Ayodhya ನೂತನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ಮಹರ್ಷಿ ವಾಲ್ಮೀಕಿ’ ಹೆಸರಿಡಲು ನಿರ್ಧಾರ
Team Udayavani, Dec 29, 2023, 8:32 AM IST
ಅಯೋಧ್ಯಾ: ಡಿಸೆಂಬರ್ 30 ರಂದು ಉದ್ಘಾಟನೆಗೊಳ್ಳಲಿರುವ ಅಯೋಧ್ಯೆಯ ವಿಮಾನ ನಿಲ್ದಾಣವನ್ನು ‘ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾಧಾಮ’ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಮಾಯಣ ಮಹಾಕಾವ್ಯದ ಕರ್ತೃ ಎಂದು ಕೊಂಡಾಡುವ ಪೌರಾಣಿಕ ಕವಿ ವಾಲ್ಮೀಕಿ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಈ ವಿಮಾನ ನಿಲ್ದಾಣವನ್ನು ಮೊದಲು ‘ಮರ್ಯಾದಾ ಪುರಷೋತ್ತಮ್ ಶ್ರೀ ರಾಮ್ ಅಯೋಧ್ಯೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಕರೆಯಲಾಗುತ್ತಿತ್ತು.
ನಾಳೆ (ಶನಿವಾರ) ಡಿಸೆಂಬರ್ 30 ರಂದು ಹೊಸದಾಗಿ ನಿರ್ಮಿಸಲಾದ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಮಹಾಮಸ್ತಕಾಭಿಷೇಕ ಸಮಾರಂಭವು ಜನವರಿ 22, 2024 ರಂದು ನಡೆಯಲಿದೆ.
ಉದ್ಘಾಟನೆಯ ದಿನದಂದು ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ನಿಂದ ಮೊದಲ ವಿಮಾನಗಳು ಕಾರ್ಯನಿರ್ವಹಿಸಲಿವೆ ಎನ್ನಲಾಗಿದ್ದು. ಎರಡು ವಿಮಾನಯಾನ ಸಂಸ್ಥೆಗಳು ಈಗಾಗಲೇ ದೆಹಲಿ, ಮುಂಬೈ ಮತ್ತು ಅಹಮದಾಬಾದ್ನಿಂದ ಅಯೋಧ್ಯೆಗೆ ವಿಮಾನ ಹಾರಾಟ ನಡೆಸಲಿದೆ ಎನ್ನಲಾಗಿದೆ.
ವಿಮಾನ ನಿಲ್ದಾಣದ ಮೊದಲ ಹಂತದ ನಿರ್ಮಾಣಕ್ಕೆ ಸುಮಾರು 1,450 ಕೋಟಿ ರೂ. ವೆಚ್ಚವಾಗಿದ್ದು, ಸುಮಾರು 6,500 ಚದರ ಮೀಟರ್ಗಳಷ್ಟು ವಿಸ್ತಾರವಾಗಿರುವ ಹೊಸ ಟರ್ಮಿನಲ್ ಕಟ್ಟಡವು 600 ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ವಿನ್ಯಾಸಗೊಳಿಸಲಾಗಿದ್ದು, ವಾರ್ಷಿಕ 10 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ ಎನ್ನಲಾಗಿದೆ.
ಇದನ್ನೂ ಓದಿ: Daily Horoscope: ಪ್ರಾರಂಭದಲ್ಲಿದ್ದ ಧೈರ್ಯ ಕೊಂಚ ಕ್ಷೀಣಿಸಿದರೂ ಕಾರ್ಯದಲ್ಲಿ ಹಿಂದಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್