕಾಯು ವುದೇ ಒಳ್ಳೆಯದು. ಆದರೂ, ಸಂಧಾನಕ್ಕೆ ಯಾರಾದರೂ ಯತ್ನಿಸಿದರೆ ಅದನ್ನು ನಾನು ಸ್ವಾಗತಿಸುತ್ತೇನೆ’ ಎಂದು ಹೇಳಿದ್ದಾರೆ. 

ಬುಧವಾರವಷ್ಟೇ ಶ್ರೀ ಶ್ರೀ ಅವರು ಸಿಎಂ ಯೋಗಿ ಜೊತೆ ಕೆಲಕಾಲ ಮಾತುಕತೆ ನಡೆಸಿದ್ದರು. ಆ ಬಗ್ಗೆ ಪ್ರಸ್ತಾಪಿಸಿದ ಯೋಗಿ, ನಾನು ಆಧ್ಯಾತ್ಮಿಕ ಗುರು ಶ್ರೀ ಶ್ರೀ ಅವರೊಂದಿಗೆ ದೇಗುಲದ ವಿಚಾರವನ್ನು ಮಾತನಾಡಿಲ್ಲ ಎಂದಿದ್ದಾರೆ.

20 ಕೋಟಿ ರೂ. ಆಮಿಷದ ಆರೋಪ!
ಇದೇ ವೇಳೆ, ಪ್ರಕರಣದಿಂದ ಹಿಂದೆ ಸರಿಯಲು ಸುನ್ನಿ ಮುಸ್ಲಿಂ ವಕ್ಫ್ ಬೋರ್ಡ್‌ಗೆ 20 ಕೋಟಿ ರೂ.ಗಳ ಆಮಿಷವೊಡ್ಡಲಾಗಿದೆ ಎಂದು ನಿರ್ಮೋಹಿ ಅಖಾಡದ ಮಹಾಂತ ದಿನೇಂದ್ರ ದಾಸ್‌ ಆರೋಪಿಸಿದ್ದಾರೆ. ಆದರೆ, ವಕ್ಫ್ ಬೋರ್ಡ್‌ನ ಹಾಜಿ ಮೆಹಬೂಬ್‌ ಅವರು ಈ ಆರೋಪವನ್ನು ಅಲ್ಲಗಳೆದಿದ್ದಾರೆ. ಇನ್ನೊಂದೆಡೆ, ರಾಮಮಂದಿರದ ಹೆಸರಲ್ಲಿ ವಿಶ್ವ ಹಿಂದೂ ಪರಿಷತ್‌ 1,400 ಕೋಟಿ ರೂ.ಗಳನ್ನು ಪಡೆದಿದೆ ಎಂದು ಮಹಾಂತ ಶ್ರೀ ಸೀತಾರಾಂ ದಾಸ್‌ ಆರೋಪಿಸಿದ್ದಾರೆ. ಶ್ರೀ ಶ್ರೀ ಅಯೋಧ್ಯೆ ಭೇಟಿಯ ಅವಧಿಯಲ್ಲೇ ಇಂತಹ ಆರೋಪಗಳು ಕೇಳಿಬಂದಿರುವುದು ಅಚ್ಚರಿಗೆ ಕಾರಣವಾಗಿದೆ.

ಅಯೋಧ್ಯೆ ವಿಚಾರದಲ್ಲಿ ಸಂಧಾನಕ್ಕೆ ಹೋಗುವ ಬದಲು ಶ್ರೀ ಶ್ರೀ ಅವರು ಯಮುನಾ ನದಿಯ ಸುಧಾರಣೆಗಾಗಿ ಶ್ರಮಿಸಿದ್ದರೆ ಚೆನ್ನಾಗಿರುತ್ತಿತ್ತು.
– ರಣದೀಪ್‌ ಸುಜೇìವಾಲಾ, ಕಾಂಗ್ರೆಸ್‌ ವಕ್ತಾರ

ಸಂಧಾನ ನಡೆಸಲು ಶ್ರೀ ಶ್ರೀ ರವಿಶಂಕರ್‌ ಯಾರು? ಅವರು ಎನ್‌ಜಿಒ ನಡೆಸಿ ಕೊಂಡು, ವಿದೇಶಿ ದೇಣಿಗೆ ಪಡೆಯುತ್ತಿರಲಿ. ಅವರು ಸಾಕಷ್ಟು ಸಂಪತ್ತು ಮಾಡಿಕೊಂಡಿದ್ದಾರೆ. ತನಿಖೆಯಿಂದ ತಪ್ಪಿಸಿಕೊಳ್ಳಲು ರಾಮಮಂದಿರ ವಿಚಾರ ಕೈಗೆತ್ತಿಕೊಂಡಿದ್ದಾರೆ ಎಂದನಿಸುತ್ತಿದೆ.
– ರಾಮ್‌ ವಿಲಾಸ್‌ ವೇದಾಂತಿ, 
ಬಿಜೆಪಿ ಮಾಜಿ ಸಂಸದ

ಸಂಧಾನ ಮಾತುಕತೆ ಹೆಸರಲ್ಲಿ ತಮಾಷೆ ನಡೆಯುತ್ತಿದೆ. ಶ್ರೀ ಶ್ರೀ ಅವರು ಮೊದಲಿಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು ಹಾಕಿರುವ ದಂಡದ ಮೊತ್ತವನ್ನು ಪಾವತಿಸಲಿ.
– ಅಸಾದುದ್ದೀನ್‌ ಒವೈಸಿ, ಎಐಎಂಐಎಂ ನಾಯಕ

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.