‘ಮುಸ್ಲಿಮರನ್ನು ಪಪ್ಪಿಗೆ ಹೋಲಿಸುವಾತ ಪಿಎಂ ಆದಾನೆಂದು ಭಾವಿಸಿರಲಿಲ್ಲ’


Team Udayavani, Aug 11, 2018, 5:14 PM IST

mani-shanker-aiyer-700.jpg

ಹೊಸದಿಲ್ಲಿ : “ಮುಸ್ಲಿಮರನ್ನು ನಾಯಿ ಮರಿ (puppies) ಗಳಿಗೆ ಹೋಲಿಸುವ ವ್ಯಕ್ತಿಯೊಬ್ಬ ದೇಶದ ಪ್ರಧಾನಿ ಆದಾನು ಎಂದು ನಾನು 2014ಕ್ಕೆ ಮೊದಲು ಯೋಚಿಸಿಯೇ ಇರಲಿಲ್ಲ” ಎಂದು ಅಮಾನತಾಗಿರುವ ಕಾಂಗ್ರೆಸ್‌ ನಾಯಕ ಮಣಿ ಶಂಕರ್‌ ಅಯ್ಯರ್‌ ಹೇಳಿದ್ದಾರೆ. 

ಅಯ್ಯರ್‌ ಅವರ ಈ ವಿವಾದಾತ್ಮಕ ಹೇಳಿಕೆಯನ್ನು ಭಾರತೀಯ ಜನತಾ ಪಕ್ಷ ತೀವ್ರವಾಗಿ ಪ್ರತಿಭಟಿಸುವುದು ಖಚಿತವಿದೆ.

ಅಯ್ಯರ್‌ ಅವರು ರಾಷ್ಟ್ರ ರಾಜಧಾನಿ ದಿಲ್ಲಿಯ ಇಂಡಿಯಾ ಇಂಟರ್‌ನ್ಯಾಶನಲ್‌ ಸೆಂಟರ್‌ನಲ್ಲಿ ಏರ್ಪಟ್ಟಿದ್ದ  “ಅಸಹಿಷ್ಣುತೆಯ ರಾಷ್ಟ್ರೀಯ ಅಭಿಯಾನ ಸಾಕಷ್ಟಾಯಿತು” ಎಂಬ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. 

2002ರಲ್ಲಿ ನಡೆದಿದ್ದ ಗುಜರಾತ್‌ ದೊಂಬಿಯಿಂದ ನಿಮ್ಮ ಮನಸ್ಸಿಗೆ ಘಾಸಿಯಾಯಿತೇ ಎಂದು ನರೇಂದ್ರ ಮೋದಿ ಅವರನ್ನು ಕೇಳಲಾದಾಗ ಅವರು ‘ನಾಯಿ ಮರಿಯೊಂದು ಕಾರಿನಡಿ ಬಿದ್ದು ಸತ್ತರೂ ನಾನು ಅದರ ವೇದನೆಯನ್ನು ಅನುಭವಿಸುತ್ತೇನೆ ಎಂದಿದ್ದರು’ ಎಂಬುದಾಗಿ ಮಣಿ ಶಂಕರ್‌ ಅಯ್ಯರ್‌ ಹೇಳಿದರು. 

ಮೋದಿ ವಿರುದ್ಧದ ವಾಕ್‌ ದಾಳಿಯನ್ನು ಮುಂದುವರಿಸಿ ಮಾತನಾಡಿದ ಅಯ್ಯರ್‌, “ಗುಜರಾತ್‌ ದೊಂಬಿ ನಡೆದು 24 ದಿನಗಳ ವರೆಗೂ ಮೋದಿ ಮುಸ್ಲಿಂ ನಿರಾಶ್ರಿತರ ಶಿಬಿರಗಳ ಬಳಿ ಸುಳಿಯಲಿಲ್ಲ. ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ಬಂದಿದ್ದಾಗಲೇ ಮೋದಿ, ಅಹ್ಮದಾಬಾದಿನ ಶಾ ಆಲಂ ಮಸೀದಿಗೆ ಭೇಟಿ ಕೊಟ್ಟಿದ್ದರು. ಪ್ರಧಾನಿ ಜತೆಗೆ ಹೋಗುವುದು ಅವರಿಗೆ ಶಿಷ್ಟಾಚಾರದ ಅನಿವಾರ್ಯತೆಯಾಗಿತ್ತು. ಇಂತಹ ಒಬ್ಬ ಮನುಷ್ಯ ಮುಂದೆ ದೇಶದ ಪ್ರಧಾನಿ ಆದಾನು ಎಂದು ನಾನು ಎಂದೂ ಭಾವಿಸಿರಲಿಲ್ಲ” ಎಂದು ಹೇಳಿದರು. 

ಕೋಮು ಸಾಮರಸ್ಯಕ್ಕೆ ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರೂ ನೀಡಿದ್ದ ಕಾಣಿಕೆಯನ್ನು ಅಯ್ಯರ್‌ ಈ ಸಂದರ್ಭದಲ್ಲಿ ಕೊಂಡಾಡಿದರು.

”ರಾಷ್ಟ್ರೀಯತೆಯ ನಿಜವಾದ ಪರಿವ್ಯಾಖ್ಯೆಯನ್ನು ನಮಗೆ ಬೋಧಿಸಿದವರೇ ನಮ್ಮ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ; ಬಹುಸಂಖ್ಯಾಕ ಕೋಮುವಾದ, ಅಲ್ಪಸಂಖ್ಯಾಕ ಕೋಮುವಾದಕ್ಕಿಂತ ಘೋರ ಎಂಬುದನ್ನು ನಾನು ಅವರಿಂದ ಅರಿತುಕೊಂಡೆ. ನಾವು ಒಂದು ದೇಶವಾಗಿರಬೇಕಾದರೆ ಜಾತ್ಯತೀತರಾಗಿರುವುದು ಅಗತ್ಯ ಎಂಬುದನ್ನು ನೆಹರೂ ನಮಗೆ ಬೋಧಿಸಿದರು” ಎಂದು ಅಯ್ಯರ್‌ ಹೇಳಿದರು. 

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.