ಮೈಸೂರು, ಬೆಂಗಳೂರಿನಲ್ಲಿ ಹೊಸ ಆಧಾರ್ ಸೇವಾ ಕೇಂದ್ರ
Team Udayavani, Dec 18, 2019, 3:00 AM IST
ನವದೆಹಲಿ: ಕರ್ನಾಟಕದ ಮೈಸೂರು, ಬೆಂಗಳೂರು ಸೇರಿದಂತೆ ದೇಶದ 21 ವಿವಿಧ ಭಾಗಗಳಲ್ಲಿ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಆಧಾರ್ ಸೇವಾ ಕೇಂದ್ರ (ಎಎಸ್ಕೆ) ಸ್ಥಾಪನೆ ಮಾಡಲಿದೆ. ಶೀಘ್ರದಲ್ಲಿಯೇ ಅವು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ. ಇದರ ಜತೆಗೆ ಇನ್ನೂ 93 ಭಾಗಗಳಲ್ಲಿ ಎಎಸ್ಕೆಯನ್ನು ಸ್ಥಾಪನೆ ಮಾಡಲು ಯುಐಡಿಎಐ ಮುಂದಾಗಿದೆ.
ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಬಳಿ ಇರುವ ಪೈ ವಿಸ್ತಾ ಕನ್ವೆನ್ಶನ್ ಸೆಂಟರ್ ಬಳಿ ಒಂದು ಎಎಸ್ಕೆ, ಮೈಸೂರಿನವಿಜಯನಗರ ಮೊದಲ ಹಂತದ ಸಿಸಿಕೆ ಕಾಂಪ್ಲೆಕ್ಸ್ನಲ್ಲಿ ಕೇಂದ್ರ ಸ್ಥಾಪನೆಯಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ. ಪ್ರತಿ ದಿನ 1 ಸಾವಿರ ನೋಂದಣಿ ಮತ್ತು ಅಪ್ಡೇಟ್ ಮಾಡುವ ಸಾಮರ್ಥ್ಯವನ್ನು ಹೊಂದಿವೆ. ವಾರದ ಏಳು ದಿನಗಳೂ ಅವುಗಳು ತೆರೆದಿರುತ್ತವೆ. ಹೊಸ ಆಧಾರ್ ನೋಂದಣಿ, ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇ-ಮೇಲ್, ಹುಟ್ಟಿದ ದಿನಾಂಕ, ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಈ ಕೇಂದ್ರಗಳಲ್ಲಿ ಸಾಧ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?